AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಯ್‌ ಪಾಯಿಂಟ್‌ನೊಂದಿಗೆ ಕೆಎಂಎಫ್‌ ಒಪ್ಪಂದ; ಮಹಾ ಕುಂಭಮೇಳದಲ್ಲಿ 1 ಕೋಟಿ ಕಪ್‌ ಚಹಾ ವಿತರಣೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಚಹಾ ವಿತರಿಸಲು ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ ʼಚಾಯ್‌ ಪಾಯಿಂಟ್‌ʼನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಒಪ್ಪಂದದ ಭಾಗವಾಗಿ ಕುಂಭಮೇಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಿದೆ. ಸುಮಾರು 1 ಕೋಟಿ ಕಪ್‌ ಚಹಾ ವಿತರಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್‌ ವಿಶ್ವ ದಾಖಲೆಯನ್ನು ಮಾಡಲಾಗುವುದು ಎಂದು ಕೆಎಮ್‌ಎಫ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಚಾಯ್‌ ಪಾಯಿಂಟ್‌ನೊಂದಿಗೆ ಕೆಎಂಎಫ್‌ ಒಪ್ಪಂದ; ಮಹಾ ಕುಂಭಮೇಳದಲ್ಲಿ 1 ಕೋಟಿ ಕಪ್‌ ಚಹಾ ವಿತರಣೆ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 15, 2025 | 3:26 PM

ಹಿಂದೂ ಧರ್ಮದಲ್ಲಿನ ಅತ್ಯಂತ ದೊಡ್ಡ ಹಾಗೂ ಅತ್ಯಂತ ಪವಿತ್ರ ಉತ್ಸವಗಳಲ್ಲಿ ಒಂದಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಂದು ಆರಂಭವಾಗಿದ್ದು, ಫೆಬ್ರವರಿ 26 ರ ವರೆಗೆ ಅಂದ್ರೆ ಸುಮಾರು 45 ದಿನಗಳ ಕಾಲ ನಡೆಯಲಿದೆ. ಈ ಮಹಾಕುಂಭಮೇಳದಲ್ಲಿ ಚಹಾ ವಿತರಿಸಲು ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ ʼಚಾಯ್‌ ಪಾಯಿಂಟ್‌ʼನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಒಪ್ಪಂದದ ಭಾಗವಾಗಿ ಕುಂಭಮೇಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಿದೆ. ಸುಮಾರು 1 ಕೋಟಿ ಕಪ್‌ ಚಹಾ ವಿತರಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್‌ ವಿಶ್ವ ದಾಖಲೆಯನ್ನು ಮಾಡಲಾಗುವುದು ಎಂದು ಕೆಎಮ್‌ಎಫ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಚಾಯ್‌ ಪಾಯಿಂಟ್‌ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಇದರ ಸಹಯೋಗದೊಂದಿಗೆ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ 1 ಕೋಟಿ ಕಪ್‌ ಚಹಾ ಮಾರಾಟ ಮಾಡಲಿದೆ. ಒಪ್ಪಂದದ ಭಾಗವಾಗಿ ಈಗಾಗಲೇ ಕುಂಭಮೇಳ ನಡೆಯುವ ಸ್ಥಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಈ ಸ್ಟಾಲ್‌ಗಳಲ್ಲಿ ನೀಡಲಾಗುವ ಚಹಾಕ್ಕೆ ನಂದಿನಿ ಹಾಲನ್ನು ಬಳಸಲಾಗುವುದು. ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್‌ ವಿಶ್ವ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆಯಲ್ಲಿ ಕೆಎಂಎಪ್ ಇದೆ. ಅಲ್ಲದೆ ಈ ಚಾಯ್‌ ಪಾಯಿಂಟ್‌ ಮಳಿಗೆಗಳಲ್ಲಿ ನಂದಿನಿ ಬ್ರಾಂಡ್‌ನ ಸಿಹಿ ಉತ್ಪನ್ನ ಮತ್ತು ಮಿಲ್ಕ್‌ ಶೇಕ್‌ ಸೇರಿದಂತೆ ನಂದಿನಿಯ ಇತರೆ ಉತ್ಪನ್ನಗಳು ಲಭ್ಯವಿರಲಿದೆ.

“ಈ ಪಾಲುದಾರಿಕೆಯ ಮೂಲಕ ಉತ್ತರ ಭಾರತದ ಮಾರುಕಟ್ಟೆಗಳಲ್ಲಿ ತನ್ನ ಬ್ರ್ಯಾಂಡ್‌ ವಿಸ್ತರಿಸುವ ಸಲುವಾಗಿ ನಂದಿನಿ ಈ ಹೆಜ್ಜೆ ಇಟ್ಟಿದೆ. ಮತ್ತು ರಾಷ್ಟ್ರವ್ಯಾಪಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಡೈರಿ ಉತ್ಪನ್ನಗಳನ್ನು ತಲುಪಿಸಲುವ ಗುರಿಯನ್ನು ಹೊಂದಿದೆ” ಕೆಎಮ್‌ಫ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ ಯೂಟ್ಯೂಬರನ್ನು ಹೊಡೆದೋಡಿಸಿದ ನಾಗಾ ಸಾಧು; ವಿಡಿಯೋ ವೈರಲ್

“ಮಹಾ ಕುಂಭಮೇಳ ನಡೆಯುತ್ತಿರುವ ಹೊತ್ತಿನಲ್ಲಿ ಕೆಎಂಎಫ್‌ ಚಾಯ್‌ ಪಾಯಿಂಟ್‌ನೊಂದಿಗೆ ಪಾಲುದಾರಿಕೆಯನ್ನು ಹೊಂದಿದ್ದು ಬಹಳ ಸಂತೋಷವನ್ನು ತಂದಿದೆ. ಕುಂಭಮೇಳದಲ್ಲಿ ನಂದಿನಿ ಉತ್ಪನ್ನಗಳನ್ನು ಪ್ರದರ್ಶಿಸುವ ಮೂಲಕ ಗ್ರಾಹಕರಿಗೆ ಹಾಗೂ ಉತ್ತರ ಭಾರತದ ಕಡೆ ನಂದಿನಿ ಉತ್ಪನ್ನಗಳ ಲಭ್ಯತೆಯನ್ನು ಬಲ ಪಡಿಸಲು ಸುವರ್ಣಾವಕಾಶ ಸಿಕ್ಕಿದೆ.” ಎಂದು ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ತಿಳಿಸಿದ್ದಾರೆ. ‌

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Wed, 15 January 25

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ