ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ

ವಿವಾಹಿತೆ ಮಹಿಳೆಯೊಬ್ಬಳು ಫೇಸ್​​​ಬುಕ್​​​ನಲ್ಲಿ ಪರಿಚಯವಾದ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾಳೆ. ತಾನು ಮದುವೆಯಾಗಿರುವುದನ್ನು ಮರೆತು ಆತನೊಂದಿಗೆ ಓಡಿಹೋಗಿದ್ದಾಳೆ. ಆತನನ್ನು ನಂಬಿ ಹೋದವಳಿಗೆ ಅಲ್ಲಿ ಆಗಿದ್ದೇ ಬೇರೆ..! ಏನಿದು ಘಟನೆ ಇಲ್ಲಿದೆ ಸಂಪೂರ್ಣ ವಿವರ.

ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ
ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ
Follow us
|

Updated on: Jun 13, 2023 | 10:37 AM

ಉತ್ತರ ಪ್ರದೇಶದ ಸಿದ್ಧಾರ್ಥನಗರದ ವ್ಯಕ್ತಿಯೊಬ್ಬ ದಲಿತ ಕುಟುಂಬಕ್ಕೆ ಸೇರಿದ ವಿವಾಹಿತ ಮಹಿಳೆಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿ, ಆಕೆಯನ್ನು ಪ್ರೀತಿಯ ಬಲೆಗೆ ಬೀಳಿಸಿದ್ದಾನೆ. ತಾನು ಮದುವೆಯಾಗಿರುವುದನ್ನು ಮರೆತು ಆತನೊಂದಿಗೆ ಓಡಿಹೋಗಿದ್ದಾಳೆ. ಆತನನ್ನು ನಂಬಿ ಹೋದವಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿದ್ದಾನೆ. ಇದೀಗಾ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಸಿದ್ಧಾರ್ಥನಗರ ಜಿಲ್ಲೆಯ ಮಿಶ್ರೌಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಧಾರ್ಮಿಕ ಮತಾಂತರದ ಪ್ರಕರಣ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಶೈಲೇಶ್‌ ಕುಮಾರ್‌ ಕಳೆದ 4 ವರ್ಷದ ಹಿಂದೆ ಲಕ್ಷ್ಮೀ ಎಂಬಾಕೆಯನ್ನು ವಿವಾಹವಾಗಿದ್ದಾರೆ. ಇದೇ ವರ್ಷದ ಮೇ.31 ರ ರಾತ್ರಿ ತನ್ನ ಫೇಸ್​​​ ಬುಕ್​​​ ಪ್ರಿಯಕರನಿಗಾಗಿ 55 ಸಾವಿರ ನಗದು ಹಾಗೂ ಚಿನ್ನಾಭರಣದೊಂದಿಗೆ ಲಕ್ಷ್ಮೀ ಮನೆ ಬಿಟ್ಟು ಹೋಗಿದ್ದಾರೆ. ಐಪಿಸಿಯ ಸೆಕ್ಷನ್ 504 ಮತ್ತು 506, ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನಿನ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ಧಾರ್ಥನಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವ ದಾಖಲೆ ಮಾಡಿದ ಸಾಮೂಹಿಕ ವಿವಾಹ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 2,143 ಜೋಡಿಗಳು

ಕುಟುಂಬಸ್ಥರು ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಎರಡು ದಿನಗಳ ನಂತರ, ಜಿಲ್ಲೆಯ ಸಿಸ್ವಾನ್ ಗ್ರಾಮದ ನಿವಾಸಿ ಸಜಾವುಲ್ಲಾ ಎಂಬಾತ ಶೈಲೇಶ್ ಅವರ ಪತ್ನಿಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿ ಕೆಲವು ಸಹಚರರೊಂದಿಗೆ ಮುಂಬೈಗೆ ಕರೆದೊಯ್ದಿರುವುದು ಪತ್ತೆಯಾಗಿದೆ. ಆಕೆಯ ಹೆಸರನ್ನು ಲಕ್ಷ್ಮಿಯಿಂದ ಮುಸ್ಕಾನ್ ಎಂದು ಬದಲಾಯಿಸಿದ್ದರು. ಯುವತಿಯ ಸಂಬಂಧಿಕರು ಮುಂಬೈ ತಲುಪಿ, ಬಳಿಕ ಆಕೆಯನ್ನು ತನ್ನ ಕುಟುಂಬದ ಮನೆಗೆ ಕರೆದುಕೊಂಡು ಬಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ