Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು, ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡ 31 ವರ್ಷದ ವ್ಯಕ್ತಿ

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು ಹಾಗೂ ಡೈಪರ್​ ಬದಲಿಸಲು ಶಿಶುಪಾಲಕರು ಬೇಕೆಂದು ನೇಮಿಸಿಕೊಂಡ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಮಾನವ ಕಳ್ಳಸಾಗಾಣಿಕೆ ಆರೋಪವನ್ನು ಹೊರಿಸಿದ್ದಾರೆ.

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು, ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡ 31 ವರ್ಷದ ವ್ಯಕ್ತಿ
ರುಟ್ಲೆಡ್ಜ್​ ಡೀಶ್
Follow us
TV9 Web
| Updated By: Pavitra Bhat Jigalemane

Updated on:Dec 30, 2021 | 4:30 PM

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು ಹಾಗೂ ಡೈಪರ್​ ಬದಲಿಸಲು ಶಿಶುಪಾಲಕರು ಬೇಕೆಂದು ನೇಮಿಸಿಕೊಂಡ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಮಾನವ ಕಳ್ಳಸಾಗಾಣಿಕೆ ಆರೋಪವನ್ನು ಹೊರಿಸಿದ್ದಾರೆ. ಲುಸಿಯಾನದ ರುಟ್ಲೆಡ್ಜ್​ ಡೀಶ್​ 4  ಎನ್ನುವ ವ್ಯಕ್ತಿ ತನ್ನನ್ನು ವಿಶೇಷ ಚೇತನ ವ್ಯಕ್ತಿ ಎಂದು ಗುರುತಿಸಿಕೊಂಡು ತನ್ನ ಆರೈಕೆಗಾಗಿ ಹಾಗೂ ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡಿದ್ದನು.  ತಾನು ವಿಶೇಷ ಚೇತನ ವ್ಯಕ್ತಿಯಾಗದ್ದು ತನಗೆ ಪರ್ಯಾಯ ಥೆರಪಿ ಬೇಕು ಹೀಗಾಗಿ ತನ್ನನ್ನು ನೋಡಿಕೊಳ್ಳಲು ಜನರ ಅವಶ್ಯಕತೆ ಇದೆ ಎಂದು ಸಂದೇಶ ಕಳುಹಿಸಿದ್ದನು. ಆದರೆ ಮನೆಗೆ ಬಂದ ಮೇಲೆ ಅವರ ಬಳಿ ತನ್ನ ಡೈಪರ್​ ಬದಲಿಸುವಂತೆ ಹೇಳಿದ್ದಾನೆ. 

ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಲು ಯತ್ನಿಸಿದ ಆರೋಪದ ಮೇಲೆ  ಆತನನ್ನು ಜೆಫೊರ್​ಸನ್​ ಪ್ಯಾರಿಷ್​ ಸೆಂಟರ್​ನಲ್ಲಿ ಇರಿಸಲಾಗಿದೆ. ಆತ ಇದೇ ರೀತಿ ಹಲವರನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯವನ್ನೂ ನೀಡಿದ್ದಾನೆ. ಈ ಹಿಂದೆಯೂ ಈತನ ಮೇಲೆ ಮಾನವ ಕಳ್ಳಸಾಗಾಣಿಕೆ ಆರೋಪವಿತ್ತು. ಕಳೆದ ಬಾರಿ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದನು. ಆದರೂ ಮತ್ತೆ ಅದೇ ಕೆಲಸವನ್ನು ಮುಂದುವರೆಸಿದ್ದು ಪೊಲೀಸರು ಅತನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಪೊಲೀಸರು  ಈ ಹಿಂದೆ ಈತನ ಸಹೋದರ ಕೋರಿ ಎನ್ನುವಾತನ ಹೆಸರು ಹೇಳಿಕೊಂಡು ಈ ಜಾಲದಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಆಗ ತಪ್ಪು ಒಪ್ಪಕೊಂಡಿದ್ದನು. ಆದರೆ ಈಗ ಮತ್ತೆ ಅದೇ ದಂದೆ ಆರಂಭಿಸಿದ್ದು, ಆತನನ್ನು ಬಂಧಿಸಲಾಗಿದೆ.  ಸದ್ಯ ಈ ಜಾಲದಲ್ಲಿ ಸಿಲುಕಿಕೊಂಡವರನ್ನು ರಕ್ಷಿಲಾಗುತ್ತಿದೆ. ಈಗಾಗಲೇ ತನಿಖೆ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಪೊಲೀಸರ ಹೇಳಿಕೆ ಉಲ್ಲೇಖಿಸಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ

Published On - 4:29 pm, Thu, 30 December 21

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ