AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​

ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​
ಮರವೇರಿ ಕುಳಿತ ವ್ಯಕ್ತಿ
TV9 Web
| Edited By: |

Updated on:Dec 30, 2021 | 10:01 AM

Share

ಕೊರೋನಾದಿಂದ ರಕ್ಷಣೆ ಪಡೆಯಲು ವ್ಯಾಕ್ಸಿನ್​​ ತೆಗೆದುಕೊಳ್ಳುವುದು ಒಳಿತು. ಸರ್ಕಾರವೂ ಪ್ರತಿಯೊಬ್ಬ ನಾಗರಿಕನೂ ಕೋವಿಡ್​ ವ್ಯಾಕ್ಸಿನ್​ ಪಡೆಯಬೇಕೆಂದು ನಿಯಮವನ್ನೂ ಮಾಡಿದೆ. ಆದರೆ ಇನ್ನೂ ಹಳ್ಳಿಗಳಲ್ಲಿ ವ್ಯಾಕ್ಸಿನ್​ಗೆ ಹೆದರಿ ದೂರ ಓಡುವವರಿದ್ದಾರೆ. ವ್ಯಾಕ್ಸಿನ್​ಗೆ ಹೆದರಿ ವ್ಯಕ್ತಿ ಮರವೇರಿ ಕುಳಿತ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. 

ವೀಡಿಯೋದಲ್ಲಿ ಆರೋಗ್ಯ ಕಾರ್ಯಕರ್ತೆಯರು ಮನೆಯ ಬಳಿ ವ್ಯಾಕ್ಸಿನ್​ ನೀಡಲು ಬಂದು ನಿಂತ ವೇಳೆ 40 ವರ್ಷದ  ವ್ಯಕ್ತಿ ಮರವೇರಿ ತುದಿಯಲ್ಲಿ ಹೋಗಿ ಕುಳಿತಿರುವುದನ್ನು ಕಾಣಬಹುದು.  ಅಲ್ಲೇ ಕುಳಿತುಕೊಂಡು ನನಗೆ ವ್ಯಾಕ್ಸಿನ್​ ಬೇಡ ಎಂದು ಕೂಗಿದ್ದಾನೆ. ನಾನು ನಿಮಗೆ ಸಿಗುವುದಿಲ್ಲ ಎಂದಿದ್ದಾನೆ. ಇದರಿಂದ ಆರೋಗ್ಯ ಕಾರ್ಯಕರ್ತೆಯರು ಏನೂ ಮಾಡಲಾಗದೆ ನಿಂತುಕೊಂಡಿದ್ದರು. ಪಾಂಡೀಚೇರಿ ಸರ್ಕಾರ 100 ರಷ್ಟು ವ್ಯಾಕ್ಸಿನೇಷನ್​ ಡ್ರೈವ್​ ನಡೆಸಲು ನಿರ್ಧರಿಸಿದೆ. ಆದ್ದರಿಂದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತೆಯರು ಮೊದಲ ಡೋಸ್​ ಮತ್ತು ಎರಡನೇ ಡೋಸ್​ಅನ್ನೂ ನೀಡುತ್ತಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿದೆ. ಹಲವರು ವ್ಯಾಕ್ಸಿನ್​ ತೆಗೆದುಕೊಳ್ಳಲು ಹೆದರಿ ಅಥವಾ ವ್ಯಾಕ್ಸಿನ್​ ಬೇಡವೆಂದು ನಿರಾಕರಿಸಿ ಮರವೇರಿದ ಘಟನೆ ನಡೆದಿದೆ. ಈಗಲೂ ಇಂತಹದ್ದೇ ಘಟನೆ ಪಾಂಡೀಚೇರಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ಕಿಟಕಿಯಿಂದ ಹಾರಿ ಪತ್ನಿ ಪರಾರಿ; ಹೆಂಡತಿಯ ಸುಳಿವು ನೀಡಿದವರಿಗೆ 5,000 ರೂ. ಬಹುಮಾನ ಘೋಷಿಸಿದ ಗಂಡ!

Published On - 9:45 am, Thu, 30 December 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್