Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದೆಲ್ಲಾ ನನ್ ಗರ್ಲ್‌ಫ್ರೆಂಡ್‌ ಐಡಿಯಾ; ಕುಂಭಮೇಳದಲ್ಲಿ ಬೇವಿನ ಕಡ್ಡಿ ಮಾರಿ ಒಂದು ವಾರದಲ್ಲಿ 40,000 ಗಳಿಸಿದ ಯುವಕ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದೀಗ ಇಲ್ಲೊಂದು ವೈರಲ್‌ ಆಗಿದ್ದು, ಯುವಕನೊಬ್ಬ ಒಂದು ರೂಪಾಯಿ ಹೂಡಿಕೆಯಿಲ್ಲದೆ ಹಲ್ಲುಜ್ಜುವ ಬೇವಿನ ಕಡ್ಡಿ ಮಾರಾಟ ಮಾಡಿ ಕೇವಲ ಒಂದು ವಾರದಲ್ಲಿ ಬರೋಬ್ಬರಿ 40 ಸಾವಿರ ರೂ. ಗಳಿಸಿದ್ದಾನೆ. ಇದೆಲ್ಲಾ ನನ್ನ ಗರ್ಲ್‌ಫ್ರೆಂಡ್‌ ಐಡಿಯಾ, ಈ ಯಶಸ್ಸಿಗೆ ಆಕೆಯೇ ಕಾರಣ ಎಂದು ಹೇಳಿಕೊಂಡಿದ್ದು, ಯುವಕನ ಈ ಮಾತಿಗೆ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ.

Viral: ಇದೆಲ್ಲಾ ನನ್ ಗರ್ಲ್‌ಫ್ರೆಂಡ್‌ ಐಡಿಯಾ; ಕುಂಭಮೇಳದಲ್ಲಿ ಬೇವಿನ ಕಡ್ಡಿ ಮಾರಿ ಒಂದು ವಾರದಲ್ಲಿ 40,000 ಗಳಿಸಿದ ಯುವಕ
ವೈರಕ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 01, 2025 | 5:11 PM

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾದ ಮಹಾಕುಂಭಮೇಳ ನಡಿತಿದೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳು ಸಂಗಮಿಸುವ ಈ ಪವಿತ್ರ ಸ್ಥಳದಲ್ಲಿ ತೀರ್ಥ ಸ್ನಾನ ಮಾಡಲು ಪ್ರತಿನಿತ್ಯ ಲಕ್ಷಾಂತರ ಭಕ್ತರು, ಯಾತ್ರಿಕರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಕೋಟ್ಯಾಂತ ಭಕ್ತರ ಆಗಮನದಿಂದ ಪ್ರಯಾಗ್‌ರಾಜ್‌ ವ್ಯಾಪಾರ ಕೇಂದ್ರವಾಗಿ ಬದಲಾಗಿದ್ದು, ಟೀ, ತಿಂಡಿ ತಿನಿಸು, ಹಾರಗಳು ಇತ್ಯಾದಿಗಳನ್ನು ಮಾರಾಟ ಮಾಡುವ ಮೂಲಕ ಹಲವರು ಹಣ ಸಂಪಾದನೆ ಮಾಡುತ್ತಿದ್ದಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಒಂದು ರೂಪಾಯಿ ಹೂಡಿಕೆಯಿಲ್ಲದೆ ಕುಂಭಮೇಳದಲ್ಲಿ ಹಲ್ಲುಜ್ಜುವ ಬೇವಿನ ಕಡ್ಡಿ ಮಾರಾಟ ಮಾಡಿ ಕೇವಲ ಒಂದು ವಾರದಲ್ಲಿ ಬರೋಬ್ಬರಿ 40 ಸಾವಿರ ರೂ. ಗಳಿಸಿದ್ದಾನೆ. ಇದೆಲ್ಲಾ ನನ್ನ ಗರ್ಲ್‌ಫ್ರೆಂಡ್‌ ಐಡಿಯಾ, ಈ ಯಶಸ್ಸಿಗೆ ಆಕೆಯೇ ಕಾರಣ ಎಂದು ಹೇಳಿಕೊಂಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಯುವಕನೊಬ್ಬ ಮಹಾಕುಂಭಮೇಳದಲ್ಲಿ ಒಂದು ರೂಪಾಯಿ ಹೂಡಿಕೆ ಮಾಡದೆ ಹಲ್ಲುಜ್ಜುವ ಬೇವಿನ ಕಡ್ಡಿಯನ್ನು ಮಾರಾಟ ಮಾಡುವ ಮೂಲಕ ಕೇವಲ ಒಂದು ವಾರದಲ್ಲಿ 40 ಸಾವಿರ ರೂ. ಹಣವನ್ನು ಗಳಿಸಿದ್ದಾನೆ. ಇದೆಲ್ಲಾ ನನ್ನ ಗರ್ಲ್‌ಫ್ರೆಂಡ್‌ ಐಡಿಯಾ, ಆಕೆ ಕೊಟ್ಟ ಸಲಹೆಯಿಂದ ನಾನು ಇಷ್ಟು ಹಣ ಸಂಪಾದನೆ ಮಾಡಲು ಸಾಧ್ಯವಾಯಿತು ಎಂದು ಹೇಳಿದ್ದಾನೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು ಆದರ್ಶ್‌ ತಿವಾರಿ (adarshtiwari20244) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಯುವಕ ಹಲ್ಲುಜ್ಜುವ ಬೇವಿನ ಕಡ್ಡಿ ಮಾರಿ 30 ರಿಂದ 40 ಸಾವಿರ ರೂಪಾಯಿ ಗಳಿಸಿರುವುದಾಗಿ ಹೇಳುತ್ತಿರುವ ದೃಶ್ಯವನ್ನು ಕಾಣಬಹುದು. ಒಂದು ರೂಪಾಯಿ ಬಂಡವಾಳ ಹಾಕದೆ ನೀನು ಹಣ ಸಂಪಾದನೆ ಮಾಡಬಹುದೆಂದು ಗರ್ಲ್‌ಫ್ರೆಂಡ್‌ ಕೊಟ್ಟ ಐಡಿಯಾವಿದು ಎಂದು ಹೇಳಿದ್ದಾನೆ.

ಇದನ್ನೂ ಓದಿ: ಹುಲಿಯಂತೆ ಕಾಣಲು ನಾಯಿಗಳಿಗೆ ಬಣ್ಣ ಬಳಿದ ಚೀನಾದ ಮೃಗಾಲಯ; ವಿಡಿಯೋ ವೈರಲ್‌

ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 10.8 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಂಥಾ ಒಳ್ಳೆಯ ಮನಸ್ಸಿನ ಯುವಕ, ಒಂದು ಕ್ಷಣವೂ ಯೋಚಿಸದೆ ಎಲ್ಲಾ ಕ್ರೆಡಿಟ್‌ ಗೆಳತಿಗೆ ಕೊಟ್ಟʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಗರ್ಲ್‌ಫ್ರೆಂಡ್‌ ನಿಜವಾಗಿಯೂ ಅರ್ಥಶಾಸ್ತ್ರಜ್ಞೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಬಲಿಷ್ಠ ಮಹಿಳೆ ಇದ್ದೇ ಇರುತ್ತಾಳೆʼ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!