AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಕ್ಕಳಿಂದಾಗಿ ಫಜೀತಿಗೆ ಬಿದ್ದ ಕರಡಿಯಮ್ಮ; ಅಪ್ಪನೆಲ್ಲಿ ಎನ್ನುತ್ತಿರುವ ನೆಟ್ಟಿಗರು

Road Crossing : ವನ್ಯಪ್ರಾಣಿಗಳ ಓಡಾಟಕ್ಕೆ ಅನುಕೂಲವಾಗುವಂತೆ ಅರಣ್ಯಪ್ರದೇಶಗಳ ಸುತ್ತಮುತ್ತ ಸೇತುವೆ, ಸುರಂಗ ಮಾರ್ಗವನ್ನು ಕಡ್ಡಾಯವಾಗಿ ನಿರ್ಮಿಸಬೇಕು. ಇಲ್ಲವಾದರೆ ಅವು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ.

Viral Video: ಮಕ್ಕಳಿಂದಾಗಿ ಫಜೀತಿಗೆ ಬಿದ್ದ ಕರಡಿಯಮ್ಮ; ಅಪ್ಪನೆಲ್ಲಿ ಎನ್ನುತ್ತಿರುವ ನೆಟ್ಟಿಗರು
ಈ ಮಕ್ಕಳನ್ನು ಹೇಗೆ ರಸ್ತೆ ದಾಟಿಸುವುದೋ!?
Follow us
ಶ್ರೀದೇವಿ ಕಳಸದ
|

Updated on: Aug 05, 2023 | 10:13 AM

Bear: ಅತ್ತಿಂದಿತ್ತ ಇತ್ತಿಂದಿತ್ತ ಗಾಡಿಗಳ ಓಡಾಟ. ಒಂದನ್ನು ಹಿಡಿದರೆ ಇನ್ನೊಂದು ಓಡಿಹೋಗುತ್ತದೆ, ಇನ್ನೊಂದನ್ನು ಹಿಡಿದರೆ ಒಂದು ಓಡಿಹೋಗುತ್ತದೆ. ಕರಡಿಯಮ್ಮನಿಗೆ (Mother) ಇರುವುದೊಂದೇ ಬಾಯಿ. ಹೇಗೆ ಅದು ಎರಡೂ ಮರಿಗಳನ್ನು ರಸ್ತೆ ದಾಟಿಸೀತು? ಇನ್ನು ಪುಟ್ಟಮಕ್ಕಳಿಗಾದರೂ ತಾವು ರಸ್ತೆಯ ಮೇಲೆ ಹೀಗೆ ಓಡಾಡುತ್ತಿರುವುದು ಅಪಾಯ ಎಂದು ತಿಳಿಯುವುದಾದರೂ ಹೇಗೆ? ಹೀಗಿರುವಾಗ ಅಮ್ಮನ ಕಷ್ಟ ಅವುಗಳಿಗೆ ಅರ್ಥವಾಗುವುದು ದೂರವೇ! ಚಿಣ್ಣಾಟದ ವಯಸ್ಸು. ಆದರೆ ಅಮ್ಮನ ಪರದಾಟ!?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by cutest._.bear (@cutest._.bear)

ಈತನಕ ಈ ವಿಡಿಯೋ ಅನ್ನು ಸುಮಾರು 20 ಮಿಲಿಯನ್​ ಜನರು ನೋಡಿದ್ದಾರೆ. 8 ಲಕ್ಷಕ್ಕಿಂತಲೂ ಹೆಚ್ಚು ಜನರು ಇದನ್ನು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ಪ್ರತಿಕ್ರಿಯಿಸಿದ್ದಾರೆ. ವನ್ಯಜೀವಿಗಳ ಅನುಕೂಲಕ್ಕೆ ತಕ್ಕಂತೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಿದ್ದು ನಿಜಕ್ಕೂ ಅಪ್ಯಾಯಮಾನ, ಇಂತ ದಯಾಮಯಿಗಳಿಗೆ ಯಾವಾಗಲೂ ನಾನು ಕೃತಜ್ಞ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : Viral Video: ಭಾರತವನ್ನು ತೊರೆಯುವ ಕನಸು; ಟ್ರೋಲ್​ಗೆ ಒಳಗಾದ ವಿದ್ಯಾರ್ಥಿನಿಗೆ ಟ್ರ್ಯೂಕಾಲರ್ ಸಿಇಒ ಉದ್ಯೋಗ ಭರವಸೆ

ಈ ವನ್ಯಜೀವಿಗಳು ಮಕ್ಕಳೊಂದಿಗೆ ಹೀಗೆ ನಾಡಿಗೆ ಬಂದಿದ್ದಾದರೂ ಎಲ್ಲಿ? ಇವುಗಳ ಓಡಾಟಕ್ಕೆ ಪ್ರತ್ಯೇಕವಾದ ಸುರಂಗ ಮಾರ್ಗ, ಸೇತುವೆಗಳನ್ನು ನಿರ್ಮಿಸಿ ಅವುಗಳು ನಿರಾತಂಕವಾಗಿ ಬದುಕುವಂತೆ ಮಾಡಬೇಕು ಎಂದಿದ್ದಾರೆ ಇನ್ನೊಬ್ಬರು. ಅವಳಿ ಮಕ್ಕಳ ತಾಯಿಯಾಗಿರುವ ನಾನು ಪ್ರತೀ ದಿನವು ಇಂಥ ಸವಾಲುಗಳನ್ನು ಎದುರಿಸುತ್ತೇನೆ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ಚಲಿಸುವ ಜೀಪಿನ ಬಾನೆಟ್ ಮೇಲೆ ಕುಳಿತ ಯುವತಿ ಹೋಷಿಯಾರಪುರದ ಪೊಲೀಸರ ಅತಿಥಿ

ಪಾಪ ಕರಡಿಯಮ್ಮನ ಎದೆಯಲ್ಲಿ ಅಷ್ಟೂ ಹೊತ್ತು ಅದೆಂಥ ಆತಂಕ ಮನೆಮಾಡಿತ್ತೋ ಏನೋ. ತಾಯ್ತನವೆಂದರೆ ಸುಮ್ಮನೇ ಅಲ್ಲವಲ್ಲ? ನೊಂದು ಬೆಂದೇ ತಾಯಿಯಾಗುವುದು. ಪ್ರಾಣಿಯಾದರೇನು ಮನುಷ್ಯರಾದರೇನು ಜವಾಬ್ದಾರಿ ಜವಾಬ್ದಾರಿಯೇ. ಹಂತಹಂತವಾಗಿ ಎದುರಾಗುವ ಸವಾಲುಗಳನ್ನು ಎದುರಿಸುತ್ತ ಮಕ್ಕಳಿಗೂ ಅದನ್ನು ಕಲಿಸುತ್ತ ಸಾಗಬೇಕು.

ಏನಂತೀರಿ?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ