AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಬಳಿಕ ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದಾನೆ.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ
ಪತ್ನಿಗೆ ಫೋನ್‌ನಲ್ಲೇ ತಲಾಖ್
ಅಕ್ಷತಾ ವರ್ಕಾಡಿ
|

Updated on: Aug 15, 2024 | 11:40 AM

Share

ಜೈಪುರ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚಿಗಷ್ಟೇ ಆಕೆಯನ್ನು ಭೇಟಿಯಾಗಿ ವಿವಾಹವಾಗಿದ್ದಾನೆ. ಇದಲ್ಲದೇ ಕುವೈತ್‌ನಿಂದಲೇ ಕರೆ ಮಾಡಿ ತನ್ನ ಮೊದಲ ಪತ್ನಿಗೆ ತಲಾಕ್​​​ ನೀಡಿದ್ದಾನೆ.

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಹನುಮಾನ್‌ಗಢದ ಭದ್ರಾದಲ್ಲಿರುವ ಮೊದಲ ಪತ್ನಿ ಫರೀದಾ ಬಾನೊ (29) ಕಳೆದ ತಿಂಗಳು ತನ್ನ ಪತಿ ರೆಹಮಾನ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹನುಮಾನ್‌ಗಢ ಉಪ ಎಸ್‌ಪಿ (ಎಸ್‌ಸಿ/ಎಸ್‌ಟಿ ಸೆಲ್) ರಣವೀರ್ ಸಿಂಗ್ ಹೇಳಿದ್ದಾರೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ರೆಹಮಾನ್ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು