AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಗಂಡನೊಂದಿಗೆ ಜಗಳವಾಡಿ ಚಲಿಸುತ್ತಿರುವ ರೈಲಿನಿಂದ ಜಿಗಿದ ಮಹಿಳೆ; ಅಘಾತಕಾರಿ ವಿಡಿಯೋ ವೈರಲ್

ಪತಿ-ಪತ್ನಿಯರ ನಡುವಿನ ಜಗಳ ಅತಿರೇಕಕ್ಕೆ ತಿರುಗಿದ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪತಿರಾಯನೊಂದಿಗೆ ಜಗಳವಾಡಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿದ್ದಾಳೆ. ಈ ಅಘಾತಕಾರಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 03, 2024 | 12:51 PM

Share

ಎಲ್ಲರ ಮನೆ ದೋಸೆ ಕೂಡ ತೂತು ಎನ್ನುವಂತೆ ಪ್ರತಿಯೊಂದು ಕುಟುಂಬದಲ್ಲೂ ಸಮಸ್ಯೆಗಳು ಇದ್ದೇ ಇರುತ್ತದೆ. ಹಾಗೆ ಪ್ರತಿಯೊಂದು ಮನೆಯಲ್ಲೂ ಗಂಡ-ಹೆಂಡ್ತಿ ನಡುವೆ ಸಣ್ಣಪುಟ್ಟ ಜಗಳ, ಮನಸ್ತಾಪಗಳು ಇದ್ದೇ ಇರುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಈ ಜಗಳಗಳು ಅತಿರೇಕಕ್ಕೆ ಹೋಗುವುದಿಲ್ಲ ಆದ್ರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ತೀರಾ ಅತಿರೇಕಕ್ಕೆ ಹೋಗುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪತಿರಾಯನೊಂದಿಗೆ ಜಗಳವಾಡಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿದ್ದಾಳೆ. ಈ ಅಘಾತಕಾರಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ಅಘಾತಕಾರಿ ಘಟನೆ ಮಧ್ಯಪ್ರದೇಶ ಸಮೀಪ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಗಂಡನೊಂದಿಗೆ ಜಗಳವಾಡಿ ಇಲ್ಲಿನ ಒರೈ ಮತ್ತು ಅಟ್ಟಾ ನಡುವೆ ಚಲಿಸುವ ಬರೌನಿ ಎಕ್ಸ್‌ಪ್ರೆಸ್‌ ರೈಲಿನಿಂದ ಹಾರಿದ್ದಾಳೆ. ಚಲಿಸುತ್ತಿರುವ ರೈಲಿನಲ್ಲಿಯೇ ಪತಿಪತ್ನಿಯರಿಬ್ಬರು ಜಗಳವಾಡಿದ್ದು, ಮೊದಲೇ ಮದ್ಯ ಸೇವಿಸಿದ್ದ ಆ ಮಹಿಳೆ ಜಗಳದ ನಡುವೆಯೇ ಇದ್ದಕ್ಕಿದ್ದಂತೆ ಬಾಗಿಲ ಬಳಿ ಹೋಗಿ ಅಲ್ಲಿಂದ ಕೆಳಗೆ ಹಾರಿದ್ದಾಳೆ. ಇದಾದ ನಂತರ ರೈಲನ್ನು ನಿಲ್ಲಿಸಲಾಗಿದ್ದು, ಆದರೆ ಮಹಿಳೆಯ ಜೀವ ಉಳಿಸಲಾಗಿದೆಯೇ ಅಥವಾ ಇಲ್ಲವೇ ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತ ವಿಡಿಯೋವನ್ನು ಅವಿನಾಶ್ ತಿವಾರಿ (@TaviJournalist) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಜಿಗಿಯುವ ದೃಶ್ಯವನ್ನು ಕಾಣಬಹುದು. ರೈಲಿನಲ್ಲಿಯೇ ಗಂಡ ಹೆಂಡ್ತಿ ಜೋರು ಜೋರಾಗಿ ಜಗಳ ಶುರು ಹಚ್ಚಿಕೊಂಡಿದ್ದು, ಮೊದಲೇ ಮದ್ಯ ಸೇವಿಸಿದ್ದ ಆ ಮಹಿಳೆ ಬಾಗಿಲ ಬಳಿ ಬಂದು ಪ್ರಯಾಣಿಕರು ನೋಡ ನೋಡುತ್ತಿದ್ದಂತೆಯೇ ಆಕೆ ರೈಲಿನಿಂದ ಕೆಳಗೆ ಜಿಗಿದಿದ್ದಾಳೆ.

ಇದನ್ನೂ ಓದಿ: ಏನು ಧೈರ್ಯ ಈಕೆಯದು, ಹಗ್ಗದಂತೆ ಹಾವನ್ನು ಹಿಡಿದ ವಿದ್ಯಾರ್ಥಿನಿ

ನವೆಂಬರ್ 2 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಜಗಳವನ್ನು ಬದಿಗಿಟ್ಟು ಆ ಮೂರ್ಖ ಗಂಡನಿಗೆ ಹೆಂಡತಿಯನ್ನು ರಕ್ಷಿಸಬಹುದಿತ್ತಲ್ವಾ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕ ಬಳಕೆದಾರರು ಈ ದೃಶ್ಯವನ್ನು ಕಂಡು ಫುಲ್ ಶಾಕ್ ಆಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!