AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!

Viral Video: ರಸ್ತೆ ಬದಿಯ ಡಾಬಾದಲ್ಲಿ ಓರ್ವ ತಂದೂರಿ ರೋಟಿಯನ್ನು ತಯಾರಿಸುತ್ತಿದ್ದಾನೆ. ಇತರರು ಸಹ ಆತನೊಂದಿಗೆ ಕೆಲಸ ಮಾಡುತ್ತಿದ್ದಾರೆ. ವ್ಯಕ್ತಿ ಬಂಡಿಯ ಮೇಲೆ ಎಣ್ಣೆ ಅಥವಾ ನೀರಿನ ಬದಲಿಗೆ ಉಗುಳುತ್ತಿರುವುದನ್ನು ಕಾಣಬಹುದು.

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!
TV9 Web
| Edited By: |

Updated on: Oct 18, 2021 | 8:41 AM

Share

ಡಾಬಾದಲ್ಲಿ ತಂದೂರಿ ರೋಟಿ ಮೇಲೆ ಉಗುಳುತ್ತಿರುವ ಕೆಲಸಗಾರನ ವಿಡಿಯೋ ಇದೀಗ ವೈರಲ್ ಆಗಿದೆ. ದೃಶ್ಯವನ್ನು ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ರಸ್ತೆ ಬದಿಯ ಡಾಬಾವೊಂದರಲ್ಲಿ ಸೆರೆ ಹಿಡಿಯಲಾಗಿದೆ. ಈ ಆಘಾತಕಾರಿ ವಿಡಿಯೋ ಎಲ್ಲರನ್ನೂ ಬೆರಗುಗೊಳಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಮೊಬೈಲ್​ನಲ್ಲಿ ಸೆರೆ ಹಿಡಿಯಲಾದ ವಿಡಿಯೋ ಇದೀಗ ವೈರಲ್ ಆಗಿದ್ದು, ರೋಟಿ ತಯಾರಿಸುತ್ತಲೇ ವ್ಯಕ್ತಿ ಉಗುಳುತ್ತಿರುವುದು ಸ್ಪಷ್ಟವಾಗಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಸ್ತೆ ಬದಿಯ ಡಾಬಾದಲ್ಲಿ ಓರ್ವ ತಂದೂರಿ ರೋಟಿಯನ್ನು ತಯಾರಿಸುತ್ತಿದ್ದಾನೆ. ಇತರರು ಸಹ ಆತನೊಂದಿಗೆ ಕೆಲಸ ಮಾಡುತ್ತಿದ್ದಾರೆ. ವ್ಯಕ್ತಿ ಬಂಡಿಯ ಮೇಲೆ ಎಣ್ಣೆ ಅಥವಾ ನೀರಿನ ಬದಲಿಗೆ ಉಗುಳುತ್ತಿರುವುದನ್ನು ಕಾಣಬಹುದು.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳೀಯ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ತಮೀಜುದ್ದೀನ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಡಾಬಾದ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇಂತಹ ವಿಡಿಯೋ ವೈರಲ್ ಆಗುತ್ತಿರುವುದು ಇದೇ ಮೊದಲಲ್ಲ. ಇತ್ತೀಚಿನ ದಿನಗಳಲ್ಲಿ ಹಲವಾರು ಇಂತಹ ವಿಡಿಯೋಗಳು ವೈರಲ್ ಆಗುತ್ತಿವೆ. ಹಲವು ರೆಸ್ಟೋರೆಂಟ್​ಗಳಲ್ಲಿ ರೊಟ್ಟಿಗಳನ್ನು ತಯಾರಿಸುವಾಗ ಕೆಲಸಗಾರರು ಉಗುಳುತ್ತಿರುವ ದೃಶ್ಯಗಳೂ ಸಹ ವೈರಲ್ ಆಗಿದ್ದವು.

ಇದನ್ನೂ ಓದಿ:

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ

Viral Video: ತಲೆಯ ಮೇಲೆ 750 ಮೊಟ್ಟೆಗಳನ್ನು ಬ್ಯಾಲೆನ್ಸ್​ ಮಾಡಿದ ವ್ಯಕ್ತಿ; ಗಿನ್ನೆಸ್ ದಾಖಲೆ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ