AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಶಾಸ್ತ್ರಬದ್ಧವಾಗಿ ಗೋಮಾತೆಯ ಅಂತ್ಯಕ್ರಿಯೆ, ಕಣ್ಣೀರು ಹಾಕಿದ ಗ್ರಾಮಸ್ಥರು

ಮಧ್ಯಪ್ರದೇಶದ ಧಾರ್ ಜಿಲ್ಲೆಯ ಬಲೋಡಾ ಗ್ರಾಮದಲ್ಲಿರುವ ಗೋಶಾಲೆಯಲ್ಲಿ ಮೃತ ಪಟ್ಟ ಹಸುವಿಗೆ ಮನುಷ್ಯರಿಗೆ ಮಾಡುವ ರೀತಿಯಲ್ಲೇ ಧಾರ್ಮಿಕ ವಿಧಿವಿಧಾನದ ಮೂಲಕ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆಯನ್ನು ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

Viral Video : ಶಾಸ್ತ್ರಬದ್ಧವಾಗಿ ಗೋಮಾತೆಯ ಅಂತ್ಯಕ್ರಿಯೆ, ಕಣ್ಣೀರು ಹಾಕಿದ ಗ್ರಾಮಸ್ಥರು
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: Jun 22, 2024 | 2:24 PM

Share

ಹಿಂದೂ ಧರ್ಮದಲ್ಲಿ ಗೋವಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ. ಮುಕ್ಕೋಟಿ ದೇವರುಗಳು ನೆಲೆಸಿರುವ ಈ ಗೋವನ್ನು ಕೇವಲ ಪ್ರಾಣಿಯಾಗಿ ನೋಡದೆ, ದೇವರೆಂದು ಪೂಜಿಸುವ ದೇಶ ನಮ್ಮದು. ಮನುಷ್ಯನಿಗೆ ಎರಡನೇ ತಾಯಿಯಾಗಿರುವ ಗೋವಿನಿಂದ ಹಾಲು, ಸಗಣಿ ಹಾಗೂ ಗೋಮೂತ್ರ ಪಡೆಯುತ್ತೇವೆ. ತನ್ನ ಜೀವನವನ್ನೆಲ್ಲ ತನ್ನವರಿಗಾಗಿ ಮೀಸಲಿಡುವ ಹಸುವು ಕೇಳ್ದಿದ್ದನ್ನು ಕೊಡುವ ಕಾಮಧೇನುವೇ ಸರಿ. ಇದೀಗ ಗೋಮಾತೆಯ ಅಂತಿಮ ವಿಧಿ ವಿಧಾನವನ್ನು ಮನುಷ್ಯರಿಗೆ ಮಾಡುವ ರೀತಿಯಲ್ಲೇ ಶಾಸ್ತ್ರಬದ್ಧವಾಗಿ ನೆರವೇರಿಸಲಾಗಿರುವ ವಿಡಿಯೋವೊಂದು ವೈರಲ್ ಆಗಿದೆ.

ಹೌದು, ಮಧ್ಯಪ್ರದೇಶದ ಧಾರ್‌ನ ಬಲೋಡಾ ಗ್ರಾಮದಲ್ಲಿ ಮೃತ ಗೋಮಾತೆಯನ್ನು ಶಾಸ್ತ್ರಬದ್ಧವಾಗಿ ಅಂತ್ಯ ಕ್ರಿಯೆ ಮಾಡಲಾಗಿದ್ದು, ಈ ಹೃದಯಕ್ಕೆ ಹತ್ತಿರವಾಗುವ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ನಿರ್ಮೋಹಿ ಗೋಶಾಲೆಯಲ್ಲಿ ಮೃತ ಪಟ್ಟ ಹಸುವಿಗೆ ಹೂವಿನಿಂದ ಅಲಂಕಾರ ಮಾಡಿ, ಮೆರವಣಿಗೆಯ ಮೂಲಕ ಸ್ಮಶಾನಕ್ಕೆ ಕೊಂಡೊಯ್ದು ಅಂತ್ಯಕ್ರಿಯೆ ಮಾಡಲಾಗಿದೆ. ಪೂಜಾ ಸಂಘವಾನ್ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ಅಂತಿಮಯಾತ್ರೆಯ ವೇಳೆ ಗೋಶಾಲೆಯ ಅಧ್ಯಕ್ಷರು ಮತ್ತು ಇಡೀ ಗ್ರಾಮದ ಗ್ರಾಮಸ್ಥರು ಭಾವುಕರಾಗಿರುವುದನ್ನು ನೋಡಬಹುದು.

ಇದನ್ನೂ ಓದಿ: ಒಂದೇ ಬೈಕ್​​​​ನಲ್ಲಿ ಹದಿನೈದು ಮಕ್ಕಳು, ಇದೇನು ಬೈಕೋ, ಅಲ್ಲ ಪುಷ್ಪಕ ವಿಮಾನವೋ

ವೈರಲ್​​ ವಿಡಿಯೋ:

ಬ್ಯಾಂಡ್ ವಾದ್ಯಗಳೊಂದಿಗೆ ಗೋಮಾತೆಯ ಮೃತ ದೇಹವು ಮೆರವಣಿಗೆಯಲ್ಲಿ ಸಾಗುತ್ತಿದ್ದರೆ, ಇತ್ತ ಗ್ರಾಮಸ್ಥರು ಕಣ್ಣೀರಿನ ಮೂಲಕ ವಿದಾಯ ಕೋರಿದ್ದಾರೆ. ಇ ಈ ವೇಳೆಯಲ್ಲಿ ಮಳೆರಾಯನು ಆಗಮನವಾಗಿದ್ದು, ಈ ಕ್ಷಣವನ್ನು ಮತ್ತಷ್ಟು ಭಾವುಕರಾಗುವಂತೆ ಮಾಡಿದೆ. ಕೊನೆಗೆ ಸ್ಮಶಾನದಲ್ಲಿ ವಿಧಿವಿಧಾನಗಳ ಮೂಲಕ ಮೃತ ದೇಹಕ್ಕೆ ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ವಿಡಿಯೋವು ಈಗಾಗಲೇ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ‘ಗೋಶಾಲೆಯೂ ಮೃತ ಪಟ್ಟ ಗೋವನ್ನು ಸಂಸ್ಕಾರ ಮಾಡಿದ ರೀತಿಯನ್ನು ಸನಾತನ ಧರ್ಮದ ಸೊಬಗು’ ಹೀಗೆ ನಾನಾ ರೀತಿಯ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ