AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ; ಹೊರತೆಗೆಯಲು ವೈದ್ಯರ ಹರಸಾಹಸ

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯನ್ನು ವೈದ್ಯರು ಪರೀಕ್ಷಿಸಿದ ವೇಳೆ ಆತನ ಗುದನಾಳದ ಒಳಗೆ 16 ಇಂಚು ಉದ್ದದ ಸೋರೆಕಾಯಿ ಇರುವುದು ಪತ್ತೆಯಾಗಿದೆ. ಎರಡು ಗಂಟೆಗಳ ಹರಸಾಹಸದ ಬಳಿಕ ಡಾ ನಂದಕಿಶೋರ್ ಜಾಧವ್ ನೇತೃತ್ವದ ಶಸ್ತ್ರಚಿಕಿತ್ಸಾ ತಂಡವು ರೋಗಿಯ ಗುದನಾಳದಿಂದ ಸೋರೆಕಾಯಿಯನ್ನು ಹೊರತೆಗೆದಿದ್ದಾರೆ.

ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ; ಹೊರತೆಗೆಯಲು ವೈದ್ಯರ ಹರಸಾಹಸ
ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ
ಅಕ್ಷತಾ ವರ್ಕಾಡಿ
|

Updated on: Jul 25, 2024 | 5:35 PM

Share

ಮಧ್ಯಪ್ರದೇಶ: ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ಸೇರಿದ್ದ ವ್ಯಕ್ತಿಯನ್ನು ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ಆತನ ಗುದನಾಳದ ಒಳಗೆ 16 ಇಂಚು ಉದ್ದದ ಸೋರೆಕಾಯಿ ಇರುವುದು ಪತ್ತೆಯಾಗಿದೆ. ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರ ತಂಡ ಸೋರೆಕಾಯಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ.

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಜುಲೈ 21 ರಂದು ಶಸ್ತ್ರಚಿಕಿತ್ಸೆ ನಡೆದಿದ್ದು, ರೋಗಿ ಈಗ ಅಪಾಯದಿಂದ ಪಾರಾಗಿ, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವರದಿಯಾಗಿದೆ. ಡಾ ನಂದಕಿಶೋರ್ ಜಾತವ್ ನೇತೃತ್ವದ ಶಸ್ತ್ರಚಿಕಿತ್ಸಾ ತಂಡವು ರೋಗಿಯ ಗುದನಾಳದಿಂದ ಸೋರೆಕಾಯಿಯನ್ನು ಹೊರತೆಗೆದಿದ್ದಾರೆ. ಸೋರೆಕಾಯಿಯ ಈ ವ್ಯಕ್ತಿಯ ದೇಹವನ್ನು ಹೇಗೆ ಪ್ರವೇಶಿಸಿತು ಎಂಬುದು ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ; ಸಿಟಿ ಸ್ಕ್ಯಾನ್ ನೋಡಿ ಬೆಚ್ಚಿಬಿದ್ದ ವೈದ್ಯರು

ಶಸ್ತ್ರಚಿಕಿತ್ಸೆಯ ಸಮಯದಲ್ಲಿ, ಸೋರೆಕಾಯಿಯು ರೋಗಿಯ ಆಂತರಿಕ ಪೊರೆಗಳಲ್ಲಿ ಛಿದ್ರವನ್ನು ಉಂಟುಮಾಡಿರುವುದಾಗಿ ಎಂದು ವೈದ್ಯರು ತಿಳಿಸಿದ್ದಾರೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಈತ ಈ ರೀತಿ ಕೃತ್ಯಗೈದಿರಬಹುದು ಎಂದು ಅನುಮಾನ ಉಂಟಾಗಿದೆ. ಆದರೆ ರೋಗಿ ಸ್ವತಃ ಈ ಕೃತ್ಯಗೈದಿರುವುದೇ? ಅಥವಾ ಬಲವಂತವಾಗಿ ಬೇರೆ ಯಾರಾದರೂ ಈ ಕೃತ್ಯಗೈದಿರಬಹುದೇ ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?