Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು

ವ್ಯಾಕ್ಸಿನ್​ ಕೊಡಿಸಲು ತಂದೆಯನ್ನು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಮಗನೊಬ್ಬ ಹೊತ್ತೊಯ್ದ ಘಟನೆ ಬ್ರೆಜಿಲ್​ನ ಅಮೆಜಾನ್​ ಪ್ರದೇಶದಲ್ಲಿ ನಡೆದಿದೆ. ಮಗ ತಂದೆಯನ್ನು ಬೆನ್ನಿನ ಮೇಲೆ ಹೊತ್ತು ಸಾಗುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು
ತಂದೆಯನ್ನು ಬೆನ್ನಿನ ಮೇಲೆ ಹೊತ್ತ ಮಗ
Follow us
TV9 Web
| Updated By: Pavitra Bhat Jigalemane

Updated on:Jan 15, 2022 | 12:18 PM

ಕೊರೋನಾ ಜಗತ್ತಿನ ಮೂಲೆ ಮೂಲೆಗಳಲ್ಲಿ ಜನರನ್ನು ಹೊಕ್ಕಿ ಕಾಡುತ್ತಿದೆ. ಜನ ವ್ಯಾಕ್ಸಿನ್​ ಪಡೆಯಲು ಹರಸಾಹಸವನ್ನೇ ಮಾಡುತ್ತಿದ್ದಾರೆ. ಬಡ ರಾಷ್ಟ್ರಗಳಲ್ಲಿ ವ್ಯಾಕ್ಸಿನ್​ ದೊರಕುವುದೇ ಒಂದು ರೀತಿಯ ಸಮಸ್ಯೆಯಾದರೆ ಇನ್ನು ಹಲವೆಡೆ ವ್ಯಾಕ್ಸಿನೇಷನ್​  ಪಡೆಯುವುದೇ ಒಂದು ಸಾಹಸ ಎನ್ನುವ ಸ್ಥಿತಿ ಇದೆ. ಅಂತಹ ಒಂದು ಸ್ಥಿತಿಯನ್ನು ಎತ್ತಿ ತೋರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಧುನಿಕ ಶ್ರವಣ ಕುಮಾರನಂತೆ ವ್ಯಾಕ್ಸಿನ್​ ಕೊಡಿಸಲು ತಂದೆಯನ್ನು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಮಗನೊಬ್ಬ ಹೊತ್ತೊಯ್ದ ಘಟನೆ ಬ್ರೆಜಿಲ್​ನ ಅಮೆಜಾನ್​ ಪ್ರದೇಶದಲ್ಲಿ ನಡೆದಿದೆ. ಮಗ ತಂದೆಯನ್ನು ಬೆನ್ನಿನ ಮೇಲೆ ಹೊತ್ತು ಸಾಗುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಟಾವಿ ಎನ್ನುವ 24 ವರ್ಷದ ಯುವಕ 67 ವರ್ಷದ ತಂದೆ ವಹು ಅವರನ್ನು ಬರೋಬ್ಬರಿ ಆರು ಗಂಟೆಗಳ ಕಾಲ ಹೊತ್ತು ಸಾಗಿ ವ್ಯಾಕ್ಸಿನೇಷನ್​ ಕೊಡಿಸಿದ್ದಾರೆ. ಅದೇ ರೀತಿ ಮನೆಗೆ ವಾಪಸ್ಸಾಗುವಾಗಲೂ ಆರು ಗಂಟೆಗಳ ಕಾಲ ಹೊತ್ತು ಸಾಗಿದ್ದಾರೆ. ಈ ಫೋಟೋವನ್ನು ಡಾ ಎರಿಕ್ ಜೆನ್ನಿಂಗ್ಸ್ ಸಿಮೊಸ್, ಎನ್ನುವವರು ಇನ್ಸ್ಟಾಗ್ರಾಮಮ್​ನಲ್ಲಿ ಹಂಚಿಕೊಂಡಿದ್ದಾರೆ. ಒಂದು ಫೋಟೋ ನೂರು ಕತೆಗಳನ್ನು ಹೇಳುತ್ತವೆ. ಒಂದೆಡೆ ತಂದೆ ಮತ್ತು ಮಗನ ಬಾಂಧವ್ಯವನ್ನು ವಿವರಿಸಿದರೆ ಇನ್ನೊಂದೆಡೆ ಕುಗ್ರಾಮಗಳ ಜನರು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುವುದನ್ನು ತೋರಿಸುತ್ತದೆ. ಅದಕ್ಕೂ ಮುಖ್ಯವಾಗಿ ವ್ಯಾಕ್ಸಿನೇಷನ್​ ಪಡೆಯಲು ಜನರು ಪಡುವ ಕಷ್ಟಗಳನ್ನು ತೋರಿಸುವಂತಿದೆ.

ಬ್ರೆಜಿಲ್​ನಲ್ಲಿ ಈ ವರೆಗೆ 853 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ. ಇನ್ನು ಅಮೆಜಾನ್ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಅನ್ನು ಆರಂಭಿಸಿದಾಗ ಸ್ಥಳೀಯವಾಗಿ ಕಾಡುಗಳಲ್ಲಿ ವಾಸಿಸುವ ಝೋ ಜನಾಂಗಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮೊದಲ ಡೋಸ್​ ವ್ಯಾಕ್ಸಿನ್​ ಅನ್ನು ನೀಡಲಾಗಿತ್ತು. ಆ ವೇಳೆ ಆರೋಗ್ಯ ಕಾರ್ಯಕರ್ತರು ಹಳ್ಳಗಳಿಗೇ ತೆರಳಿ ಕ್ಯಾಂಪ್​ ಮಾಡುವ ಮೂಲಕ ಲಸಿಕೆ ನೀಡಿದ್ದರು. ಆದರೆ ಎರಡನೇ ಡೋಸ್​​ ಪಡೆಯಲು ಜನರೇ ಆಸ್ಪತ್ರೆಯೆಡೆಗೆ ಮುಖ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದು ಸ್ಥಳೀಯ ಜನರಿಗೆ ಕಷ್ಟವಾಗಿದೆ.

ಟಿವಿ ತಂದೆ ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ನಡೆದಾಡಲು ಸಾಧ್ಯವಾಗದೇ ಇರುವ ಕಾರಣ ಮಗ ಬೆನ್ನಿನ ಮೇಲೆ ಹೊತ್ತೊಯ್ದಿದ್ದಾರೆ. ಈ ಫೋಟೋವನ್ನು ಡಾ ಎರಿಕ್ 2021ರ ಜನವರಿ 1 ರಂದು ಹಂಚಿಕೊಂಡಿದ್ದು, 2021ರ ಅತ್ಯುತ್ತಮ ಕ್ಷಣ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಧುನಿಕ ಶ್ರವಣಕುಮಾರನಿಗೆ ಸಿಕ್ಕಾಪಟ್ಟೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

10ನೇ ವರ್ಷಕ್ಕೆ ಎರಡು ಕಂಪನಿಗಳ ಒಡತಿಯಾದ ಈ ಬಾಲಕಿಗೆ 15ನೇ ವಯಸ್ಸಿಗೇ ನಿವೃತ್ತಿ

Published On - 12:17 pm, Sat, 15 January 22

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್