AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಯ್‌ ಪಾಯಿಂಟ್‌ನೊಂದಿಗೆ ಕೆಎಂಎಫ್‌ ಒಪ್ಪಂದ; ಮಹಾ ಕುಂಭಮೇಳದಲ್ಲಿ 1 ಕೋಟಿ ಕಪ್‌ ಚಹಾ ವಿತರಣೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಚಹಾ ವಿತರಿಸಲು ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ ʼಚಾಯ್‌ ಪಾಯಿಂಟ್‌ʼನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಒಪ್ಪಂದದ ಭಾಗವಾಗಿ ಕುಂಭಮೇಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಿದೆ. ಸುಮಾರು 1 ಕೋಟಿ ಕಪ್‌ ಚಹಾ ವಿತರಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್‌ ವಿಶ್ವ ದಾಖಲೆಯನ್ನು ಮಾಡಲಾಗುವುದು ಎಂದು ಕೆಎಮ್‌ಎಫ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಚಾಯ್‌ ಪಾಯಿಂಟ್‌ನೊಂದಿಗೆ ಕೆಎಂಎಫ್‌ ಒಪ್ಪಂದ; ಮಹಾ ಕುಂಭಮೇಳದಲ್ಲಿ 1 ಕೋಟಿ ಕಪ್‌ ಚಹಾ ವಿತರಣೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Jan 15, 2025 | 3:26 PM

Share

ಹಿಂದೂ ಧರ್ಮದಲ್ಲಿನ ಅತ್ಯಂತ ದೊಡ್ಡ ಹಾಗೂ ಅತ್ಯಂತ ಪವಿತ್ರ ಉತ್ಸವಗಳಲ್ಲಿ ಒಂದಾದ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13 ರಂದು ಆರಂಭವಾಗಿದ್ದು, ಫೆಬ್ರವರಿ 26 ರ ವರೆಗೆ ಅಂದ್ರೆ ಸುಮಾರು 45 ದಿನಗಳ ಕಾಲ ನಡೆಯಲಿದೆ. ಈ ಮಹಾಕುಂಭಮೇಳದಲ್ಲಿ ಚಹಾ ವಿತರಿಸಲು ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ ʼಚಾಯ್‌ ಪಾಯಿಂಟ್‌ʼನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಒಪ್ಪಂದದ ಭಾಗವಾಗಿ ಕುಂಭಮೇಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಿದೆ. ಸುಮಾರು 1 ಕೋಟಿ ಕಪ್‌ ಚಹಾ ವಿತರಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್‌ ವಿಶ್ವ ದಾಖಲೆಯನ್ನು ಮಾಡಲಾಗುವುದು ಎಂದು ಕೆಎಮ್‌ಎಫ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಚಾಯ್‌ ಪಾಯಿಂಟ್‌ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಇದರ ಸಹಯೋಗದೊಂದಿಗೆ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ 1 ಕೋಟಿ ಕಪ್‌ ಚಹಾ ಮಾರಾಟ ಮಾಡಲಿದೆ. ಒಪ್ಪಂದದ ಭಾಗವಾಗಿ ಈಗಾಗಲೇ ಕುಂಭಮೇಳ ನಡೆಯುವ ಸ್ಥಳದಲ್ಲಿ 10 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಈ ಸ್ಟಾಲ್‌ಗಳಲ್ಲಿ ನೀಡಲಾಗುವ ಚಹಾಕ್ಕೆ ನಂದಿನಿ ಹಾಲನ್ನು ಬಳಸಲಾಗುವುದು. ಈ ಮೂಲಕ ಒಂದೇ ಕಾರ್ಯಕ್ರಮದಲ್ಲಿ ಅತೀ ಹೆಚ್ಚು ಚಹಾ ಮಾರಿದ ಗಿನ್ನೆಸ್‌ ವಿಶ್ವ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆಯಲ್ಲಿ ಕೆಎಂಎಪ್ ಇದೆ. ಅಲ್ಲದೆ ಈ ಚಾಯ್‌ ಪಾಯಿಂಟ್‌ ಮಳಿಗೆಗಳಲ್ಲಿ ನಂದಿನಿ ಬ್ರಾಂಡ್‌ನ ಸಿಹಿ ಉತ್ಪನ್ನ ಮತ್ತು ಮಿಲ್ಕ್‌ ಶೇಕ್‌ ಸೇರಿದಂತೆ ನಂದಿನಿಯ ಇತರೆ ಉತ್ಪನ್ನಗಳು ಲಭ್ಯವಿರಲಿದೆ.

“ಈ ಪಾಲುದಾರಿಕೆಯ ಮೂಲಕ ಉತ್ತರ ಭಾರತದ ಮಾರುಕಟ್ಟೆಗಳಲ್ಲಿ ತನ್ನ ಬ್ರ್ಯಾಂಡ್‌ ವಿಸ್ತರಿಸುವ ಸಲುವಾಗಿ ನಂದಿನಿ ಈ ಹೆಜ್ಜೆ ಇಟ್ಟಿದೆ. ಮತ್ತು ರಾಷ್ಟ್ರವ್ಯಾಪಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಡೈರಿ ಉತ್ಪನ್ನಗಳನ್ನು ತಲುಪಿಸಲುವ ಗುರಿಯನ್ನು ಹೊಂದಿದೆ” ಕೆಎಮ್‌ಫ್‌ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ ಯೂಟ್ಯೂಬರನ್ನು ಹೊಡೆದೋಡಿಸಿದ ನಾಗಾ ಸಾಧು; ವಿಡಿಯೋ ವೈರಲ್

“ಮಹಾ ಕುಂಭಮೇಳ ನಡೆಯುತ್ತಿರುವ ಹೊತ್ತಿನಲ್ಲಿ ಕೆಎಂಎಫ್‌ ಚಾಯ್‌ ಪಾಯಿಂಟ್‌ನೊಂದಿಗೆ ಪಾಲುದಾರಿಕೆಯನ್ನು ಹೊಂದಿದ್ದು ಬಹಳ ಸಂತೋಷವನ್ನು ತಂದಿದೆ. ಕುಂಭಮೇಳದಲ್ಲಿ ನಂದಿನಿ ಉತ್ಪನ್ನಗಳನ್ನು ಪ್ರದರ್ಶಿಸುವ ಮೂಲಕ ಗ್ರಾಹಕರಿಗೆ ಹಾಗೂ ಉತ್ತರ ಭಾರತದ ಕಡೆ ನಂದಿನಿ ಉತ್ಪನ್ನಗಳ ಲಭ್ಯತೆಯನ್ನು ಬಲ ಪಡಿಸಲು ಸುವರ್ಣಾವಕಾಶ ಸಿಕ್ಕಿದೆ.” ಎಂದು ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ತಿಳಿಸಿದ್ದಾರೆ. ‌

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Wed, 15 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ