AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷಪೂರಿತ ಹಾವನ್ನು ಹಿಡಿದು ಕಚ್ಚಿ ಸಾಯಿಸಿದ ವ್ಯಕ್ತಿ; ನೋವು ತಾಳಲಾರದೇ ಸತ್ತ ಹಾವು

ಕೆಲವೇ ಹೊತ್ತಿನಲ್ಲಿ ಆತನ ಈ ಸಾಹಸಗಾಥೆ ಇಡೀ ಊರಿಗೆ ಪಸರಿಸಿದ್ದು, ಕೆಲವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ. ಆದರೆ, ಕಿಶೋರ್​ ಬಾದ್ರಾ ಮಾತ್ರ ಅವರ ಮಾತಿಗೆ ಕಿವಿಗಡದೇ ನಾಟಿ ಔಷಧಿ ನೀಡುವವರ ಬಳಿ ಹೋಗಿದ್ದಾನೆ.

ವಿಷಪೂರಿತ ಹಾವನ್ನು ಹಿಡಿದು ಕಚ್ಚಿ ಸಾಯಿಸಿದ ವ್ಯಕ್ತಿ; ನೋವು ತಾಳಲಾರದೇ ಸತ್ತ ಹಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: Skanda|

Updated on: Aug 13, 2021 | 2:26 PM

Share

ಒಡಿಶಾ: ಒಡಿಶಾ ರಾಜ್ಯದ ಜೈಪುರ ಜಿಲ್ಲೆಯಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ತನಗೆ ಕಡಿದ ಹಾವನ್ನು ಕಚ್ಚಿ ಕೊಂದಿದ್ದಾನೆ. 45 ವರ್ಷ ವಯಸ್ಸಿನ ಆದಿವಾಸಿ ವ್ಯಕ್ತಿ ಕಿಶೋರ್​ ಬಾದ್ರಾ ವಿಷಕಾರಿ ಹಾವನ್ನು ಬಾಯಿಯಿಂದಲೇ ಕಚ್ಚಿ ಸಾಯಿಸಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದ್ದಾನೆ. ಗಂಭರೀಪಟಿಯಾ ಹಳ್ಳಿಯ ಸಲಿಜಂಗಾ ಪಂಚಾಯತಿ ವ್ಯಾಪ್ತಿಯ ದಂಗಡಿ ಎಂಬಲ್ಲಿ ಘಟನೆ ನಡೆದಿದ್ದು, ಹೊಲದ ಕೆಲಸ ಮಾಡಿ ಬರುತ್ತಿದ್ದಾಗ ಹಾವು ಕಡಿಯಿತೆಂದು ಈ ವ್ಯಕ್ತಿ ಅದನ್ನು ಹಿಡಿದು ಸೇಡು ತೀರಿಸಿಕೊಂಡಿದ್ದಾನೆ. ಕಡಿದ ಹಾವು ಅತ್ಯಂತ ವಿಷಕಾರಿಯಾಗಿದ್ದು, ಈತ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಘಟನೆ ಬಳಿಕ ಸುತ್ತಮುತ್ತಲ ಊರುಗಳಲ್ಲೆಲ್ಲಾ ಆತನ ಸಾಹಸದ ಬಗ್ಗೆ ಮಾತುಗಳು ಶುರುವಾಗಿದ್ದು, ಹಾವನ್ನು ಕೊಂದಿದ್ದು ಹೇಗೆ ಎನ್ನುವ ಬಗ್ಗೆ ಸ್ವತಃ ಕಿಶೋರ್​ ಬಾದ್ರಾ ವಿವರಣೆ ನೀಡಿದ್ದಾನೆ. ನಾನು ಹೊಲದಿಂದ ಕೆಲಸ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾಲಿನ ಮೇಲೆ ಏನೋ ಹರಿದಾಡಿ ಕಡಿದ ಅನುಭವ ಆಯಿತು. ಆಗ ಕತ್ತಲಾಗಿತ್ತಾದ್ದರಿಂದ ಸೂಕ್ಷ್ಮವಾಗಿ ಗಮನಿಸಿದೆ. ತಕ್ಷಣ ಮೊಬೈಲ್​ ಬೆಳಕಿನ ಸಹಾಯದಲ್ಲಿ ನೋಡಿದಾಗ ಅದೊಂದು ವಿಷಪೂರಿತ ಹಾವು ಎನ್ನುವುದು ಗಮನಕ್ಕೆ ಬಂತು ಎಂದಿದ್ದಾನೆ.

ವಿಷಕಾರಿ ಹಾವು ಎಂದು ಗೊತ್ತಾದ ತಕ್ಷಣವೇ ಅದನ್ನು ಕೈಯಲ್ಲಿ ಹಿಡಿದುಕೊಂಡು ಮನಸೋ ಇಚ್ಛೆ ಕಡಿಯಲಾರಂಭಿಸಿದೆ. ಅದರ ಮೇಲೆ ಸೇಡು ತೀರಿಸಿಕೊಳ್ಳಲೆಂದು ಹಾಗೆ ಮಾಡಿದೆ. ಕೊನೆಗೆ ಅದು ಸತ್ತು ಹೋಯಿತು. ಬಳಿಕ ಸತ್ತ ಹಾವನ್ನು ಕೈಯಲ್ಲಿ ಹಿಡಿದುಕೊಂಡೇ ಮನೆಗೆ ಬಂದು ಹೆಂಡತಿಗೆ ನಡೆದಿರುವ ಘಟನೆಯನ್ನು ಹೇಳಿದೆ ಎಂದು ವಿವರಿಸಿದ್ದಾನೆ.

ಕೆಲವೇ ಹೊತ್ತಿನಲ್ಲಿ ಆತನ ಈ ಸಾಹಸಗಾಥೆ ಇಡೀ ಊರಿಗೆ ಪಸರಿಸಿದ್ದು, ಕೆಲವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ. ಆದರೆ, ಕಿಶೋರ್​ ಬಾದ್ರಾ ಮಾತ್ರ ಅವರ ಮಾತಿಗೆ ಕಿವಿಗಡದೇ ನಾಟಿ ಔಷಧಿ ನೀಡುವವರ ಬಳಿ ಹೋಗಿದ್ದಾನೆ. ಅದೃಷ್ಟವಶಾತ್ ಹಾವು ಕಡಿದಾಗಲೂ, ಹಾವಿಗೆ ಈತ ತಿರುಗಿ ಕಡಿದಾಗಲೂ ವಿಷದ ಪ್ರಮಾಣ ದೇಹಕ್ಕೆ ಸೇರಿಲ್ಲವಾದ್ದರಿಂದ ಸಾವಿನ ದವಡೆಯಿಂದ ಆತ ಪಾರಾಗಿದ್ದಾನೆ.

(Man bites back and kill the poisonous snake bizarre incident goes Viral)

ಇದನ್ನೂ ಓದಿ: Viral Video: ಬರಿಗೈಯಲ್ಲೇ ಹಾವು ಹಿಡಿದ ಯುವತಿ! ನೋಡಿ ಭಯಗೊಳ್ಳಬೇಡಿ, ನೀವೂ ಹೀಗೆಲ್ಲಾ ಮಾಡಬೇಡಿ 

Viral Video: ಅಬ್ಬಬ್ಬಾ ಭಯವೇ ಇಲ್ವೇ ಈಕೆಗೆ? ಸರಸರನೆ ಹರಿಯುವ ವಿಷಪೂರಿತ ಸರ್ಪದೊಟ್ಟಿಗೆ ಯುವತಿಯ ಸೆಣೆಸಾಟ

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು