AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ರಜೆ ದಿನ ಕೂಡ ನೆಮ್ಮದಿಯಾಗಿ ಇರೋಕೆ ಬಿಡಲ್ಲ ನಮ್ಮ ಬಾಸ್ : ಈ ಮಹಿಳೆಗೆ ಬಾಸ್ ಇಟ್ಟ ಬೇಡಿಕೆ ನೋಡಿ

ಒಂದೇ ಒಂದು ರಜೆಯಿಲ್ಲದೇ ವಾರಪೂರ್ತಿ ಕೆಲಸ ಮಾಡಲು ಯಾರಿಗೂ ಸಾಧ್ಯವಿಲ್ಲ. ವಾರದ ರಜೆಯಿದ್ದರೂ ವೈಯಕ್ತಿಕ ಕಾರಣಗಳಿಗೆ ಉದ್ಯೋಗಿಗಳು ರಜೆ ಕೇಳುತ್ತಾರೆ. ರಜೆಯ ದಿನವೂ ಈ ಬಾಸ್ ಕಿರಿಕಿರಿ ಮಾಡಿದ್ರೆ ಏನಾಗುತ್ತೆ ಅಲ್ವಾ. ಹೌದು ಇಲ್ಲೊಬ್ಬ ಮಹಿಳೆಯೂ ರಜೆಯಲ್ಲಿದ್ದರೂ ಈ ಬಾಸ್ ಮಾತ್ರ ಆಕೆಯನ್ನು ಪರೀಕ್ಷಿಸಲು ಮುಂದಾಗಿದ್ದಾನೆ. ರಜೆಯಲ್ಲಿದ್ದ ಮಹಿಳೆಗೆ ಆರಾಮದಾಯಕವಾಗಿ ಇರಲು ಬಿಡದೇ ವಿಚಿತ್ರ ಬೇಡಿಕೆಯಿಟ್ಟಿದ್ದಾನೆ. ಮಹಿಳೆಯೂ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ತನ್ನ ಬಾಸ್‌ನ ವಿಚಿತ್ರ ಬೇಡಿಕೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾಳೆ.

Viral : ರಜೆ ದಿನ ಕೂಡ ನೆಮ್ಮದಿಯಾಗಿ ಇರೋಕೆ ಬಿಡಲ್ಲ ನಮ್ಮ ಬಾಸ್ : ಈ ಮಹಿಳೆಗೆ ಬಾಸ್ ಇಟ್ಟ ಬೇಡಿಕೆ ನೋಡಿ
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Jun 29, 2025 | 5:14 PM

Share

ಉದ್ಯೋಗದಲ್ಲಿರುವವರಿಗೆ (employment) ಬಾಸ್‌ನಿಂದ ರಜೆ ಕೇಳುವುದೇ ಕಷ್ಟದ ಕೆಲಸ. ಒಂದು ವೇಳೆ ರಜೆ ಕೊಟ್ಟರೂ ಆ ದಿನದ ಕೆಲಸವನ್ನು ಹಿಂದಿನ ದಿನ ಮುಗಿಸಿ ಕೊಡಲೇಬೇಕು ಎಂದು ಕಂಡೀಷನ್ ಹಾಕುವುದಿದೆ. ಕೆಲವರು ಬಾಸ್ ಬಳಿ ಎಷ್ಟೇ ರಿಕ್ವೆಸ್ಟ್ ಮಾಡಿಕೊಂಡ್ರು ರಜೆ ಸಿಗೋದೇ ಇಲ್ಲ. ಇನ್ನು ರಜೆ ಸಿಕ್ಕರೂ, ರಜೆ ದಿನವೂ ಆಫೀಸಿನಿಂದ ಅಥವಾ ಬಾಸ್‌ನಿಂದ ಪದೇ ಪದೇ ಕಾಲ್ ಮೆಸೇಜ್ ಬಂದರೆ ಪಿತ್ತ ನೆತ್ತಿಗೆ ಏರುತ್ತದೆ. ರಜೆ ದಿನ ಕೂಡ ನೆಮ್ಮದಿಯಿಂದ ಇರೋಕೆ ಬಿಡಲ್ಲ ಎಂದು ಮನಸ್ಸಿನೊಳಗೆ ಬೈಯುತ್ತೇವೆ. ಆದರೆ ಮಲೇಷಿಯಾದ ಮಹಿಳೆಗೆ (Malaysian women) ಕೂಡ ರಜಾದಿನ ತನ್ನ ಬಾಸ್‌ ನೆಮ್ಮದಿಯಿಂದ ಇರೋಕೆ ಬಿಟ್ಟಿಲ್ಲವಂತೆ. ರಜೆಯ ದಿನವೂ ರಜೆಯಲ್ಲಿದ್ದಾಳೆಯೋ ಇಲ್ಲವೋ ಎನ್ನುವುದನ್ನು ಪರೀಕ್ಷಿಸಲು ಈ ಮಹಿಳೆಯ ಬಳಿ ಲೈವ್ ಲೊಕೇಶನ್ (live location) ಕಳುಹಿಸುವಂತೆ ಬೇಡಿಕೆಯಿಟ್ಟಿದ್ದಾನೆ. ಈ ಬಗ್ಗೆ ಮಹಿಳೆಯೂ ಪೋಸ್ಟ್ ಮಾಡಿದ್ದು, ತನ್ನ ಬಾಸ್ ಎಷ್ಟು ಕಿರಿಕಿರಿ ಕೊಡುತ್ತಾರೆ ಎಂದು ಹೇಳಿಕೊಂಡಿದ್ದಾಳೆ.

@nnadrahhh ಹೆಸರಿನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಮಹಿಳೆ ಪೋಸ್ಟ್ ಮಾಡಿದ್ದು, ಕಂಪನಿಯ ಹೆಸರನ್ನು ಬಹಿರಂಗ ಪಡಿಸದೇ, ತಾನು ರಜೆಯಲ್ಲಿದ್ದಾಗ ತನ್ನ ರಜಾದಿನವನ್ನು ಕಳೆಯಲು ಮಲೇಷಿಯಾ ದ್ವೀಪಕ್ಕೆ ಹೋಗಿದ್ದೇನೆ. ಈ ವೇಳೆಯಲ್ಲಿ ಬಾಸ್ ಕರೆ ಮಾಡಿ ಲೈವ್ ಲೊಕೇಶನ್ ಕಳುಹಿಸುವಂತೆ ಬೇಡಿಕೆಯಿಟ್ಟಿದ್ದಾನೆ. ರಜೆಯಲ್ಲಿದ್ದಾಗ ಲೈವ್ ಲೊಕೇಶನ್ ಕಳುಹಿಸದೇ ಇದ್ದಲ್ಲಿ ಗೈರುಹಾಜರಿ ಎಂದು ದಾಖಲಾಗುತ್ತದೆ. ರಜೆಯ ಸಮಯದಲ್ಲಿಯೂ ಈ ರೀತಿ ಲೈವ್ ಲೊಕೇಶನ್ ಕಳುಹಿಸಿ ಎಂದು ಹೇಳುವುದು ಸರಿಯೇ ಎಂದು ಮಹಿಳೆಯೂ ಪ್ರಶ್ನಿಸಿದ್ದಾಳೆ. ಇನ್ನು ವೇತನ ರಹಿತ ಹಾಗೂ ವೈದ್ಯಕೀಯ ರಜೆಯಲ್ಲಿರುವ ಉದ್ಯೋಗಿಗಳಿಗೂ ಕೂಡ ಇದೇ ರೀತಿ ಬೇಡಿಕೆಯನ್ನು ಇಡಲಾಗಿದೆ ಎಂದು ತಿಳಿಸಿದ್ದಾಳೆ. ಆದರೆ ಮಲೇಷ್ಯಾದ ಮಹಿಳೆಯೂ ಮತ್ತೆ ಬಾಸ್‌ ನನ್ನ ಲೈವ್ ಲೊಕೇಶನ್ ಕೇಳಿದ್ರೆ ಮಲೇಷ್ಯಾದ ಕಾರ್ಮಿಕ ಇಲಾಖೆಗೆ ದೂರು ನೀಡುವುದಾಗಿ ತಿಳಿಸಿದ್ದಾಳೆ.

ಇದನ್ನೂ ಓದಿ :ಅತಿ ಬುದ್ಧಿವಂತನಾಗುವ ಅಗತ್ಯವಿಲ್ಲ: ಕೆಲಸದ ಸಮಯ, ಸಂಬಳ ಕೇಳಿದಕ್ಕೆ ಸಿಎ ವಿದ್ಯಾರ್ಥಿಗೆ ಹೀಗೆ ಉತ್ತರಿಸಿದ ಕಂಪನಿ

ಇದನ್ನೂ ಓದಿ
Image
ಈ ಬ್ರಿಟಿಷ್ ಪ್ರಜೆ ಧೈರ್ಯ ಮೆಚ್ಚಲೇಬೇಕು, ಪಾಕ್​​​ನಲ್ಲಿ ಭಾರತದ ಹಾವ
Image
ಕೆಲಸದ ಸಮಯ, ಸಂಬಳ ಕೇಳಿದಕ್ಕೆ ಸಿಎ ವಿದ್ಯಾರ್ಥಿಗೆ ಹೀಗೆ ಉತ್ತರಿಸಿದ ಕಂಪನಿ
Image
ರೂಬಿಕ್ಸ್‌ ಕ್ಯೂಬ್‌ನಲ್ಲಿ ಪ್ರಧಾನಿ ಮೋದಿ ಚಿತ್ರ ಬಿಡಿಸಿದ 6 ರ ಪೋರ
Image
ಜೆಪ್ಟೋ ಅಪ್ಲಿಕೇಶನ್​​​ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಜೋಕೆ

ಈ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರೊಬ್ಬರು, ನಾನೊಂದು ವೇಳೆ ನಿಮ್ಮ ಸ್ಥಾನದಲ್ಲಿದ್ದರೆ ಆ ಕೆಲಸಕ್ಕೆ ರಾಜೀನಾಮೆ ನೀಡಿ ಬೇರೆ ಕೆಲಸ ಹುಡುಕುತ್ತಿದ್ದೆ ಎಂದಿದ್ದಾರೆ. ಇನ್ನೊಬ್ಬರು, ಬಾಸ್ ಈ ರೀತಿ ವರ್ತಿಸುವುದು ಸರಿಯಲ್ಲ. ಎಲ್ಲರಿಗೂ ಅವರದ್ದೆ ಆದ ಪ್ರೈವಸಿ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಕೆಲಸ ಮಾಡುವ ಕಂಪನಿಯಲ್ಲಿ ಇದೇ ರೀತಿ ತಲೆತಿನ್ನುವ ವ್ಯಕ್ತಿಗಳು ಇದ್ದೆ ಇರುತ್ತಾರೆ. ಆದರೆ ಅವರು ವೈಯುಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ, ಹೀಗಾದಾಗ ಅವರನ್ನು ಪ್ರಶ್ನಿಸುವುದು ಒಳ್ಳೆಯದು ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ