AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ

ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಅಸ್ಸಾಂನ ವ್ಯಕ್ತಿಯೊಬ್ಬರು ಸ್ಕೂಟರ್​ ಖರೀದಿಸಿದ್ದಾರೆ. ಇದರ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ
ಸ್ಕೂಟರ್​
TV9 Web
| Edited By: |

Updated on:Feb 18, 2022 | 2:48 PM

Share

ಹನಿ ಹನಿ ಕೂಡಿದರೆ ಹಳ್ಳ ಎನ್ನುವ  ಮಾತು ಎಲ್ಲೆಡೆ ಪರಿಚಿತ. ಇಲ್ಲೊಂದು ಘಟನೆ ಅದನ್ನು ಮತ್ತೆ ಸಾಬೀತುಪಡಿಸಿದೆ.  ಪುಟ್ಟ ಅಂಗಡಿಯ ಮಾಲೀಕರೊಬ್ಬರು ತನ್ನ ದುಡಿಮೆಯ ಒಂದೊಂದು ರೂಪಾಯಿ ಹಣವನ್ನೂ ಕೂಡಿಸಿಟ್ಟು ಸ್ಕೂಟರ್ ​(Scooter) ಖರೀದಿಸಿದ್ದಾರೆ.  ಬ್ರಾಂಡ್​ ಮೊಬಿಲಿಟಿ ಸ್ಕೂಟರ್​ಅನ್ನು ಅವರು ಖರೀದಿಸಿದ್ದಾರೆ. ಅದು ಹೇಗೆ ಎಂದರೆ ಎಲ್ಲವೂ ನಾಣ್ಯಗಳೇ (Coins)ಆಗಿವೆ. ಹೌದು, ಬುಟ್ಟಿಯಲ್ಲಿ ಚಿಲ್ಲರೆಯನ್ನು ತೆಗೆದುಕೊಂಡು ಹೋಗಿ ಶೋರೂಮ್​ಗೆ ನೀಡಿ ಗಾಡಿಯನ್ನು ಖರೀದಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಈ ಘಟನೆ ಅಸ್ಸಾಂನಲ್ಲಿ(Assam) ನಡೆದಿದೆ.

ಈ ಕುರಿತು ಪೇಸ್ಬುಕ್​ ವೋಲ್ಗ್​ ಮಾಡುವ ಹಿರಾಕ್​ ಜೆ ದಾಸ್​ ಎನ್ನುವವರು ವಿಡಿಯೋವನ್ನು ಹಂಚಿಕೊಂಡಿದ್ದಾರೆ,  ಕನಸನ್ನು ನನಸಾಗಿಸಲು ಸಾಕಷ್ಟು ಹಣ ಬೇಕಾಗುತ್ತದೆ. ಅದು ಸಣ್ಣ ಸಣ್ಣ ಉಳಿತಾಯದಿಂದಲೂ ಸಾಧ್ಯವಾಗುತ್ತದೆ ಎಂದು ಕ್ಯಾಪ್ಷನ್​ ನೀಡಲಾಗಿದೆ.  ಯುಟ್ಯೂಬ್​ನಲ್ಲೂ ಇದರ ವಿಡಿಯೋವನ್ನು ಅವರು ಹಂಚಿಕೊಂಡಿದ್ದು, ನಾಣ್ಯಗಳನ್ನು ಚೀಲದಲ್ಲಿ ತುಂಬಿಸಿಕೊಂಡು ಬಂದು ಅದನ್ನು ಬುಟ್ಟಿಗೆ ಹಾಕಿ ನಂತರ ಅದನ್ನು ಎಣಿಸುವುದನ್ನು ಕಾಣಬಹದು. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಎಷ್ಟೋ ಜನರಿಗೆ ಸ್ವಂತ ಹಣದಲ್ಲಿ ವಾಹನವನ್ನು ಖರೀದಿಸಬೇಕು ಎನ್ನುವ ಆಸೆ ಇರುತ್ತದೆ. ಆದರೆ ಅದು ಕೆಲವರಿಗೆ ಮಾತ್ರ ಸಾಧ್ಯವಾಗುತ್ತದೆ. ಇಲ್ಲಿ ಅಸ್ಸಾಂನ ಮಧ್ಯಮ ವರ್ಗದ ವ್ಯಕ್ತಿಯೊಬ್ಬ ತನ್ನ 8 ತಿಂಗಳ ಸಂಪಾದನೆಯನ್ನು ಉಳಿಸಿ ಸ್ವಂತ ಸ್ಕೂಟಿಯನ್ನು ಖರೀದಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ವ್ಯಕ್ತಿಯನ್ನು ಶ್ಲಾಘಿಸಿದ್ದಾರೆ. ಕನಸನ್ನು ಕಾಣುವುದು ಸುಲಭ. ಅದನ್ನು ಈಡೇರಿಸಿಕೊಳ್ಳಲು ಕಷ್ಟಪಟ್ಟರೆ ಕನಸನ್ನು ನನಸಾಗಿಸಿಕೊಳ್ಳಬಹುದು ಎಂದು ಕೆಲವರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯ ಹೊಟ್ಟೆಯಲ್ಲಿ ಡೈನೋಸರ್​ ಮರಿ ಪತ್ತೆ

Published On - 2:41 pm, Fri, 18 February 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ