AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನಿಗಾಗಿ ಗುಜರಿ ವಸ್ತುಗಳಿಂದ ನಾಲ್ಕು ಚಕ್ರದ ವಾಹನ ತಯಾರಿಸಿದ ವ್ಯಕ್ತಿ : ವಾಹನ ಮೆಚ್ಚಿಕೊಂಡ ಆನಂದ್​ ಮಹೀಂದ್ರಾರಿಂದ ಬೊಲೇರೋ ಗಿಫ್ಟ್

ಆನಂದ್​ ಮಹಿಂದ್ರಾ ಅವರು ಈ ವಾಹನವನ್ನು ನೋಡಿ ಮೆಚ್ಚಿಕೊಂಡಿದ್ದು, ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಜನರ ಕ್ರಿಯೇಟಿವಿಟಿ, ಜಾಣ್ಮೆಯನ್ನು ನಾನು ಸದಾ ಮೆಚ್ಚುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮಗನಿಗಾಗಿ ಗುಜರಿ ವಸ್ತುಗಳಿಂದ ನಾಲ್ಕು ಚಕ್ರದ ವಾಹನ ತಯಾರಿಸಿದ ವ್ಯಕ್ತಿ : ವಾಹನ ಮೆಚ್ಚಿಕೊಂಡ ಆನಂದ್​ ಮಹೀಂದ್ರಾರಿಂದ ಬೊಲೇರೋ ಗಿಫ್ಟ್
ಆನಂದ್​ ಮಹೀಂದ್ರಾ
TV9 Web
| Edited By: |

Updated on:Dec 23, 2021 | 11:09 AM

Share

ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಗುಜರಿ ವಸ್ತುಗಳನ್ನು ಬಳಸಿ ನಾಲ್ಕು ಚಕ್ರದ ವಾಹನವನ್ನು ತಯಾರಿಸಿದ್ದಾರೆ. ಹಳೆಯ ಕಾರಿನ ಭಾಗಗಳನ್ನು ಬಳಸಿ ಈ ವಾಹನವನ್ನು ತಯಾರಿಸಲಾಗಿದೆ. ಮಗನ ಆಸೆ ಪೂರೈಸಲು ತಯಾರಿಸಿದ ಈ ವಾಹನ ಈಗ ಮಹೇಂದ್ರ ಗ್ರುಪ್​ ಅಧ್ಯಕ್ಷ ಆನಂದ್​ ಮಹೀಂದ್ರಾ ಅವರ ಗಮನ ಸೆಳೆದಿದೆ. ಹಿಸ್ಟಾರಿಕಾನೋ ಎನ್ನುವ ಯುಟ್ಯೂಬ್ ಚಾನೆಲ್​ ಪ್ರಕಾರ ಈ ವಾಹನವನ್ನು ದತ್ತಾತ್ರೆಯ ಲೊಹರ್​ ಎನ್ನುವ ವ್ಯಕ್ತಿ ತಯಾರಿಸಿದ್ದಾರೆ. ಅಲ್ಪ ವಿದ್ಯಾಭ್ಯಾಸವನ್ನು ಹೊಂದಿದ್ದ ದತ್ತಾತ್ರೆಯ ಎನ್ನುವವರು ಮಗನ ಗಾಡಿಯ ಆಸೆ ಪೂರೈಸಲು ವಿಭಿನ್ನವಾಗಿ ಯೋಚಿಸಿ, ಗುಜರಿ ವಸ್ತುಗಳಿಂದ ವಾಹನ ತಯಾರಿಸಿದ್ದಾರೆ. ಆನಂದ್​ ಮಹಿಂದ್ರಾ ಅವರು ಈ ವಾಹನವನ್ನು ನೋಡಿ ಮೆಚ್ಚಿಕೊಂಡಿದ್ದು, ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಜನರ ಕ್ರಿಯೇಟಿವಿಟಿ, ಜಾಣ್ಮೆಯನ್ನು ನಾನು ಸದಾ ಮೆಚ್ಚುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮಹಾರಾಷ್ಟ್ರದ ದೇವರಾಷ್ಟ್ರ ಗ್ರಾಮದ ದತ್ತಾತ್ರೆಯ ಲೋಹರ್​ ಅವರು ತಯಾರಿಸಿದ ವಾಹನದ ಕುರಿತು 45 ಸೆಕೆಂಡ್​ಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ ವೀಡಿಯೋದಲ್ಲಿ ವಾಹನವು ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ತೋರಿಸಲಾಗಿದೆ. ಕೇವಲ 60 ಸಾವಿರ ರೂ.ಗಳಲ್ಲಿ ತಯಾರಾದ ಈ ವಾಹನವು ಸಾಮಾನ್ಯವಾಗಿ ದ್ವಿಚಕ್ರ ವಾಹನಗಳಲ್ಲಿ ಕಂಡುಬರುವ ಕಿಕ್​ ಸ್ಟಾರ್ಟ್​ ವಿಧಾನವನ್ನು ಹೊಂದಿದೆ.

ಇನ್ನೊಂದು ವೀಡಿಯೋದಲ್ಲಿ ದತ್ತಾತ್ರೆಯ ಅವರು ನಿರ್ಮಿಸಿದ ಗಾಡಿಯು ಉಳಿದ ವಾಹನಗಳಂತೆ ನಿಯಮವನ್ನು ಹೊಂದಿಲ್ಲದ ಕಾರಣ ಸ್ಥಳೀಯ ಅಧಿಕಾರಿಗಳು ರಸ್ತೆಯಲ್ಲಿ ಸಂಚರಿಸಲು ಅವಕಾಶ ನೀಡಲಿಲ್ಲ. ಈ ಕಾರಣಕ್ಕಾಗಿ ಆನಂದ್​ ಮಹೀಂದ್ರಾ ಅವರು ಬೊಲೆರೋವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ದತ್ತಾತ್ರೆಯ ಅವರು ತಯಾರಿಸಿದ ವಾಹನವನ್ನು ಮಹೀಂದ್ರಾ ರಿಸರ್ಚ್​ ವ್ಯಾಲಿಯಲ್ಲಿ ಇತರರಿಗೆ ಸ್ಪೂರ್ತಿಯಾಗುವಂತೆ ಪ್ರದರ್ಶಿಲಾಗುವುದು ಎಂದು ತಿಳಿಸಿದ್ದಾರೆ. ಆನಂದ್​ ಮಹೀಂದ್ರಾ ಅವರ ಟ್ವೀಟ್​ ನೆಟ್ಟಿಗರನ್ನು ಆಕರ್ಷಿಸಿದ್ದು 14 ಸಾವಿರಕ್ಕೂ ಹೆಚ್ಚು ಲೈಕ್​ ಮತ್ತು 1300ಕ್ಕೂ ಅಧಿಕ ರೀಟ್ವೀಟ್​ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ:

Viral Video: ಕುಕ್ಕರ್​ನಲ್ಲಿ ಕಾಫಿ ತಯಾರಿಸಿದ ವ್ಯಕ್ತಿ: ವೀಡಿಯೋ ವೈರಲ್​

Published On - 11:06 am, Thu, 23 December 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್