AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಶಾಸ್ತ್ರಬದ್ಧವಾಗಿ ಗೋಮಾತೆಯ ಅಂತ್ಯಕ್ರಿಯೆ, ಕಣ್ಣೀರು ಹಾಕಿದ ಗ್ರಾಮಸ್ಥರು

ಮಧ್ಯಪ್ರದೇಶದ ಧಾರ್ ಜಿಲ್ಲೆಯ ಬಲೋಡಾ ಗ್ರಾಮದಲ್ಲಿರುವ ಗೋಶಾಲೆಯಲ್ಲಿ ಮೃತ ಪಟ್ಟ ಹಸುವಿಗೆ ಮನುಷ್ಯರಿಗೆ ಮಾಡುವ ರೀತಿಯಲ್ಲೇ ಧಾರ್ಮಿಕ ವಿಧಿವಿಧಾನದ ಮೂಲಕ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆಯನ್ನು ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

Viral Video : ಶಾಸ್ತ್ರಬದ್ಧವಾಗಿ ಗೋಮಾತೆಯ ಅಂತ್ಯಕ್ರಿಯೆ, ಕಣ್ಣೀರು ಹಾಕಿದ ಗ್ರಾಮಸ್ಥರು
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: Jun 22, 2024 | 2:24 PM

Share

ಹಿಂದೂ ಧರ್ಮದಲ್ಲಿ ಗೋವಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ. ಮುಕ್ಕೋಟಿ ದೇವರುಗಳು ನೆಲೆಸಿರುವ ಈ ಗೋವನ್ನು ಕೇವಲ ಪ್ರಾಣಿಯಾಗಿ ನೋಡದೆ, ದೇವರೆಂದು ಪೂಜಿಸುವ ದೇಶ ನಮ್ಮದು. ಮನುಷ್ಯನಿಗೆ ಎರಡನೇ ತಾಯಿಯಾಗಿರುವ ಗೋವಿನಿಂದ ಹಾಲು, ಸಗಣಿ ಹಾಗೂ ಗೋಮೂತ್ರ ಪಡೆಯುತ್ತೇವೆ. ತನ್ನ ಜೀವನವನ್ನೆಲ್ಲ ತನ್ನವರಿಗಾಗಿ ಮೀಸಲಿಡುವ ಹಸುವು ಕೇಳ್ದಿದ್ದನ್ನು ಕೊಡುವ ಕಾಮಧೇನುವೇ ಸರಿ. ಇದೀಗ ಗೋಮಾತೆಯ ಅಂತಿಮ ವಿಧಿ ವಿಧಾನವನ್ನು ಮನುಷ್ಯರಿಗೆ ಮಾಡುವ ರೀತಿಯಲ್ಲೇ ಶಾಸ್ತ್ರಬದ್ಧವಾಗಿ ನೆರವೇರಿಸಲಾಗಿರುವ ವಿಡಿಯೋವೊಂದು ವೈರಲ್ ಆಗಿದೆ.

ಹೌದು, ಮಧ್ಯಪ್ರದೇಶದ ಧಾರ್‌ನ ಬಲೋಡಾ ಗ್ರಾಮದಲ್ಲಿ ಮೃತ ಗೋಮಾತೆಯನ್ನು ಶಾಸ್ತ್ರಬದ್ಧವಾಗಿ ಅಂತ್ಯ ಕ್ರಿಯೆ ಮಾಡಲಾಗಿದ್ದು, ಈ ಹೃದಯಕ್ಕೆ ಹತ್ತಿರವಾಗುವ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ನಿರ್ಮೋಹಿ ಗೋಶಾಲೆಯಲ್ಲಿ ಮೃತ ಪಟ್ಟ ಹಸುವಿಗೆ ಹೂವಿನಿಂದ ಅಲಂಕಾರ ಮಾಡಿ, ಮೆರವಣಿಗೆಯ ಮೂಲಕ ಸ್ಮಶಾನಕ್ಕೆ ಕೊಂಡೊಯ್ದು ಅಂತ್ಯಕ್ರಿಯೆ ಮಾಡಲಾಗಿದೆ. ಪೂಜಾ ಸಂಘವಾನ್ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ಅಂತಿಮಯಾತ್ರೆಯ ವೇಳೆ ಗೋಶಾಲೆಯ ಅಧ್ಯಕ್ಷರು ಮತ್ತು ಇಡೀ ಗ್ರಾಮದ ಗ್ರಾಮಸ್ಥರು ಭಾವುಕರಾಗಿರುವುದನ್ನು ನೋಡಬಹುದು.

ಇದನ್ನೂ ಓದಿ: ಒಂದೇ ಬೈಕ್​​​​ನಲ್ಲಿ ಹದಿನೈದು ಮಕ್ಕಳು, ಇದೇನು ಬೈಕೋ, ಅಲ್ಲ ಪುಷ್ಪಕ ವಿಮಾನವೋ

ವೈರಲ್​​ ವಿಡಿಯೋ:

ಬ್ಯಾಂಡ್ ವಾದ್ಯಗಳೊಂದಿಗೆ ಗೋಮಾತೆಯ ಮೃತ ದೇಹವು ಮೆರವಣಿಗೆಯಲ್ಲಿ ಸಾಗುತ್ತಿದ್ದರೆ, ಇತ್ತ ಗ್ರಾಮಸ್ಥರು ಕಣ್ಣೀರಿನ ಮೂಲಕ ವಿದಾಯ ಕೋರಿದ್ದಾರೆ. ಇ ಈ ವೇಳೆಯಲ್ಲಿ ಮಳೆರಾಯನು ಆಗಮನವಾಗಿದ್ದು, ಈ ಕ್ಷಣವನ್ನು ಮತ್ತಷ್ಟು ಭಾವುಕರಾಗುವಂತೆ ಮಾಡಿದೆ. ಕೊನೆಗೆ ಸ್ಮಶಾನದಲ್ಲಿ ವಿಧಿವಿಧಾನಗಳ ಮೂಲಕ ಮೃತ ದೇಹಕ್ಕೆ ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ವಿಡಿಯೋವು ಈಗಾಗಲೇ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ‘ಗೋಶಾಲೆಯೂ ಮೃತ ಪಟ್ಟ ಗೋವನ್ನು ಸಂಸ್ಕಾರ ಮಾಡಿದ ರೀತಿಯನ್ನು ಸನಾತನ ಧರ್ಮದ ಸೊಬಗು’ ಹೀಗೆ ನಾನಾ ರೀತಿಯ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ