AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಹಾಸಿಗೆ ಹಿಡಿದ ಅಭಿಮಾನಿಯ ಕುಟುಂಬವನ್ನು ದತ್ತು ಪಡೆದ ನಟ ಮಹೇಶ್ ಬಾಬು

ಮಹೇಶ್​​​ ಬಾಬು ಅಭಿಮಾನಿಯಾಗಿರುವ ರಾಜೇಶ್‌ಗೆ ಮೂವರು ಚಿಕ್ಕ ಮಕ್ಕಳಿದ್ದಾರೆ. ಹೀರೋ ಮೇಲಿನ ಅಭಿಮಾನದಿಂದ ಈತ ತನ್ನ ಮಕ್ಕಳಿಗೆ ಅರ್ಜುನ್, ಅತಿಥಿ, ಆಗಡು ಎಂದು ಮಹೇಶ್ ಸಿನಿಮಾಗಳ ಹೆಸರಿಟ್ಟಿದ್ದಾರೆ. ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನಟ ಮಹೇಶ್​ ಬಾಬು ಹೊತ್ತಿದ್ದಾರೆ.

Mahesh Babu: ಹಾಸಿಗೆ ಹಿಡಿದ ಅಭಿಮಾನಿಯ ಕುಟುಂಬವನ್ನು ದತ್ತು ಪಡೆದ ನಟ ಮಹೇಶ್ ಬಾಬು
ಅಭಿಮಾನಿಯ ಕುಟುಂಬವನ್ನು ದತ್ತು ಪಡೆದ ನಟ ಮಹೇಶ್ ಬಾಬು
ಅಕ್ಷತಾ ವರ್ಕಾಡಿ
|

Updated on: Jun 20, 2024 | 10:44 AM

Share

ಕೇವಲ ಸಿನಿಮಾದಲ್ಲಿ ಮಾತ್ರ ಹೀರೋ ಆಗಿರದೇ ನಿಜ ಜೀವನದಲ್ಲೂ ತನ್ನ ಜನಸೇವೆಯ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿರುವ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು, ಇದೀಗ ಮತ್ತೆ ತಮ್ಮ ಜನಸೇವೆಯ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಇತ್ತೀಚಿಗಷ್ಟೇ ಮಹೇಶ್​​ ಬಾಬು ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದ ತನ್ನ ಅಭಿಮಾನಿಯ ಕುಟುಂಬವನ್ನು ದತ್ತು ಪಡೆದು ಬೀದಿಗೆ ಬಿದ್ದಿದ್ದ ಕುಟುಂಬಕ್ಕೆ ಆರ್ಥಿಕವಾಗಿ ಆಧಾರವಾಗಿದ್ದಾರೆ.

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ರಾಜೇಶ್ ಅವರು ಮಹೇಶ್ ಬಾಬು ಅವರ ಕಟ್ಟಾ ಅಭಿಮಾನಿ. ಆದರೆ, ಕೆಲ ದಿನಗಳಿಂದ ರಾಜೇಶ್​​ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲಿ ಹಾಸಿಗೆ ಹಿಡಿದ್ದಿದ್ದರು. ಮನೆಯ ಆಧಾರ ಸ್ಥಂಭವಾಗಿದ್ದ ರಾಜೇಶ್ ಹಾಸಿಗೆ ಹಿಡಿದಿದ್ದರಿಂದ ಆತನ ಕುಟುಂಬ ಆರ್ಥಿಕ ಸಮಸ್ಯೆ ಅನುಭವಿಸಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳ ಮೂಲಕ ಮಹೇಶ್ ಬಾಬು ಅವರ ಗಮನಕ್ಕೆ ಬಂದಿದೆ. ಕೂಡಲೇ ಸ್ಪಂದಿಸಿದ ಅವರು ರಾಜೇಶ್ ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ. ಅಭಿಮಾನಿಯ ಮೂವರು ಮಕ್ಕಳನ್ನು ದತ್ತು ಪಡೆದು ಅವರ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದೀಗ ನಟನ ಸಮಾಜ ಸೇವೆಗೆ ಖ್ಯಾತ ಸಂಗೀತ ನಿರ್ದೇಶಕ ಥಮನ್ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳು ಮಹೇಶ್ ಅವರನ್ನು ದೇವರು ಎಂದು ಕರೆಯುವ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಇದನ್ನೂ ಓದಿ: ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು

ರಾಜೇಶ್‌ಗೆ ಮೂವರು ಚಿಕ್ಕ ಮಕ್ಕಳಿದ್ದಾರೆ. ಮಹೇಶ್ ಅವರ ಮೇಲಿನ ಅಭಿಮಾನದಿಂದ ಈತ ತನ್ನ ಮಕ್ಕಳಿಗೆ ಅರ್ಜುನ್, ಅತಿಥಿ, ಆಗಡು ಎಂದು ಮಹೇಶ್ ಸಿನಿಮಾಗಳ ಹೆಸರಿಟ್ಟಿದ್ದರು. ತಂದೆ ಹಾಸಿಗೆ ಹಿಡಿದ ನಂತರ ಹಿರಿಯ ಮಗ ಅರ್ಜುನ್, ಸ್ಥಳೀಯ ಚಪ್ಪಲಿ ಅಂಗಡಿಯಲ್ಲಿ ಕೆಲಸ ಮಾಡಿ ಮನೆ ಖರ್ಚು ನಿಭಾಯಿಸುತ್ತಿದ್ದ. ಇದೀಗ ಈ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನಟ ಮಹೇಶ್​ ಬಾಬು ಹೊತ್ತಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು