AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಗೆ ಕಿರುಕುಳ; ಪಿಡಬ್ಲ್ಯೂಡಿ ಇಂಜಿನಿಯರ್‌ಗೆ ಬಿತ್ತು ಚಪ್ಪಲಿ ಏಟು

ಉದ್ಯೋಗ ಕೊಡಿಸುವ ನೆಪದಲ್ಲಿ ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಯುವತಿಯೊಬ್ಬಳನ್ನು ತನ್ನ ವಿಶ್ರಾಂತಿ ಗೃಹಕ್ಕೆ ಕರೆಸಿ ಕಿರುಕುಳ ನೀಡಲು ಯತ್ನಿಸಿದ್ದಾನೆ. ಈತನ ನಿಜ ಬಣ್ಣ ತಿಳಿದ ಯುವತಿ ಇಂಜಿನಿಯರ್‌ಗೆ ಸರಿಯಾಗಿ ಚಪ್ಪಲಿ ಏಟು ನೀಡಿದ್ದಾಳೆ. ಈ ಘಟನೆಯ ವಿಡಿಯೋ ದೃಶ್ಯಾವಳಿಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

Viral: ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಗೆ ಕಿರುಕುಳ; ಪಿಡಬ್ಲ್ಯೂಡಿ ಇಂಜಿನಿಯರ್‌ಗೆ ಬಿತ್ತು ಚಪ್ಪಲಿ ಏಟು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 10, 2024 | 10:47 AM

Share

ಬಸ್ಸಿನಲ್ಲಿ, ಟ್ರೈನ್‌ನಲ್ಲಿ, ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳನ್ನು ತನ್ನ ವಿಶ್ರಾಂತಿ ಗೃಹಕ್ಕೆ ಕರೆಸಿ ಆಕೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಇಂಜಿನಿಯರ್‌ಗೆ ಚಪ್ಪಲಿಯಿಂದ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ದೃಶ್ಯಾವಳಿಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಯುವತಿಯ ಈ ಧೈರ್ಯದ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಈ ಘಟನೆ ನಡೆದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ಕಿರುಕುಳ ನೀಡಿದ ಪಿಡಬ್ಲ್ಯೂಡಿ ಸಬ್ ಇಂಜಿನಿಯರ್‌ಗೆ ಯುವತಿಯೊಬ್ಬಳು ಚಪ್ಪಲಿಯಿಂದ ಥಳಿಸಿದ್ದಾಳೆ. ಭಾನುವಾರ (ಡಿಸೆಂಬರ್‌ 8) ಈ ಘಟನೆ ನಡೆದಿದ್ದು, ದಾಬ್ರಾದಲ್ಲಿ ಸಬ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮ್ ಸ್ವರೂಪ್ ಕುಶ್ವಾಹ ಎಂಬಾತ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳನ್ನು ತನ್ನ ವಿಶ್ರಾಂತಿ ಗೃಹಕ್ಕೆ ಕರೆಸಿಕೊಂಡಿದ್ದಾನೆ. ನಂತರ ಆಕೆಗೆ ಕಿರುಕುಳ ನೀಡಲು ಯತ್ನಿಸಿದ್ದು, ಇದರಿಂದ ಕೆರಳಿದ ಯುವತಿ ಆತನಿಗೆ ಹಿಗ್ಗಾಮುಗ್ಗಾ ಚಪ್ಪಲಿ ಏಟು ನೀಡಿದ್ದಾಳೆ.

ಈ ಘಟನೆಯ ಬಗ್ಗೆ ಯುವತಿ ಯಾವುದೇ ದೂರನ್ನು ದಾಖಲಿಸಿಲ್ಲ. ದೂರು ಸ್ವೀಕರಿಸಿದ ನಂತರ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಾಬ್ರಾ ಎಸ್‌ಡಿಒಪಿ ವಿವೇಕ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಫುಡ್‌ ಡೆಲಿವರಿ ಆ್ಯಪ್‌ನ ಬಿಲ್‌ಬೋರ್ಡ್‌ ಬೆನ್ನಿಗೆ ಕಟ್ಟಿ ಬೀದಿಯಲ್ಲಿ ಅಡ್ಡಾಡಿದ ಬೆಂಗಳೂರು ಯುವಕರು

FreePressMP ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ವಿಶ್ರಾಂತಿ ಗೃಹಕ್ಕೆ ಕರೆಸಿಕೊಂಡ ಪಿಡಬ್ಲ್ಯೂಡಿ ಸಬ್ ಇಂಜಿನಿಯರ್‌ಗೆ ಚಪ್ಪಲಿಯಿಂದ ಥಳಿಸುತ್ತಿರುವ ದೃಶ್ಯವನ್ನು ಕಾಣಬಹುದು. ಈತ ಕಿರುಕುಳ ನೀಡಿದ್ದು ಮಾತ್ರವಲ್ಲದೆ ಪೊಲೀಸರಿಗೆ ಕರೆ ಮಾಡುವುದಾಗಿ ಬೆದರಿಕೆ ಹಾಕ್ತೀಯಾ ಅಂತ ಹೇಳುತ್ತಾ ಆತನಿಗೆ ಚಪ್ಪಲಿ ಏಟು ನೀಡಿದ್ದಾಳೆ. ಯುವತಿಯ ಈ ದಿಟ್ಟ ನಡೆಗೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ