AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ ಯೂಟ್ಯೂಬರನ್ನು ಹೊಡೆದೋಡಿಸಿದ ನಾಗಾ ಸಾಧು; ವಿಡಿಯೋ ವೈರಲ್

ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಪವಿತ್ರ ತ್ರಿವೇಣಿ ಸಂಗಮದಲ್ಲಿ ನಡಿತಿದೆ. ಲಕ್ಷಾಂತರ ನಾಗ ಸಾಧುಗಳು, ಸಂತರು ಪ್ರಯಾಗ್‌ ರಾಜ್‌ಗೆ ಆಗಮಿಸುತ್ತಿದ್ದಾರೆ. ಇದೀಗ ಇಲ್ಲಿನ ವಿಡಿಯೋವೊಂದು ವೈರಲ್‌ ಆಗಿದ್ದು, ಯುಟ್ಯೂಬರ್‌ ಒಬ್ಬ ನಾಗಸಾಧು ಒಬ್ಬರ ಕೈಯಿಂದ ಪೆಟ್ಟು ತಿಂದಿದ್ದಾನೆ. ಹೌದು ಆತನ ಅಸಂಬದ್ಧ ಪ್ರಶ್ನೆಗಳಿಂದ ಕೋಪಗೊಂಡ ಸಾಧು ಆತನನ್ನು ಹೊಡೆದೋಡಿಸಿದ್ದಾರೆ.

Viral: ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ ಯೂಟ್ಯೂಬರನ್ನು ಹೊಡೆದೋಡಿಸಿದ ನಾಗಾ ಸಾಧು; ವಿಡಿಯೋ ವೈರಲ್
Man Asks Questions To Baba, Gets Beaten Up With Tongs,
ಮಾಲಾಶ್ರೀ ಅಂಚನ್​
| Edited By: |

Updated on: Jan 14, 2025 | 3:33 PM

Share

ಹಿಂದೂ ಧರ್ಮದಲ್ಲಿನ ಅತ್ಯಂತ ದೊಡ್ಡ ಹಾಗೂ ಅತ್ಯಂತ ಪವಿತ್ರ ಉತ್ಸವಗಳಲ್ಲಿ ಒಂದಾದ ಮಹಾ ಕುಂಭಮೇಳಕ್ಕೆ ಜನವರಿ 13 ರಂದು ಚಾಲನೆ ಸಿಕ್ಕಿದೆ. ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಈ ಅಪರೂಪದ ಮಹಾ ಕುಂಭಮೇಳಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಲಕ್ಷಾಂತರ ಸಂಖ್ಯೆಯ ನಾಗ ಸಾಧುಗಳು, ಸಾಧು ಸಂತರುಗಳು ಕೂಡಾ ಆಗಮಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಂತೂ ಮಹಾ ಕುಂಭಮೇಳಕ್ಕೆ ಸಂಬಂಧಿಸಿದ ವಿಡಿಯೋಗಳೇ ಹರಿದಾಡುತ್ತಿದೆ. ಅದೇ ರೀತಿ ಇಲ್ಲೊಂದು ಮಹಾಕುಂಭಕ್ಕೆ ಸಂಬಂಧಿಸಿದ ದೃಶ್ಯವೊಂದು ವೈರಲ್‌ ಆಗುತ್ತಿದ್ದು, ನಾಗಾ ಸಾಧುವೊಬ್ಬರು ಯೂಟ್ಯೂಬರನ್ನು ಹೊಡೆದೋಡಿಸಿದ್ದಾರೆ. ಹೌದು ಆತನ ಅಸಂಬದ್ಧ ಪ್ರಶ್ನೆಗಳಿಂದ ಸಿಟ್ಟಿಗೆದ್ದ ಸಾಧು ಆತನನ್ನು ಹೊಡೆದೋಡಿಸಿದ್ದಾರೆ.

ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳದಲ್ಲಿ ಧ್ಯಾನ ಮಾಡುತ್ತಾ ಕುಳಿತಿದ್ದ ನಾಗ ಸಾಧು ಬಳಿ ಬಂದ ಯುಟ್ಯೂಬರ್‌ ಒಬ್ಬ ಮೈಕ್‌ ಹಿಡಿದು ಕೆಲವೊಂದು ಪ್ರಶ್ನೆಗಳನ್ನು ಕೇಳುತ್ತಾನೆ. ಮೊದಲಿಗೆ ಶಾಂತವಾಗಿಯೇ ಆತನ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಂತರ ಆತನ ಅಸಂಬದ್ಧ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ಆತನನ್ನು ಅಲ್ಲಿಂದ ಹೊಡೆದೋಡಿಸಿದ್ದಾರೆ.

ಸುರೇಶ್‌ ಸಿಂಗ್‌ (sureshsinghj) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು “ಮಹಾ ಕುಂಭಮೇಳವನ್ನು ಕವರ್‌ ಮಾಡಲು ಬರುವ ಯೂಟ್ಯೂಬರ್‌ಗಳು ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ; ನಿಮ್ಮ ಚಾನೆಲ್‌ನ ರೀಚ್‌ ಹೆಚ್ಚಿಸಲು ಅನುಪಯುಕ್ತ ಪ್ರಶ್ನೆಗಳನ್ನು ಕೇಳದಿರಿ” ಎಂಬ ತಮಾಷೆಯ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮೈಕ್‌ ಹಿಡಿದು ಬಂದಂತಹ ಯುಟ್ಯೂಬರ್‌ ಬಬ್ಬ ನಾಗ ಸಾಧು ಒಬ್ಬರ ಬಳಿ ಬಾಬಾ ನೀವು ಯಾವಾಗ ಸನ್ಯಾಸಿ ಪಂಥವನ್ನು ಸೇರಿದಿರಿ ಎಂಬ ಪ್ರಶ್ನೆಯನ್ನು ಕೇಳುವ ದೃಶ್ಯವನ್ನು ಕಾಣಬಹುದು. ಈ ಪ್ರಶ್ನೆಗೆ ಶಾಂತ ರೀತಿಯಲ್ಲೇ ಉತ್ತರಿಸಿದ ಸಾಧು, ನಂತರ ಯುಟ್ಯೂಬರ್‌ನ ಅಧಿಕ ಪ್ರಸಂಗ ಪ್ರಶ್ನೆಗಳಿಗೆ ಬೇಸತ್ತು, ಆತನನ್ನು ಅಲ್ಲಿಂದ ಹೊಡೆದೋಡಿಸಿದ್ದಾರೆ.

ಇದನ್ನೂ ಓದಿ: ಪೊಂಗಲ್‌ ಆಚರಣೆಗೆ ಪಂಚೆಯುಟ್ಟು ಸಖತ್‌ ಸ್ಟೆಪ್ಸ್‌ ಹಾಕಿದ ಚೆಸ್‌ ಚಾಂಪಿಯನ್ಸ್;‌ ಮುದ್ದಾದ ವಿಡಿಯೋ ವೈರಲ್‌

ಜನವರಿ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸಾದು ತುಂಬಾ ಒಳ್ಳೆಯ ಕೆಲಸವನ್ನು ಮಾಡಿದ್ದಾರೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೀಗೆ ಸಾಧುಗಳ ಬಗ್ಗೆ ಅಸಂಬಂದ್ಧ ಪ್ರಶ್ನೆಗಳನ್ನು ಕೇಳುವವರಿಗೆ ಹೀಗೆಯೇ ಆಗ್ಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆತನಿಗೆ ಹೀಗೆಯೇ ಆಗ್ಬೇಕಿತ್ತುʼ ಎಂದು ಹೇಳಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ