AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನಿಗಾಗಿ ಗುಜರಿ ವಸ್ತುಗಳಿಂದ ನಾಲ್ಕು ಚಕ್ರದ ವಾಹನ ತಯಾರಿಸಿದ ವ್ಯಕ್ತಿ : ವಾಹನ ಮೆಚ್ಚಿಕೊಂಡ ಆನಂದ್​ ಮಹೀಂದ್ರಾರಿಂದ ಬೊಲೇರೋ ಗಿಫ್ಟ್

ಆನಂದ್​ ಮಹಿಂದ್ರಾ ಅವರು ಈ ವಾಹನವನ್ನು ನೋಡಿ ಮೆಚ್ಚಿಕೊಂಡಿದ್ದು, ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಜನರ ಕ್ರಿಯೇಟಿವಿಟಿ, ಜಾಣ್ಮೆಯನ್ನು ನಾನು ಸದಾ ಮೆಚ್ಚುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮಗನಿಗಾಗಿ ಗುಜರಿ ವಸ್ತುಗಳಿಂದ ನಾಲ್ಕು ಚಕ್ರದ ವಾಹನ ತಯಾರಿಸಿದ ವ್ಯಕ್ತಿ : ವಾಹನ ಮೆಚ್ಚಿಕೊಂಡ ಆನಂದ್​ ಮಹೀಂದ್ರಾರಿಂದ ಬೊಲೇರೋ ಗಿಫ್ಟ್
ಆನಂದ್​ ಮಹೀಂದ್ರಾ
TV9 Web
| Edited By: |

Updated on:Dec 23, 2021 | 11:09 AM

Share

ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಗುಜರಿ ವಸ್ತುಗಳನ್ನು ಬಳಸಿ ನಾಲ್ಕು ಚಕ್ರದ ವಾಹನವನ್ನು ತಯಾರಿಸಿದ್ದಾರೆ. ಹಳೆಯ ಕಾರಿನ ಭಾಗಗಳನ್ನು ಬಳಸಿ ಈ ವಾಹನವನ್ನು ತಯಾರಿಸಲಾಗಿದೆ. ಮಗನ ಆಸೆ ಪೂರೈಸಲು ತಯಾರಿಸಿದ ಈ ವಾಹನ ಈಗ ಮಹೇಂದ್ರ ಗ್ರುಪ್​ ಅಧ್ಯಕ್ಷ ಆನಂದ್​ ಮಹೀಂದ್ರಾ ಅವರ ಗಮನ ಸೆಳೆದಿದೆ. ಹಿಸ್ಟಾರಿಕಾನೋ ಎನ್ನುವ ಯುಟ್ಯೂಬ್ ಚಾನೆಲ್​ ಪ್ರಕಾರ ಈ ವಾಹನವನ್ನು ದತ್ತಾತ್ರೆಯ ಲೊಹರ್​ ಎನ್ನುವ ವ್ಯಕ್ತಿ ತಯಾರಿಸಿದ್ದಾರೆ. ಅಲ್ಪ ವಿದ್ಯಾಭ್ಯಾಸವನ್ನು ಹೊಂದಿದ್ದ ದತ್ತಾತ್ರೆಯ ಎನ್ನುವವರು ಮಗನ ಗಾಡಿಯ ಆಸೆ ಪೂರೈಸಲು ವಿಭಿನ್ನವಾಗಿ ಯೋಚಿಸಿ, ಗುಜರಿ ವಸ್ತುಗಳಿಂದ ವಾಹನ ತಯಾರಿಸಿದ್ದಾರೆ. ಆನಂದ್​ ಮಹಿಂದ್ರಾ ಅವರು ಈ ವಾಹನವನ್ನು ನೋಡಿ ಮೆಚ್ಚಿಕೊಂಡಿದ್ದು, ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಜನರ ಕ್ರಿಯೇಟಿವಿಟಿ, ಜಾಣ್ಮೆಯನ್ನು ನಾನು ಸದಾ ಮೆಚ್ಚುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮಹಾರಾಷ್ಟ್ರದ ದೇವರಾಷ್ಟ್ರ ಗ್ರಾಮದ ದತ್ತಾತ್ರೆಯ ಲೋಹರ್​ ಅವರು ತಯಾರಿಸಿದ ವಾಹನದ ಕುರಿತು 45 ಸೆಕೆಂಡ್​ಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ ವೀಡಿಯೋದಲ್ಲಿ ವಾಹನವು ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ತೋರಿಸಲಾಗಿದೆ. ಕೇವಲ 60 ಸಾವಿರ ರೂ.ಗಳಲ್ಲಿ ತಯಾರಾದ ಈ ವಾಹನವು ಸಾಮಾನ್ಯವಾಗಿ ದ್ವಿಚಕ್ರ ವಾಹನಗಳಲ್ಲಿ ಕಂಡುಬರುವ ಕಿಕ್​ ಸ್ಟಾರ್ಟ್​ ವಿಧಾನವನ್ನು ಹೊಂದಿದೆ.

ಇನ್ನೊಂದು ವೀಡಿಯೋದಲ್ಲಿ ದತ್ತಾತ್ರೆಯ ಅವರು ನಿರ್ಮಿಸಿದ ಗಾಡಿಯು ಉಳಿದ ವಾಹನಗಳಂತೆ ನಿಯಮವನ್ನು ಹೊಂದಿಲ್ಲದ ಕಾರಣ ಸ್ಥಳೀಯ ಅಧಿಕಾರಿಗಳು ರಸ್ತೆಯಲ್ಲಿ ಸಂಚರಿಸಲು ಅವಕಾಶ ನೀಡಲಿಲ್ಲ. ಈ ಕಾರಣಕ್ಕಾಗಿ ಆನಂದ್​ ಮಹೀಂದ್ರಾ ಅವರು ಬೊಲೆರೋವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ದತ್ತಾತ್ರೆಯ ಅವರು ತಯಾರಿಸಿದ ವಾಹನವನ್ನು ಮಹೀಂದ್ರಾ ರಿಸರ್ಚ್​ ವ್ಯಾಲಿಯಲ್ಲಿ ಇತರರಿಗೆ ಸ್ಪೂರ್ತಿಯಾಗುವಂತೆ ಪ್ರದರ್ಶಿಲಾಗುವುದು ಎಂದು ತಿಳಿಸಿದ್ದಾರೆ. ಆನಂದ್​ ಮಹೀಂದ್ರಾ ಅವರ ಟ್ವೀಟ್​ ನೆಟ್ಟಿಗರನ್ನು ಆಕರ್ಷಿಸಿದ್ದು 14 ಸಾವಿರಕ್ಕೂ ಹೆಚ್ಚು ಲೈಕ್​ ಮತ್ತು 1300ಕ್ಕೂ ಅಧಿಕ ರೀಟ್ವೀಟ್​ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ:

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​

Published On - 11:06 am, Thu, 23 December 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ