AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು, ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡ 31 ವರ್ಷದ ವ್ಯಕ್ತಿ

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು ಹಾಗೂ ಡೈಪರ್​ ಬದಲಿಸಲು ಶಿಶುಪಾಲಕರು ಬೇಕೆಂದು ನೇಮಿಸಿಕೊಂಡ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಮಾನವ ಕಳ್ಳಸಾಗಾಣಿಕೆ ಆರೋಪವನ್ನು ಹೊರಿಸಿದ್ದಾರೆ.

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು, ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡ 31 ವರ್ಷದ ವ್ಯಕ್ತಿ
ರುಟ್ಲೆಡ್ಜ್​ ಡೀಶ್
TV9 Web
| Edited By: |

Updated on:Dec 30, 2021 | 4:30 PM

Share

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು ಹಾಗೂ ಡೈಪರ್​ ಬದಲಿಸಲು ಶಿಶುಪಾಲಕರು ಬೇಕೆಂದು ನೇಮಿಸಿಕೊಂಡ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಮಾನವ ಕಳ್ಳಸಾಗಾಣಿಕೆ ಆರೋಪವನ್ನು ಹೊರಿಸಿದ್ದಾರೆ. ಲುಸಿಯಾನದ ರುಟ್ಲೆಡ್ಜ್​ ಡೀಶ್​ 4  ಎನ್ನುವ ವ್ಯಕ್ತಿ ತನ್ನನ್ನು ವಿಶೇಷ ಚೇತನ ವ್ಯಕ್ತಿ ಎಂದು ಗುರುತಿಸಿಕೊಂಡು ತನ್ನ ಆರೈಕೆಗಾಗಿ ಹಾಗೂ ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡಿದ್ದನು.  ತಾನು ವಿಶೇಷ ಚೇತನ ವ್ಯಕ್ತಿಯಾಗದ್ದು ತನಗೆ ಪರ್ಯಾಯ ಥೆರಪಿ ಬೇಕು ಹೀಗಾಗಿ ತನ್ನನ್ನು ನೋಡಿಕೊಳ್ಳಲು ಜನರ ಅವಶ್ಯಕತೆ ಇದೆ ಎಂದು ಸಂದೇಶ ಕಳುಹಿಸಿದ್ದನು. ಆದರೆ ಮನೆಗೆ ಬಂದ ಮೇಲೆ ಅವರ ಬಳಿ ತನ್ನ ಡೈಪರ್​ ಬದಲಿಸುವಂತೆ ಹೇಳಿದ್ದಾನೆ. 

ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಲು ಯತ್ನಿಸಿದ ಆರೋಪದ ಮೇಲೆ  ಆತನನ್ನು ಜೆಫೊರ್​ಸನ್​ ಪ್ಯಾರಿಷ್​ ಸೆಂಟರ್​ನಲ್ಲಿ ಇರಿಸಲಾಗಿದೆ. ಆತ ಇದೇ ರೀತಿ ಹಲವರನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯವನ್ನೂ ನೀಡಿದ್ದಾನೆ. ಈ ಹಿಂದೆಯೂ ಈತನ ಮೇಲೆ ಮಾನವ ಕಳ್ಳಸಾಗಾಣಿಕೆ ಆರೋಪವಿತ್ತು. ಕಳೆದ ಬಾರಿ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದನು. ಆದರೂ ಮತ್ತೆ ಅದೇ ಕೆಲಸವನ್ನು ಮುಂದುವರೆಸಿದ್ದು ಪೊಲೀಸರು ಅತನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಪೊಲೀಸರು  ಈ ಹಿಂದೆ ಈತನ ಸಹೋದರ ಕೋರಿ ಎನ್ನುವಾತನ ಹೆಸರು ಹೇಳಿಕೊಂಡು ಈ ಜಾಲದಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಆಗ ತಪ್ಪು ಒಪ್ಪಕೊಂಡಿದ್ದನು. ಆದರೆ ಈಗ ಮತ್ತೆ ಅದೇ ದಂದೆ ಆರಂಭಿಸಿದ್ದು, ಆತನನ್ನು ಬಂಧಿಸಲಾಗಿದೆ.  ಸದ್ಯ ಈ ಜಾಲದಲ್ಲಿ ಸಿಲುಕಿಕೊಂಡವರನ್ನು ರಕ್ಷಿಲಾಗುತ್ತಿದೆ. ಈಗಾಗಲೇ ತನಿಖೆ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಪೊಲೀಸರ ಹೇಳಿಕೆ ಉಲ್ಲೇಖಿಸಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ

Published On - 4:29 pm, Thu, 30 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ