ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಬಳಿಕ ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದಾನೆ.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ
ಪತ್ನಿಗೆ ಫೋನ್‌ನಲ್ಲೇ ತಲಾಖ್
Follow us
|

Updated on: Aug 15, 2024 | 11:40 AM

ಜೈಪುರ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚಿಗಷ್ಟೇ ಆಕೆಯನ್ನು ಭೇಟಿಯಾಗಿ ವಿವಾಹವಾಗಿದ್ದಾನೆ. ಇದಲ್ಲದೇ ಕುವೈತ್‌ನಿಂದಲೇ ಕರೆ ಮಾಡಿ ತನ್ನ ಮೊದಲ ಪತ್ನಿಗೆ ತಲಾಕ್​​​ ನೀಡಿದ್ದಾನೆ.

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಹನುಮಾನ್‌ಗಢದ ಭದ್ರಾದಲ್ಲಿರುವ ಮೊದಲ ಪತ್ನಿ ಫರೀದಾ ಬಾನೊ (29) ಕಳೆದ ತಿಂಗಳು ತನ್ನ ಪತಿ ರೆಹಮಾನ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹನುಮಾನ್‌ಗಢ ಉಪ ಎಸ್‌ಪಿ (ಎಸ್‌ಸಿ/ಎಸ್‌ಟಿ ಸೆಲ್) ರಣವೀರ್ ಸಿಂಗ್ ಹೇಳಿದ್ದಾರೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ರೆಹಮಾನ್ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ