AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗಂಡನೊಂದಿಗೆ ಜಗಳವಾಡಿ ಚಲಿಸುತ್ತಿರುವ ರೈಲಿನಿಂದ ಜಿಗಿದ ಮಹಿಳೆ; ಅಘಾತಕಾರಿ ವಿಡಿಯೋ ವೈರಲ್

ಪತಿ-ಪತ್ನಿಯರ ನಡುವಿನ ಜಗಳ ಅತಿರೇಕಕ್ಕೆ ತಿರುಗಿದ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪತಿರಾಯನೊಂದಿಗೆ ಜಗಳವಾಡಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿದ್ದಾಳೆ. ಈ ಅಘಾತಕಾರಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 03, 2024 | 12:51 PM

Share

ಎಲ್ಲರ ಮನೆ ದೋಸೆ ಕೂಡ ತೂತು ಎನ್ನುವಂತೆ ಪ್ರತಿಯೊಂದು ಕುಟುಂಬದಲ್ಲೂ ಸಮಸ್ಯೆಗಳು ಇದ್ದೇ ಇರುತ್ತದೆ. ಹಾಗೆ ಪ್ರತಿಯೊಂದು ಮನೆಯಲ್ಲೂ ಗಂಡ-ಹೆಂಡ್ತಿ ನಡುವೆ ಸಣ್ಣಪುಟ್ಟ ಜಗಳ, ಮನಸ್ತಾಪಗಳು ಇದ್ದೇ ಇರುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಈ ಜಗಳಗಳು ಅತಿರೇಕಕ್ಕೆ ಹೋಗುವುದಿಲ್ಲ ಆದ್ರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ತೀರಾ ಅತಿರೇಕಕ್ಕೆ ಹೋಗುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪತಿರಾಯನೊಂದಿಗೆ ಜಗಳವಾಡಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿದ್ದಾಳೆ. ಈ ಅಘಾತಕಾರಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ಅಘಾತಕಾರಿ ಘಟನೆ ಮಧ್ಯಪ್ರದೇಶ ಸಮೀಪ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಗಂಡನೊಂದಿಗೆ ಜಗಳವಾಡಿ ಇಲ್ಲಿನ ಒರೈ ಮತ್ತು ಅಟ್ಟಾ ನಡುವೆ ಚಲಿಸುವ ಬರೌನಿ ಎಕ್ಸ್‌ಪ್ರೆಸ್‌ ರೈಲಿನಿಂದ ಹಾರಿದ್ದಾಳೆ. ಚಲಿಸುತ್ತಿರುವ ರೈಲಿನಲ್ಲಿಯೇ ಪತಿಪತ್ನಿಯರಿಬ್ಬರು ಜಗಳವಾಡಿದ್ದು, ಮೊದಲೇ ಮದ್ಯ ಸೇವಿಸಿದ್ದ ಆ ಮಹಿಳೆ ಜಗಳದ ನಡುವೆಯೇ ಇದ್ದಕ್ಕಿದ್ದಂತೆ ಬಾಗಿಲ ಬಳಿ ಹೋಗಿ ಅಲ್ಲಿಂದ ಕೆಳಗೆ ಹಾರಿದ್ದಾಳೆ. ಇದಾದ ನಂತರ ರೈಲನ್ನು ನಿಲ್ಲಿಸಲಾಗಿದ್ದು, ಆದರೆ ಮಹಿಳೆಯ ಜೀವ ಉಳಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತ ವಿಡಿಯೋವನ್ನು ಅವಿನಾಶ್ ತಿವಾರಿ (@TaviJournalist) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಜಿಗಿಯುವ ದೃಶ್ಯವನ್ನು ಕಾಣಬಹುದು. ರೈಲಿನಲ್ಲಿಯೇ ಗಂಡ ಹೆಂಡ್ತಿ ಜೋರು ಜೋರಾಗಿ ಜಗಳ ಶುರು ಹಚ್ಚಿಕೊಂಡಿದ್ದು, ಮೊದಲೇ ಮದ್ಯ ಸೇವಿಸಿದ್ದ ಆ ಮಹಿಳೆ ಬಾಗಿಲ ಬಳಿ ಬಂದು ಪ್ರಯಾಣಿಕರು ನೋಡ ನೋಡುತ್ತಿದ್ದಂತೆಯೇ ಆಕೆ ರೈಲಿನಿಂದ ಕೆಳಗೆ ಜಿಗಿದಿದ್ದಾಳೆ.

ಇದನ್ನೂ ಓದಿ: ಏನು ಧೈರ್ಯ ಈಕೆಯದು, ಹಗ್ಗದಂತೆ ಹಾವನ್ನು ಹಿಡಿದ ವಿದ್ಯಾರ್ಥಿನಿ

ನವೆಂಬರ್ 2 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಜಗಳವನ್ನು ಬದಿಗಿಟ್ಟು ಆ ಮೂರ್ಖ ಗಂಡನಿಗೆ ಹೆಂಡತಿಯನ್ನು ರಕ್ಷಿಸಬಹುದಿತ್ತಲ್ವಾ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕ ಬಳಕೆದಾರರು ಈ ದೃಶ್ಯವನ್ನು ಕಂಡು ಫುಲ್ ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ