AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು

ವ್ಯಾಕ್ಸಿನ್​ ಕೊಡಿಸಲು ತಂದೆಯನ್ನು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಮಗನೊಬ್ಬ ಹೊತ್ತೊಯ್ದ ಘಟನೆ ಬ್ರೆಜಿಲ್​ನ ಅಮೆಜಾನ್​ ಪ್ರದೇಶದಲ್ಲಿ ನಡೆದಿದೆ. ಮಗ ತಂದೆಯನ್ನು ಬೆನ್ನಿನ ಮೇಲೆ ಹೊತ್ತು ಸಾಗುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ತಂದೆಗೆ ವ್ಯಾಕ್ಸಿನ್​​ ಕೊಡಿಸಲು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಹೊತ್ತೊಯ್ದ ಯುವಕ: ಆಧುನಿಕ ಶ್ರವಣಕುಮಾರ ಎಂದ ನೆಟ್ಟಿಗರು
ತಂದೆಯನ್ನು ಬೆನ್ನಿನ ಮೇಲೆ ಹೊತ್ತ ಮಗ
TV9 Web
| Edited By: |

Updated on:Jan 15, 2022 | 12:18 PM

Share

ಕೊರೋನಾ ಜಗತ್ತಿನ ಮೂಲೆ ಮೂಲೆಗಳಲ್ಲಿ ಜನರನ್ನು ಹೊಕ್ಕಿ ಕಾಡುತ್ತಿದೆ. ಜನ ವ್ಯಾಕ್ಸಿನ್​ ಪಡೆಯಲು ಹರಸಾಹಸವನ್ನೇ ಮಾಡುತ್ತಿದ್ದಾರೆ. ಬಡ ರಾಷ್ಟ್ರಗಳಲ್ಲಿ ವ್ಯಾಕ್ಸಿನ್​ ದೊರಕುವುದೇ ಒಂದು ರೀತಿಯ ಸಮಸ್ಯೆಯಾದರೆ ಇನ್ನು ಹಲವೆಡೆ ವ್ಯಾಕ್ಸಿನೇಷನ್​  ಪಡೆಯುವುದೇ ಒಂದು ಸಾಹಸ ಎನ್ನುವ ಸ್ಥಿತಿ ಇದೆ. ಅಂತಹ ಒಂದು ಸ್ಥಿತಿಯನ್ನು ಎತ್ತಿ ತೋರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಧುನಿಕ ಶ್ರವಣ ಕುಮಾರನಂತೆ ವ್ಯಾಕ್ಸಿನ್​ ಕೊಡಿಸಲು ತಂದೆಯನ್ನು 6 ಗಂಟೆಗಳ ಕಾಲ ಬೆನ್ನಿನ ಮೇಲೆ ಮಗನೊಬ್ಬ ಹೊತ್ತೊಯ್ದ ಘಟನೆ ಬ್ರೆಜಿಲ್​ನ ಅಮೆಜಾನ್​ ಪ್ರದೇಶದಲ್ಲಿ ನಡೆದಿದೆ. ಮಗ ತಂದೆಯನ್ನು ಬೆನ್ನಿನ ಮೇಲೆ ಹೊತ್ತು ಸಾಗುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

View this post on Instagram

A post shared by Erik Jennings (@erikjenningssimoes)

ಟಾವಿ ಎನ್ನುವ 24 ವರ್ಷದ ಯುವಕ 67 ವರ್ಷದ ತಂದೆ ವಹು ಅವರನ್ನು ಬರೋಬ್ಬರಿ ಆರು ಗಂಟೆಗಳ ಕಾಲ ಹೊತ್ತು ಸಾಗಿ ವ್ಯಾಕ್ಸಿನೇಷನ್​ ಕೊಡಿಸಿದ್ದಾರೆ. ಅದೇ ರೀತಿ ಮನೆಗೆ ವಾಪಸ್ಸಾಗುವಾಗಲೂ ಆರು ಗಂಟೆಗಳ ಕಾಲ ಹೊತ್ತು ಸಾಗಿದ್ದಾರೆ. ಈ ಫೋಟೋವನ್ನು ಡಾ ಎರಿಕ್ ಜೆನ್ನಿಂಗ್ಸ್ ಸಿಮೊಸ್, ಎನ್ನುವವರು ಇನ್ಸ್ಟಾಗ್ರಾಮಮ್​ನಲ್ಲಿ ಹಂಚಿಕೊಂಡಿದ್ದಾರೆ. ಒಂದು ಫೋಟೋ ನೂರು ಕತೆಗಳನ್ನು ಹೇಳುತ್ತವೆ. ಒಂದೆಡೆ ತಂದೆ ಮತ್ತು ಮಗನ ಬಾಂಧವ್ಯವನ್ನು ವಿವರಿಸಿದರೆ ಇನ್ನೊಂದೆಡೆ ಕುಗ್ರಾಮಗಳ ಜನರು ಸಾರಿಗೆ ವ್ಯವಸ್ಥೆ ಇಲ್ಲದೆ ಪರದಾಡುವುದನ್ನು ತೋರಿಸುತ್ತದೆ. ಅದಕ್ಕೂ ಮುಖ್ಯವಾಗಿ ವ್ಯಾಕ್ಸಿನೇಷನ್​ ಪಡೆಯಲು ಜನರು ಪಡುವ ಕಷ್ಟಗಳನ್ನು ತೋರಿಸುವಂತಿದೆ.

ಬ್ರೆಜಿಲ್​ನಲ್ಲಿ ಈ ವರೆಗೆ 853 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ. ಇನ್ನು ಅಮೆಜಾನ್ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಅನ್ನು ಆರಂಭಿಸಿದಾಗ ಸ್ಥಳೀಯವಾಗಿ ಕಾಡುಗಳಲ್ಲಿ ವಾಸಿಸುವ ಝೋ ಜನಾಂಗಗಳಿಗೆ ಹೆಚ್ಚಿನ ಆದ್ಯತೆ ನೀಡಿ ಮೊದಲ ಡೋಸ್​ ವ್ಯಾಕ್ಸಿನ್​ ಅನ್ನು ನೀಡಲಾಗಿತ್ತು. ಆ ವೇಳೆ ಆರೋಗ್ಯ ಕಾರ್ಯಕರ್ತರು ಹಳ್ಳಗಳಿಗೇ ತೆರಳಿ ಕ್ಯಾಂಪ್​ ಮಾಡುವ ಮೂಲಕ ಲಸಿಕೆ ನೀಡಿದ್ದರು. ಆದರೆ ಎರಡನೇ ಡೋಸ್​​ ಪಡೆಯಲು ಜನರೇ ಆಸ್ಪತ್ರೆಯೆಡೆಗೆ ಮುಖ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದು ಸ್ಥಳೀಯ ಜನರಿಗೆ ಕಷ್ಟವಾಗಿದೆ.

ಟಿವಿ ತಂದೆ ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ನಡೆದಾಡಲು ಸಾಧ್ಯವಾಗದೇ ಇರುವ ಕಾರಣ ಮಗ ಬೆನ್ನಿನ ಮೇಲೆ ಹೊತ್ತೊಯ್ದಿದ್ದಾರೆ. ಈ ಫೋಟೋವನ್ನು ಡಾ ಎರಿಕ್ 2021ರ ಜನವರಿ 1 ರಂದು ಹಂಚಿಕೊಂಡಿದ್ದು, 2021ರ ಅತ್ಯುತ್ತಮ ಕ್ಷಣ ಎಂದು ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಧುನಿಕ ಶ್ರವಣಕುಮಾರನಿಗೆ ಸಿಕ್ಕಾಪಟ್ಟೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

10ನೇ ವರ್ಷಕ್ಕೆ ಎರಡು ಕಂಪನಿಗಳ ಒಡತಿಯಾದ ಈ ಬಾಲಕಿಗೆ 15ನೇ ವಯಸ್ಸಿಗೇ ನಿವೃತ್ತಿ

Published On - 12:17 pm, Sat, 15 January 22

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?