AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್​ ಮೂಲಕ ಬಾಲಿವುಡ್​ ನಟ ಶಾರುಖ್​ ಖಾನ್​ರಂತೆ ಕಾಣಿಸಿಕೊಂಡ ಮೇಕಪ್​ ಆರ್ಟಿಸ್ಟ್​: ವೀಡಿಯೋ ವೈರಲ್​

ದೆಹಲಿ ಮೂಲದ ಮೇಕಪ್​ ಆರ್ಟಿಸ್ಟ್​ ಒಬ್ಬರು ಮೇಕಪ್​ ಮೂಲಕ ತಮ್ಮ ಮುಖವನ್ನು ಬಾಲಿವುಡ್​ ನಟ ಶಾರುಖ್​ ಖಾನ್​ನಂತೆಯೇ ಕಾಣುವಂತೆ ಮಾಡಿಕೊಂಡಿದ್ದಾರೆ. ಇದರ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮೇಕಪ್​ ಮೂಲಕ ಬಾಲಿವುಡ್​ ನಟ ಶಾರುಖ್​ ಖಾನ್​ರಂತೆ ಕಾಣಿಸಿಕೊಂಡ ಮೇಕಪ್​ ಆರ್ಟಿಸ್ಟ್​: ವೀಡಿಯೋ ವೈರಲ್​
ಶಾರುಕ್​ ಖಾನ್​ರಂತೆ ಮೇಕಪ್​ ಮಾಡಿಕೊಂಡ ದೀಕ್ಷಿತಾ
TV9 Web
| Edited By: |

Updated on: Dec 29, 2021 | 3:50 PM

Share

ಮೇಕಪ್​ ಎಂತಹವರನ್ನೂ ಸುಂದರವಾಗಿ ಕಾಣಿಸುವಂತೆ ಮಾಡುತ್ತದೆ. ಅದೇ ರೀತಿ ಇತ್ತೀಚೆಗೆ ಮೇಕಪ್​ ಮೂಲಕ ಬೇರೆಯವರಂತೆ ಕಾಣಿಸಕೊಳ್ಳಲೂ ಸಾಧ್ಯ. ಹೌದು ದೆಹಲಿ ಮೂಲದ ಮೇಕಪ್​ ಆರ್ಟಿಸ್ಟ್​ ಒಬ್ಬರು ಮೇಕಪ್​ ಮೂಲಕ ತಮ್ಮ ಮುಖವನ್ನು ಬಾಲಿವುಡ್​ ನಟ ಶಾರುಖ್​ ಖಾನ್​ರಂತೆಯೇ ಕಾಣುವಂತೆ ಮಾಡಿಕೊಂಡಿದ್ದಾರೆ. ಇದರ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. 

ದೆಹಲಿಯ ದೀಕ್ಷಿತಾ ಎನ್ನುವ ಮೇಕಪ್​ ಆರ್ಟಿಸ್ಟ್ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಇವರು ಶಾರುಖ್​ ಖಾನ್​ ಮಾತ್ರವಲ್ಲ ಈಗಾಗಲೇ ಆಲಿಯಾ ಭಟ್ ​,ರಾಜ್​ಕುಮಾರ್​ ರಾವ್​ ಸೇರಿದಂತೆ ಹಲವು ನಟ, ನಟಿಯರ ಹಾಗೆ ಕಾಣಿಸಿಕೊಳ್ಳುವ  ಮೇಕಪ್ ಮಾಡಿಕೊಂಡು ಅದರ ವೀಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರ ಮೇಕಪ್​ ಟ್ರಾನ್ಸ್ಪಾಮೇಶನ್​ ನಿಜಕ್ಕೂ ನೋಡುಗರನ್ನು ಅಚ್ಚರಿಗೊಳಿಸುತ್ತಿದೆ.

ವೀಡಿಯೋದಲ್ಲಿ ದೀಕ್ಷಿತಾ ಮೊದಲು ಬ್ಲೆಂಡರ್​, ಬ್ರಷ್ ಮತ್ತು ಸ್ಟೀಪ್​ಗಳನ್ನು ತೆಗೆದುಕೊಳ್ಳುತ್ತಾರೆ. ನಂತರ ನಿಧಾನವಾಗಿ ಒಂದೊಂದು ರೀತಿಯ ಕ್ರೀಮ್​, ಕಾಜಲ್​ಗಳನ್ನು ಹಚ್ಚುತ್ತಾರೆ. ಕ್ಷಣ ಮಾತ್ರದಲ್ಲಿ ನಂಬಲಸಾಧ್ಯವಾಗದ ಹಾಗೆ ಶಾರುಖ್​ ಖಾನ್​ ಅವರನ್ನೇ ಹೋಲುವ ಮುಖದೊಂದಿಗೆ ಕ್ಯಾಮರಾ ಮುಂದೆ ನಿಲ್ಲುತ್ತಾರೆ. ದೀಕ್ಷಿತಾ ವೀಡಿಯೋಗೆ ಶಾರುಖ್​ ಖಾನ್​ ಅವರ ಚಮಕ್​ ಚಲ್ಲೋ ಹಾಡನ್ನು ಹಿನ್ನಲೆಯಾಗಿ ಹಾಕಿದ್ದಾರೆ. ವೀಡಿಯೋ ನೋಡದೆ ಕೇವಲ ಫೋಟೋ ನೋಡಿದರೆ ಮೇಕಪ್​ ಮೂಲಕ ಮಾಡಿಕೊಂಡ ರೂಪಾಂತರ ಎಂದು ಹೇಳಲು ಸಾಧ್ಯವಿಲ್ಲ. ಸದ್ಯ ದೀಕ್ಷಿತಾ ಅವರ ಶಾರುಖ್​ ಖಾನ್​​ ರೂಪ  ಸಖತ್​ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವೀಡಿಯೋ  ಒಂದೂವರೆ ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

Viral Video: ನನ್ನನ್ನೂ ವಾಕಿಂಗ್ ಕರೆದುಕೊಂಡು ಹೋಗು; ಕಣ್ಣಲ್ಲೇ ಒಡೆಯನಿಗೆ ಮನವಿ ಮಾಡಿದ ನಾಯಿಯ ವಿಡಿಯೋ ವೈರಲ್

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!