AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹುಲಿ ಘರ್ಜನೆ ಕೇಳಿ ಮರವೇರಿ ಕುಳಿತ ಫಾರೆಸ್ಟ್‌ ಗಾರ್ಡ್; ಮುಂದೇನಾಯ್ತು ನೋಡಿ…

ಕಾಡಿನಲ್ಲಿರುವ ಹುಲಿ, ಸಿಂಹಗಳನ್ನು ಕಂಡ್ರೆ ಯಾರಿಗೆ ತಾನೇ ಭಯವಾಗೊಲ್ಲ ಹೇಳಿ. ಬಹುತೇಕ ಎಲ್ಲರೂ ಹೆದರಿ ಕೂರುತ್ತಾರೆ. ಅದೇ ರೀತಿ ಇಲ್ಲೊಬ್ರು ಫಾರೆಸ್ಟ್‌ ಗಾರ್ಡ್‌ ಕೂಡಾ ಹುಲಿರಾಯನನ್ನು ಕಂಡು ಭಯದಲ್ಲಿ ಮರವೇರಿದ್ದಾರೆ. ಗಸ್ತು ತಿರುಗುವ ವೇಳೆ ಹುಲಿ ಎಂಟ್ರಿ ಕೊಟ್ಟಿದ್ದು, ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ರಕ್ಷಕ ಮರವೇರಿ ಕುಳಿತಿದ್ದಾರೆ. ಈ ಕುರಿತ ವಿಡಿಯೋವೊಂದು ಸಖತ್‌ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 25, 2024 | 2:51 PM

Share

ಹುಲಿ, ಸಿಂಹ, ಆನೆಗಳಂತಹ ದೈತ್ಯ ವನ್ಯ ಜೀವಿಗಳನ್ನು ಕಂಡಾಗ ಅಂತರ ಕಾಯ್ದುಕೊಳ್ಳಬೇಕಾದದ್ದು ಬಹಳ ಮುಖ್ಯ. ಇವುಗಳು ಯಾರಿಗೂ ತೊಂದರೆ ಕೊಡದಿದ್ದರೂ ಕೂಡಾ ಕೆಲವೊಂದು ಬಾರಿ ಕಿರಿಕಿರಿ ಉಂಟಾಗಿ ಹುಚ್ಚಾಟ ಮೆರೆದು ದಾಳಿ ಮಾಡುವ ಸಾಧ್ಯತೆ ಇರುತ್ತದೆ. ಇದೇ ಕಾರಣಕ್ಕೆ ಮುಂಜಾಗ್ರತೆಯ ಕ್ರಮವಾಗಿ ಇಲ್ಲೊಬ್ರು ಅರಣ್ಯ ರಕ್ಷಕ ಗಸ್ತು ತಿರುಗುತ್ತಿದ್ದ ವೇಳೆ ಹುಲಿ ಘರ್ಜನೆಯನ್ನು ಕೇಳಿ ತಕ್ಷಣ ಮರವೇರಿದ್ದಾರೆ. ಮರವೇರುತ್ತಿದ್ದಂತೆ ದೈತ್ಯ ಹುಲಿಯೊಂದು ಅಲ್ಲಿಗೆ ಎಂಟ್ರಿ ಕೊಟ್ಟಿದ್ದು, ಎದೆ ಝಲ್‌ ಎನಿಸುವ ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಈ ಘಟನೆ ಮಧ್ಯಪ್ರದೇಶದ ನರ್ಮದಾಪುರಂನಲ್ಲಿರುವ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದ್ದು, ಫಾರೆಸ್ಟ್‌ ಗಾರ್ಡ್‌ಗಳಿಬ್ಬರು ಗಸ್ತು ತಿರುಗುತ್ತಿರುವ ವೇಳೆ ಹುಲಿಯೊಂದು ಎಂಟ್ರಿಕೊಟ್ಟಿದೆ. ವ್ಯಾಘ್ರದ ಘರ್ಜನೆ ಕೇಳಿಸುತ್ತಿದ್ದಂತೆ ಸುರಕ್ಷತೆಯ ದೃಷ್ಟಿಯಿಂದ ಈ ಇಬ್ಬರೂ ಎತ್ತರದ ಮರವನ್ನು ಏರಿದ್ದಾರೆ. ಹೌದು ಫಾರೆಸ್ಟ್‌ ಗಾರ್ಡ್‌ ಅನೂಲಾಲ್‌ ಭೂಸಾರೆ ಮತ್ತು ಅವರ ಸಹದ್ಯೋಗಿ ದಹಲ್‌ ಸಿಂಗ್‌ ಗಸ್ತು ತಿರುಗುತ್ತಿದ್ದ ವೇಳೆ ಹುಲಿ ಘರ್ಜನೆ ಕೇಳಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ಇಬ್ಬರೂ ತಕ್ಷಣ ಮರವನ್ನೇರಿದ್ದಾರೆ. ಇವರ ಈ ಧೈರ್ಯಕ್ಕೆ ಇದೀಗ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಫಾರೆಸ್ಟ್‌ ಸರ್ವಿಸ್‌ ಆಫೀಸರ್‌ ಸುಧಾ ರೆಮೆನ್‌ (SudhaRamenIFS) ಅವರು ಹಂಚಿಕೊಂಡಿರುವ ವಿಡಿಯೋದಲ್ಲಿ ಅರಣ್ಯ ರಕ್ಷಕ ಅನುಲಾಲ್‌ ಮರವೇರಿ ಕುಳಿತು ಸೆಲ್ಫಿ ವಿಡಿಯೋ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಅವರು ಮರವೇರಿ ಕುಳಿತ ಕೆಲವೇ ಹೊತ್ತಿನಲ್ಲಿ ಹುಲಿಯೊಂದು ಅಲ್ಲಿಗೆ ಎಂಟ್ರಿ ಕೊಟ್ಟಿದ್ದು, ಒಂದ್ಸಲ ಅತ್ತಿಂದಿತ್ತ ಕಣ್ಣಾಡಿಸಿ ಆ ಹುಲಿರಾಯ ಅಲ್ಲಿಂದ ಸೀದಾ ಹೊರಟು ಹೋಗಿದೆ.

ಇದನ್ನೂ ಓದಿ: ನ್ಯಾಚುರಲ್ ಆಗಿ ಸೇಬು ಹಣ್ಣಿನ ಜ್ಯೂಸ್ ನೋಡಿದ್ದೀರಾ?

ನವೆಂಬರ್‌ 24 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಕೆಚ್ಚೆದೆಯ ಅರಣ್ಯ ರಕ್ಷಕರಿಗೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇವರ ಧೈರ್ಯಕ್ಕೆ ಮೆಚ್ಚಲೇಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ