AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್

ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ.

Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
ಅಕ್ಷತಾ ವರ್ಕಾಡಿ
|

Updated on: Apr 11, 2024 | 12:29 PM

Share

ಮಲೇಷ್ಯಾ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್​​ನಲ್ಲಿ ಸಂಚರಿಸುತ್ತಿದ್ದ 19 ವರ್ಷದ ಯುವಕನ ಕಣ್ಣಿನೊಳಗೆ ಬೈಕ್‌ನ ಬ್ರೇಕ್ ಹ್ಯಾಂಡಲ್ ನುಗ್ಗಿದೆ. ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ಇದೀಗ ಯುವಕ ಯಾವುದೇ ದೃಷ್ಟಿ ದೋಷದ ಸಮಸ್ಯೆಯಿಲ್ಲದೇ ಚೇತರಿಸಿಕೊಳ್ಳುತ್ತಿದ್ದಾನೆ. ಈ ಈ ಘಟನೆ ಮಲೇಷ್ಯಾದ ಕೌಲಾಲಂಪುರ್‌ ನಲ್ಲಿ ನಡೆದಿದೆ.

ಯುವಕನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ. ಕಣ್ಣುಗುಡ್ಡೆಯ ಕೆಳಗೆ ಭಾಗ ಹಾಗೂ ಮೂಗಿನ ಸುತ್ತಲಿನ ಮೂಳೆಗೆ ಹಾನಿಯಾಗಿದ್ದು, ಮೂಗಿನ ಸುತ್ತಲಿನ ಹಾನಿಗೊಳಗಾದ ಮೂಳೆಯನ್ನು ಎರಡು ಸ್ಕ್ರೂಗಳಿಂದ ಸರಿಪಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಕೌಲಾಲಂಪುರ್‌ನಲ್ಲಿರುವ ಯೂನಿವರ್ಸಿಟಿಯ ಕಣ್ಣಿನ ಸಂಶೋಧನಾ ಕೇಂದ್ರದಲ್ಲಿ ಆತನ ಕಣ್ಣಿನ ಒಳಗೆ ನುಗ್ಗಿದ್ದ ಬೈಕ್‌ನ ಬ್ರೇಕ್ ಹ್ಯಾಂಡಲ್​​ನ CT ಸ್ಕ್ಯಾನ್‌ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಯುವಕ ಚೇತರಿಸಿಕೊಳ್ಳುತ್ತಿದ್ದು, ಯುವಕನ ದೃಷ್ಟಿಗೆ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ