AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್​​​ ಸುಟ್ಟು ಮಗನ ಬೈಕ್ ರೇಸಿಂಗ್ ಚಟಕ್ಕೆ ಬ್ರೇಕ್​​ ಹಾಕಿದ ಅಪ್ಪ

"ನನ್ನ ಮಗನನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ. ಅದಕ್ಕಾಗಿ ಬೈಕ್ ಸುಟ್ಟು ಹಾಕಿದೆ. ಶಾಲೆಗೆ ಹೋಗಲು ಸುಲಭವಾಗಲಿ ಎಂದು ಬೈಕ್​ ಖರೀದಿಸಿದ್ದೆ, ಆದರೆ ಶಾಲೆಗೆ ಹೋಗದೆ ರಾತ್ರಿಯಾದರೂ ಮನೆಗೆ ಬಾರದೆ ಬೈಕ್ ರೇಸಿಂಗ್ ನಲ್ಲಿ ಪಾಲ್ಗೊಳ್ಳುತ್ತಿದ್ದ. ಆದ್ದರಿಂದ ಬೈಕ್ ನಾಶಪಡಿಸದೆ ತನಗೆ ಬೇರೆ ದಾರಿಯಿರಲಿಲ್ಲ" ಎಂದು ತಂದೆ ಹೇಳಿಕೊಂಡಿರುವುದು ವರದಿಯಾಗಿದೆ.

Viral Video: ಬೈಕ್​​​ ಸುಟ್ಟು ಮಗನ ಬೈಕ್ ರೇಸಿಂಗ್ ಚಟಕ್ಕೆ ಬ್ರೇಕ್​​ ಹಾಕಿದ ಅಪ್ಪ
ಅಕ್ಷತಾ ವರ್ಕಾಡಿ
|

Updated on:Oct 05, 2024 | 6:21 PM

Share

ಮಲೇಷ್ಯಾ: ಬೈಕ್ ರೇಸಿಂಗ್ ಬಗ್ಗೆ ಸಖತ್​​ ಕ್ರೇಜ್​ ಹೊಂದಿದ್ದ ತನ್ನ ಮಗ ಅಪಘಾತಕ್ಕೀಡಾಗಬಹುದೆಂಬ ಭಯದಿಂದ ತಂದೆ ಮಗನ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಸೆಂಟ್ರಲ್ ಮಲೇಷ್ಯಾದ ಕೌಲಾಲಂಪುರ್ ಬಳಿಯ ಶಾ ಆಲಂ ಎಂಬಲ್ಲಿ ನಡೆದಿದೆ. ತನ್ನ ಮಗನ ಸುರಕ್ಷತೆಗಾಗಿ ಬೈಕ್‌ಗೆ ಬೆಂಕಿ ಹಚ್ಚಿದ್ದು, ಬೈಕ್ ಸುಟ್ಟು ಹಾಕಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ತನ್ನ ಮಗನಿಗೆ ಶಾಲೆಗೆ ಹೋಗಲು ಸುಲಭವಾಗಲಿ ಎಂದು ತಂದೆ ಮೋಟಾರ್ಸೈಕಲ್ ಖರೀದಿಸಿದ್ದರು. ಆದರೆ, ಮಗ ಬೈಕ್ ರೇಸಿಂಗ್ ಚಟಕ್ಕೆ ಬಿದ್ದಾಗ ತಂದೆಗೆ ಭಯ ಶುರುವಾಗಿದೆ . ಅದರಲ್ಲೂ ರಾತ್ರಿ ಹೊತ್ತಿನಲ್ಲಿ ಮಗನ ಚಲನವಲನ ಆತನಿಗೆ ಅತೀವ ಆತಂಕವನ್ನುಂಟು ಮಾಡಿತ್ತು. ಮಗ ಶಾಲೆಗೆ ಹೋಗದೆ ರಾತ್ರಿಯಾದರೂ ಮನೆಗೆ ಬಾರದೆ ಬೈಕ್ ರೇಸಿಂಗ್ ನಲ್ಲಿ ಪಾಲ್ಗೊಳ್ಳುತ್ತಿರುವುದು ತಂದೆಗೆ ತಿಳಿದಿದೆ. ಈ ಕುರಿತು ಮನೆಯಲ್ಲಿ ತಂದೆ ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಆದರೆ ಪ್ರಯೋಜನವಾಗಲಿಲ್ಲ ಎಂಬ ಕಾರಣಕ್ಕೆ ಕೊನೆಯದಾಗಿ ತಂದೆ ಮಗನ ಬೈಕನ್ನು ಸುಟ್ಟು ಹಾಕಿರುವುದಾಗಿ ಸ್ಥಳೀಯ ಮಾಧ್ಯಮ ಸಿನ್ ಚ್ಯೂ ಡೈಲಿ ವರದಿ ಮಾಡಿದೆ.

ನನ್ನ ಮಗನನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ. ಅದಕ್ಕಾಗಿ ಬೈಕ್ ಸುಟ್ಟು ಹಾಕಿದೆ. ತನ್ನ ಮತ್ತು ಮಗನ ನಡುವಿನ ಸಂಘರ್ಷಕ್ಕೆ ಮೋಟಾರ್‌ಸೈಕಲ್ ಪ್ರಮುಖ ಕಾರಣವಾಗಿದ್ದು, ಅದನ್ನು ನಾಶಪಡಿಸದೆ ತನಗೆ ಬೇರೆ ದಾರಿಯಿರಲಿಲ್ಲ ಎಂದು ತಂದೆ ಹೇಳಿಕೊಂಡಿರುವುದು ವರದಿಯಾಗಿದೆ.

ಇದನ್ನೂ ಓದಿ: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಾಗವು ತಂದೆಯ ಕಾರ್ಯವನ್ನು ಸಮರ್ಥಿಸಿಕೊಂಡರೆ, ಇದು ಹಾಗಲ್ಲ ಮತ್ತು ಮಗನನ್ನು ಸರಿಪಡಿಸಬೇಕಾಗಿತ್ತು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ತಂದೆ ಮತ್ತು ಮಗನ ನಡುವಿನ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹಲವರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Sat, 5 October 24

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!