AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಬಳಿಕ ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದಾನೆ.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ
ಪತ್ನಿಗೆ ಫೋನ್‌ನಲ್ಲೇ ತಲಾಖ್
ಅಕ್ಷತಾ ವರ್ಕಾಡಿ
|

Updated on: Aug 15, 2024 | 11:40 AM

Share

ಜೈಪುರ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚಿಗಷ್ಟೇ ಆಕೆಯನ್ನು ಭೇಟಿಯಾಗಿ ವಿವಾಹವಾಗಿದ್ದಾನೆ. ಇದಲ್ಲದೇ ಕುವೈತ್‌ನಿಂದಲೇ ಕರೆ ಮಾಡಿ ತನ್ನ ಮೊದಲ ಪತ್ನಿಗೆ ತಲಾಕ್​​​ ನೀಡಿದ್ದಾನೆ.

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಹನುಮಾನ್‌ಗಢದ ಭದ್ರಾದಲ್ಲಿರುವ ಮೊದಲ ಪತ್ನಿ ಫರೀದಾ ಬಾನೊ (29) ಕಳೆದ ತಿಂಗಳು ತನ್ನ ಪತಿ ರೆಹಮಾನ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹನುಮಾನ್‌ಗಢ ಉಪ ಎಸ್‌ಪಿ (ಎಸ್‌ಸಿ/ಎಸ್‌ಟಿ ಸೆಲ್) ರಣವೀರ್ ಸಿಂಗ್ ಹೇಳಿದ್ದಾರೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ರೆಹಮಾನ್ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ