AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭ ಮೇಳದಲ್ಲಿ ಸ್ನೇಹಿತರಿಬ್ಬರ ಪುನರ್ಮಿಲನ; 37 ವರ್ಷಗಳ ಬಳಿಕ ಕಾಲೇಜು ಸ್ನೇಹಿತೆಯನ್ನು ಮೀಟ್‌ ಮಾಡಿದ ಅಧಿಕಾರಿ

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ನಮ್ಮ ಮನ ಗೆಲ್ಲುತ್ತವೆ. ಸದ್ಯ ಅಂತಹದ್ದೊಂದು ದೃಶ್ಯ ಇದೀಗ ವೈರಲ್‌ ಆಗಿದ್ದು, ಅಗ್ನಿ ಶಾಮಕ ದಳದ ಅಧಿಕಾರಿಯೊಬ್ಬರು ಬರೋಬ್ಬರಿ 37 ವರ್ಷಗಳ ಬಳಿಕ ತಮ್ಮ ಕಾಲೇಜು ಸ್ನೇಹಿತೆಯನ್ನು ಅನಿರೀಕ್ಷಿತವಾಗಿ ಭೇಟಿಯಾಗಿದ್ದಾರೆ. ಕಾಲೇಜು ಸ್ನೇಹಿತರ ಪುನರ್ಮಿಲನದ ಈ ಹೃದಯಸ್ಪರ್ಶಿ ದೃಶ್ಯ ಎಲ್ಲರ ಮನ ಗೆದ್ದಿದೆ.

ಮಹಾಕುಂಭ ಮೇಳದಲ್ಲಿ ಸ್ನೇಹಿತರಿಬ್ಬರ ಪುನರ್ಮಿಲನ; 37 ವರ್ಷಗಳ ಬಳಿಕ ಕಾಲೇಜು ಸ್ನೇಹಿತೆಯನ್ನು ಮೀಟ್‌ ಮಾಡಿದ ಅಧಿಕಾರಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Feb 27, 2025 | 4:34 PM

Share

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 45 ದಿನಗಳವರೆಗೆ ನಡೆದ ಮಹಾಕುಂಭ ಮೇಳ (maha kumbh) ಮುಕ್ತಾಯಗೊಂಡಿದೆ. ವೈರಲ್‌ ಹುಡುಗಿ ಮೊನಾಲಿಸಾ, ಐಐಟಿ ಬಾಬಾ ಸೇರಿದಂತೆ ಈ ಕುಂಭಮೇಳದಲ್ಲಿ ನಡೆದ ಕೆಲವೊಂದಿಷ್ಟು ಘಟನೆಗಳು ವಿಡಿಯೋ ತುಣುಕುಗಳು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಹೃದಯಸ್ಪರ್ಶಿ ಕಥೆಯ ವಿಡಿಯೋವೊಂದು ಹರಿದಾಡುತ್ತಿದ್ದು, ಅಗ್ನಿ ಶಾಮಕ ದಳದ ಅಧಿಕಾರಿ ಸಂಜೀವ್‌ ಕುಮಾರ್‌ ಸಿಂಗ್‌ ಎಂಬವರು ತಮ್ಮ ಕಾಲೇಜು ಸ್ನೇಹಿತೆಯನ್ನು ಬರೋಬ್ಬರಿ 37 ವರ್ಷಗಳ ಬಳಿಕ ಕುಂಭಮೇಳದಲ್ಲಿ ಭೇಟಿಯಾಗಿದ್ದಾರೆ. ಸ್ನೇಹಿತರಿಬ್ಬರ ಅನಿರೀಕ್ಷಿತ ಪುನರ್ಮಿಲನದ ದೃಶ್ಯವನ್ನು ಕಂಡು ಎಲ್ಲರೂ ಮನಸೋತಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದ ಸಂದರ್ಭದಲ್ಲಿ ಅಗ್ನಿಶಾಮಕ ಅಧಿಕಾರಿ ಸಂಜೀವ್ ಕುಮಾರ್ ಸಿಂಗ್ ಅವರಿಗೆ 37 ವರ್ಷಗಳ ನಂತರ ತಮ್ಮ ಕಾಲೇಜು ಸ್ನೇಹಿತೆ ಹಾಗೂ ಪ್ರಸ್ತುತ ಲಕ್ನೋದ ಕೆಕೆಬಿ ಪದವಿ ಕಾಲೇಜಿನ ಶಿಕ್ಷಿಯಾಗಿರುವ ರಶ್ಮಿ ಗುಪ್ತಾ ಅವರನ್ನು ಭೇಟಿಯಾಗುವ ಭಾಗ್ಯ ಸಿಕ್ಕಿದ್ದು, ಹಲವು ವರ್ಷಗಳ ನಂತರ ಒಬ್ಬರನ್ನೊಬ್ಬರು ನೋಡಿ ಸ್ನೇಹಿತರಿಬ್ಬರು ಭಾವುಕರಾಗಿದ್ದಾರೆ. 1988 ರ ಬ್ಯಾಚ್‌ನ ಸಹಪಾಠಿಗಳಾಗಿದ್ದ ಇವರು ಬರೋಬ್ಬರಿ 37 ವರ್ಷಗಳ ಬಳಿಕ ಮಹಾಕುಂಭಮೇಳದಲ್ಲಿ ಒಬ್ಬರನ್ನೊಬ್ಬರು ಭೇಟಿಯಾಗಿದ್ದಾರೆ.

ಇದನ್ನೂ ಓದಿ
Image
5 ವರ್ಷ ವಯಸ್ಸಿನ ಬಾಲಕನಿಗೆ ಗುದ್ದಿ ಕಾರು ಸಮೇತ ಎಸ್ಕೇಪ್‌ ಆದ ಮಹಿಳೆ
Image
ಪ್ರೇಮಿಗಳ ದಿನದಂದು ಗಂಡ ಕೊಟ್ಟ ಪೋಷೆ ಕಾರು ಬೇಡ ಎಂದ ಪತ್ನಿ
Image
1500 ರೂ. ಪತ್ರದೊಂದಿಗೆ ಕದ್ದ ಬೈಕನ್ನು ಮಾಲೀಕನಿಗೆ ವಾಪಸ್‌ ನೀಡಿದ ವ್ಯಕ್ತಿ
Image
ಪಾಕ್​ ಎದುರು ಭಾರತದ ಜಯವನ್ನು ಸಂಭ್ರಮಿಸುತ್ತಾ ಮದುವೆಯಾದ ಜೋಡಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

Swami_65 ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಹೃದಯಸ್ಪರ್ಶಿ ದೃಶ್ಯವನ್ನು ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಸಂಜೀವ್ ತನ್ನ ಕಾಲೇಜು ಸ್ನೇಹಿತೆಯನ್ನು ಪರಿಚಯಿಸುತ್ತಾ, “ಇವಳು ನನ್ನ ಡಿಗ್ರಿ ಕಾಲೇಜಿನ ಸಹಪಾಠಿ ರಶ್ಮಿ. ನಾವು 1988 ರ ಬ್ಯಾಚ್‌ನ ವಿದ್ಯಾರ್ಥಿಗಳಾಗಿದ್ದೇವೆ ಮತ್ತು 37 ವರ್ಷಗಳ ನಂತರ ಮಹಾ ಕುಂಭದಲ್ಲಿ ಇದೀಗ ಭೇಟಿಯಾದೆವು ಎಂದು ಹೇಳುತ್ತಿರುವ ದೃಶ್ಯವನ್ನು ಕಾಣಬಹುದು. ಜೊತೆಗೆ ತಮಾಷೆಮಾಡುತ್ತಾ ಈ ಇಬ್ಬರೂ ತಮ್ಮ ಕಾಲೇಜು ದಿನಗಳನ್ನು ಸಹ ನೆನೆದಿದ್ದಾರೆ.

ಇದನ್ನೂ ಓದಿ: ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹರಿಸಿ, ಪರಾರಿಯಾದ ಮಹಿಳೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಫೆಬ್ರವರಿ 26 ರಂದು ಶೇರ್‌ ಮಾಡಲಾದ ಈ ವಿಡಿಯೋ ಹಲವಾರು ಕಾಮೆಂಟ್ಸ್‌ಗಳನ್ನು ಸಹ ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಂತಹ ಮಧುರ ಭೇಟಿಯಿದುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಹಳ ಅದ್ಭುತವಾದ ದೃಶ್ಯʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಸ್ನೇಹಿತರ ಈ ಪುನರ್ಮಿಲನದ ದೃಶ್ಯವನ್ನು ಕಂಡು ಭಾವುಕರಾಗಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Thu, 27 February 25

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್