AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್​​​ ಸುಟ್ಟು ಮಗನ ಬೈಕ್ ರೇಸಿಂಗ್ ಚಟಕ್ಕೆ ಬ್ರೇಕ್​​ ಹಾಕಿದ ಅಪ್ಪ

"ನನ್ನ ಮಗನನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ. ಅದಕ್ಕಾಗಿ ಬೈಕ್ ಸುಟ್ಟು ಹಾಕಿದೆ. ಶಾಲೆಗೆ ಹೋಗಲು ಸುಲಭವಾಗಲಿ ಎಂದು ಬೈಕ್​ ಖರೀದಿಸಿದ್ದೆ, ಆದರೆ ಶಾಲೆಗೆ ಹೋಗದೆ ರಾತ್ರಿಯಾದರೂ ಮನೆಗೆ ಬಾರದೆ ಬೈಕ್ ರೇಸಿಂಗ್ ನಲ್ಲಿ ಪಾಲ್ಗೊಳ್ಳುತ್ತಿದ್ದ. ಆದ್ದರಿಂದ ಬೈಕ್ ನಾಶಪಡಿಸದೆ ತನಗೆ ಬೇರೆ ದಾರಿಯಿರಲಿಲ್ಲ" ಎಂದು ತಂದೆ ಹೇಳಿಕೊಂಡಿರುವುದು ವರದಿಯಾಗಿದೆ.

Viral Video: ಬೈಕ್​​​ ಸುಟ್ಟು ಮಗನ ಬೈಕ್ ರೇಸಿಂಗ್ ಚಟಕ್ಕೆ ಬ್ರೇಕ್​​ ಹಾಕಿದ ಅಪ್ಪ
Follow us
ಅಕ್ಷತಾ ವರ್ಕಾಡಿ
|

Updated on:Oct 05, 2024 | 6:21 PM

ಮಲೇಷ್ಯಾ: ಬೈಕ್ ರೇಸಿಂಗ್ ಬಗ್ಗೆ ಸಖತ್​​ ಕ್ರೇಜ್​ ಹೊಂದಿದ್ದ ತನ್ನ ಮಗ ಅಪಘಾತಕ್ಕೀಡಾಗಬಹುದೆಂಬ ಭಯದಿಂದ ತಂದೆ ಮಗನ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ಸೆಂಟ್ರಲ್ ಮಲೇಷ್ಯಾದ ಕೌಲಾಲಂಪುರ್ ಬಳಿಯ ಶಾ ಆಲಂ ಎಂಬಲ್ಲಿ ನಡೆದಿದೆ. ತನ್ನ ಮಗನ ಸುರಕ್ಷತೆಗಾಗಿ ಬೈಕ್‌ಗೆ ಬೆಂಕಿ ಹಚ್ಚಿದ್ದು, ಬೈಕ್ ಸುಟ್ಟು ಹಾಕಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ತನ್ನ ಮಗನಿಗೆ ಶಾಲೆಗೆ ಹೋಗಲು ಸುಲಭವಾಗಲಿ ಎಂದು ತಂದೆ ಮೋಟಾರ್ಸೈಕಲ್ ಖರೀದಿಸಿದ್ದರು. ಆದರೆ, ಮಗ ಬೈಕ್ ರೇಸಿಂಗ್ ಚಟಕ್ಕೆ ಬಿದ್ದಾಗ ತಂದೆಗೆ ಭಯ ಶುರುವಾಗಿದೆ . ಅದರಲ್ಲೂ ರಾತ್ರಿ ಹೊತ್ತಿನಲ್ಲಿ ಮಗನ ಚಲನವಲನ ಆತನಿಗೆ ಅತೀವ ಆತಂಕವನ್ನುಂಟು ಮಾಡಿತ್ತು. ಮಗ ಶಾಲೆಗೆ ಹೋಗದೆ ರಾತ್ರಿಯಾದರೂ ಮನೆಗೆ ಬಾರದೆ ಬೈಕ್ ರೇಸಿಂಗ್ ನಲ್ಲಿ ಪಾಲ್ಗೊಳ್ಳುತ್ತಿರುವುದು ತಂದೆಗೆ ತಿಳಿದಿದೆ. ಈ ಕುರಿತು ಮನೆಯಲ್ಲಿ ತಂದೆ ಮಗನ ನಡುವೆ ಹಲವು ಬಾರಿ ಜಗಳವಾಗಿದೆ. ಆದರೆ ಪ್ರಯೋಜನವಾಗಲಿಲ್ಲ ಎಂಬ ಕಾರಣಕ್ಕೆ ಕೊನೆಯದಾಗಿ ತಂದೆ ಮಗನ ಬೈಕನ್ನು ಸುಟ್ಟು ಹಾಕಿರುವುದಾಗಿ ಸ್ಥಳೀಯ ಮಾಧ್ಯಮ ಸಿನ್ ಚ್ಯೂ ಡೈಲಿ ವರದಿ ಮಾಡಿದೆ.

ನನ್ನ ಮಗನನ್ನು ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ. ಅದಕ್ಕಾಗಿ ಬೈಕ್ ಸುಟ್ಟು ಹಾಕಿದೆ. ತನ್ನ ಮತ್ತು ಮಗನ ನಡುವಿನ ಸಂಘರ್ಷಕ್ಕೆ ಮೋಟಾರ್‌ಸೈಕಲ್ ಪ್ರಮುಖ ಕಾರಣವಾಗಿದ್ದು, ಅದನ್ನು ನಾಶಪಡಿಸದೆ ತನಗೆ ಬೇರೆ ದಾರಿಯಿರಲಿಲ್ಲ ಎಂದು ತಂದೆ ಹೇಳಿಕೊಂಡಿರುವುದು ವರದಿಯಾಗಿದೆ.

ಇದನ್ನೂ ಓದಿ: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ವಿಭಾಗವು ತಂದೆಯ ಕಾರ್ಯವನ್ನು ಸಮರ್ಥಿಸಿಕೊಂಡರೆ, ಇದು ಹಾಗಲ್ಲ ಮತ್ತು ಮಗನನ್ನು ಸರಿಪಡಿಸಬೇಕಾಗಿತ್ತು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ತಂದೆ ಮತ್ತು ಮಗನ ನಡುವಿನ ಸಮಸ್ಯೆಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹಲವರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Sat, 5 October 24

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!