AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಣ್ಣೆ ಏಟಲ್ಲಿ ಮೊಬೈಲ್‌ ಟವರ್‌ ಏರಿದ ಕುಡುಕ ಮಹಾಶಯ; ಮುಂದೇನಾಯ್ತ ನೋಡಿ

ಕುಡಿದ ಮತ್ತಿನಲ್ಲಿ ಈ ಕುಡುಕರು ಏನ್‌ ಮಾಡ್ತಾರೆ ಅನ್ನೋದು ಅವರಿಗೆಯೇ ಗೊತ್ತಿರಲ್ಲ. ಹೀಗೆ ಎಣ್ಣೆ ಏಟಲ್ಲಿ ಕುಡುಕ ಮಹಾಶಯರು ಮಾಡುವಂತಹ ಎಡವಟ್ಟುಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಎಣ್ಣೆ ನಶೆಯಲ್ಲಿ ಮೊಬೈಲ್‌ ಟವರ್‌ ಏರಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪೊಲೀಸರು ಬಂದು ಆತನನ್ನು ರಕ್ಷಣೆ ಮಾಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಭಾರೀ ವೈರಲ್‌ ಆಗುತ್ತಿದೆ.

Viral: ಎಣ್ಣೆ ಏಟಲ್ಲಿ ಮೊಬೈಲ್‌ ಟವರ್‌ ಏರಿದ ಕುಡುಕ ಮಹಾಶಯ; ಮುಂದೇನಾಯ್ತ ನೋಡಿ
Madhya Pradesh Drunk Youth Climbs Mobile Tower In Bhopal
ಮಾಲಾಶ್ರೀ ಅಂಚನ್​
| Edited By: |

Updated on: Feb 02, 2025 | 10:06 AM

Share

ಈ ಕುಡುಕರಿಗೆ ಕುಡಿದ ಮತ್ತಿನಲ್ಲಿ ತಾವು ಏನು ಮಾಡುತ್ತಿದ್ದೇವೆ ಎಂಬ ಬಗ್ಗೆ ಅವರಿಗೆ ಅರಿವು ಕೂಡಾ ಇರಲ್ಲ. ಹೀಗೆ ಕೆಲವೊಬ್ಬರು ಕಂಠಪೂರ್ತಿ ಕುಡಿದು ಸಿಕ್ಕಸಿಕ್ಕವರ ಮೇಲೆ ಕೈ ಮಾಡಿಯೋ ಅಥವಾ ಬೈದು, ತಮ್ಮ ಜೀವಕ್ಕೆಯೇ ಆಪತ್ತು ತಂದು ಒಂದಷ್ಟು ಅವಾಂತರಗಳನ್ನು ಸೃಷ್ಟಿ ಮಾಡುತ್ತಿರುತ್ತಾರೆ. ಕುಡುಕ ಮಹಾಶಯರ ಇಂತಹ ಎಡವಟ್ಟುಗಳ ಸುದ್ದಿ ಈ ಹಿಂದೆಯೂ ವೈರಲ್‌ ಆಗಿದ್ದವು. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಎಣ್ಣೆ ನಶೆಯಲ್ಲಿ ಮೊಬೈಲ್‌ ಟವರ್‌ ಏರಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪೊಲೀಸರು ಬಂದು ಆತನನ್ನು ರಕ್ಷಣೆ ಮಾಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಮೊಬೈಲ್‌ ಟವರ್‌ ಏರಿ ಅವಾಂತರ ಸೃಷ್ಟಿಸಿದ್ದಾನೆ. ವರದಿಗಳ ಪ್ರಕಾರ, ವ್ಯಕ್ತಿಯನ್ನು ಭೋಪಾಲ್‌ನ ಐಶ್‌ಬಾಗ್‌ ಪ್ರದೇಶದ ನಿವಾಸಿ 33 ವರ್ಷದ ವಿವೇಕ್‌ ಠಾಕೂರ್‌ ಎಂದು ಗುರುತಿಸಲಾಗಿದ್ದು, ಈತ ಜನವರಿ 30 ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕುಡಿದ ಅಮಲಿನಲ್ಲಿ ಮೊಬೈಲ್‌ ಟವರ್‌ ಏರಿ ಜನರಲ್ಲಿ ಆತಂಕವನ್ನು ಸೃಷ್ಟಿದ್ದಾನೆ. ಈತನನ್ನು ಗಮನಿಸಿದ ಜನ ತಕ್ಷಣ ಪೊಲೀಸರಿಗೆ ಹಾಗೂ ಪಾಲಿಕೆಯವರಿಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್‌ ತಂಡ ಆ ವ್ಯಕ್ತಿಯನ್ನು ಟವರ್‌ನಿಂದ ಕೆಳಗಿಳಿಸುವ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ಇದೀಗ ಆ ವ್ಯಕ್ತಿ ಪೊಲೀಸ್‌ ಕಸ್ಟಡಿಯಲ್ಲಿದ್ದು, ತನಿಖೆಯ ಆಧಾರದ ಮೇಲೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

View this post on Instagram

A post shared by ND_News_2 (@nd_news_2)

ಇದನ್ನೂ ಓದಿ: ಹುಲಿಯಂತೆ ಕಾಣಲು ನಾಯಿಗಳಿಗೆ ಬಣ್ಣ ಬಳಿದ ಚೀನಾದ ಮೃಗಾಲಯ; ವಿಡಿಯೋ ವೈರಲ್‌

ವಿಜಯ್‌ ಪ್ರತಾಪ್‌ ಸಿಂಗ್‌ (vijaypsbaghel) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಕುಡುಕನೊಬ್ಬ ಮೊಬೈಲ್‌ ಟವರ್‌ನ ತುತ್ತ ತುದಿಯನ್ನು ಏರಿ ಹುಚ್ಚಾಟವನ್ನು ಮೆರೆದಂತಹ ದೃಶ್ಯವನ್ನು ಕಾಣಬಹುದು. ಸದ್ಯ ಪೊಲೀಸರ ನೆರವಿನಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಕುಡುಕ ಮಹಾಶಯನ ಈ ಹುಚ್ಚಾಟಕ್ಕೆ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?