AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಬಳಿಕ ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದಾನೆ.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ
ಪತ್ನಿಗೆ ಫೋನ್‌ನಲ್ಲೇ ತಲಾಖ್
ಅಕ್ಷತಾ ವರ್ಕಾಡಿ
|

Updated on: Aug 15, 2024 | 11:40 AM

Share

ಜೈಪುರ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚಿಗಷ್ಟೇ ಆಕೆಯನ್ನು ಭೇಟಿಯಾಗಿ ವಿವಾಹವಾಗಿದ್ದಾನೆ. ಇದಲ್ಲದೇ ಕುವೈತ್‌ನಿಂದಲೇ ಕರೆ ಮಾಡಿ ತನ್ನ ಮೊದಲ ಪತ್ನಿಗೆ ತಲಾಕ್​​​ ನೀಡಿದ್ದಾನೆ.

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಹನುಮಾನ್‌ಗಢದ ಭದ್ರಾದಲ್ಲಿರುವ ಮೊದಲ ಪತ್ನಿ ಫರೀದಾ ಬಾನೊ (29) ಕಳೆದ ತಿಂಗಳು ತನ್ನ ಪತಿ ರೆಹಮಾನ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹನುಮಾನ್‌ಗಢ ಉಪ ಎಸ್‌ಪಿ (ಎಸ್‌ಸಿ/ಎಸ್‌ಟಿ ಸೆಲ್) ರಣವೀರ್ ಸಿಂಗ್ ಹೇಳಿದ್ದಾರೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ರೆಹಮಾನ್ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು