AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ಲಾಸ್ಟಿಕ್‌ ಚೀಲದಲ್ಲಿ ಮೂತ್ರ ವಿಸರ್ಜನೆ ಮಾಡಿ, ಕೈ ತೊಳೆಯದೆ ಹಣ್ಣು ಮಾರುತ್ತಿದ್ದ ಆಸಾಮಿಯ ಬಂಧನ

ಈ ಹಿಂದೆ ವ್ಯಾಪಾರಿಯೊಬ್ಬ ಎಂಜಲು ಉಗಿದು ಹಣ್ಣು ಮಾರಾಟ ಮಾಡಿದ ಸುದ್ದಿಯೊಂದು ವೈರಲ್‌ ಆಗಿತ್ತು. ಇದೀಗ ಅಂತಹದ್ಧೇ ಘಟನೆಯೊಂದು ನಡೆದಿದ್ದು, ಹಣ್ಣು ವ್ಯಾಪಾರಿಯೊಬ್ಬ ಪ್ಲಾಸ್ಟಿಕ್‌ ಚೀಲದಲ್ಲಿ ಮೂತ್ರ ವಿಸರ್ಜನೆ ಮಾಡಿ ಬಳಿಕ ಕೈ ತೊಳೆಯದೆ, ಅದೇ ಕೊಳಕು ಕೈಯಲ್ಲಿ ಹಣ್ಣು ಮಾರಾಟ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 23, 2024 | 12:29 PM

Share

ನೈರ್ಮಲ್ಯದ ದೃಷ್ಟಿಯಿಂದ ಮೂತ್ರ ವಿಸರ್ಜನೆ ಮಾಡಿದ ಬಳಿಕ ಸರಿಯಾಗಿ ಕೈಗಳನ್ನು ತೊಳೆದುಕೊಳ್ಳಬೇಕು. ಇಲ್ಲಾಂದ್ರೆ ಕೆಟ್ಟ ಬ್ಯಾಕ್ಟೀರಿಯಾಗಳು ನಮ್ಮ ದೇಹ ಸೇರುವ ಸಂಭವವಿರುತ್ತದೆ. ಇದರಿಂದ ರೋಗರುಜಿನಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮೂತ್ರ ವಿಸರ್ಜಿಸಿದ ಬಳಿಕ ಕಡ್ಡಾಯವಾಗಿ ಕೈಗಳನ್ನು ತೊಳೆಯಬೇಕು. ಆದ್ರೆ ಇಲ್ಲೊಬ್ಬ ವ್ಯಾಪಾರಿ ತನ್ನ ತಳ್ಳೋ ಗಾಡಿಯ ಪಕ್ಕದಲ್ಲಿಯೇ ನಿಂತು ಪ್ಲಾಸ್ಟಿಕ್‌ ಚೀಲದಲ್ಲಿ ಮೂತ್ರ ವಿಸರ್ಜನೆ ಮಾಡಿ, ಕೈ ತೊಳೆಯದೆ ಅದೇ ಕೊಳಕು ಕೈಯಲ್ಲಿ ಹಣ್ಣುಗಳನ್ನು ಮಾರಾಟ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದ್ದು, ಇಲ್ಲಿನ ನಿಲ್ಜೆ ಪ್ರದೇಶದಲ್ಲಿ ಹಣ್ಣಿನ ವ್ಯಾಪಾರಿ ಅಲಿ ಖಾನ್‌ (20) ತನ್ನ ತಳ್ಳೋ ಗಾಡಿಯ ಪಕ್ಕದಲ್ಲಿಯೇ ಪ್ಲಾಸ್ಟಿಕ್‌ ಚೀಲವೊಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ಬಳಿಕ ಕೈಗಳನ್ನು ಸ್ವಚ್ಛಗೊಳಿಸದೆ ಅದೇ ಕೊಳಕು ಕೈಗಳಲ್ಲಿ ಹಣ್ಣು ಮಾರಾಟ ಮಾಡಿದ್ದಾನೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ ಭಾನುವಾರ (ಸೆಪ್ಟೆಂಬರ್‌ 22) ಥಾಣೆಯ ಡೊಂಬಿವಲಿಯಲ್ಲಿ ಪೊಲೀಸರು ಅಲಿ ಖಾನ್‌ನನ್ನು ಬಂಧಿಸಿದ್ದಾರೆ. ಅಲಿಖಾನ್‌ ವಿರುದ್ಧ ಸೆಕ್ಷನ್‌ 271, ಸೆಕ್ಷನ್‌ 272 ಮತ್ತು 296 ಅಡಿಯಲ್ಲಿ ಎಫ್.‌ಐ.ಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ