AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​

ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​
ಮರವೇರಿ ಕುಳಿತ ವ್ಯಕ್ತಿ
TV9 Web
| Edited By: |

Updated on:Dec 30, 2021 | 10:01 AM

Share

ಕೊರೋನಾದಿಂದ ರಕ್ಷಣೆ ಪಡೆಯಲು ವ್ಯಾಕ್ಸಿನ್​​ ತೆಗೆದುಕೊಳ್ಳುವುದು ಒಳಿತು. ಸರ್ಕಾರವೂ ಪ್ರತಿಯೊಬ್ಬ ನಾಗರಿಕನೂ ಕೋವಿಡ್​ ವ್ಯಾಕ್ಸಿನ್​ ಪಡೆಯಬೇಕೆಂದು ನಿಯಮವನ್ನೂ ಮಾಡಿದೆ. ಆದರೆ ಇನ್ನೂ ಹಳ್ಳಿಗಳಲ್ಲಿ ವ್ಯಾಕ್ಸಿನ್​ಗೆ ಹೆದರಿ ದೂರ ಓಡುವವರಿದ್ದಾರೆ. ವ್ಯಾಕ್ಸಿನ್​ಗೆ ಹೆದರಿ ವ್ಯಕ್ತಿ ಮರವೇರಿ ಕುಳಿತ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. 

ವೀಡಿಯೋದಲ್ಲಿ ಆರೋಗ್ಯ ಕಾರ್ಯಕರ್ತೆಯರು ಮನೆಯ ಬಳಿ ವ್ಯಾಕ್ಸಿನ್​ ನೀಡಲು ಬಂದು ನಿಂತ ವೇಳೆ 40 ವರ್ಷದ  ವ್ಯಕ್ತಿ ಮರವೇರಿ ತುದಿಯಲ್ಲಿ ಹೋಗಿ ಕುಳಿತಿರುವುದನ್ನು ಕಾಣಬಹುದು.  ಅಲ್ಲೇ ಕುಳಿತುಕೊಂಡು ನನಗೆ ವ್ಯಾಕ್ಸಿನ್​ ಬೇಡ ಎಂದು ಕೂಗಿದ್ದಾನೆ. ನಾನು ನಿಮಗೆ ಸಿಗುವುದಿಲ್ಲ ಎಂದಿದ್ದಾನೆ. ಇದರಿಂದ ಆರೋಗ್ಯ ಕಾರ್ಯಕರ್ತೆಯರು ಏನೂ ಮಾಡಲಾಗದೆ ನಿಂತುಕೊಂಡಿದ್ದರು. ಪಾಂಡೀಚೇರಿ ಸರ್ಕಾರ 100 ರಷ್ಟು ವ್ಯಾಕ್ಸಿನೇಷನ್​ ಡ್ರೈವ್​ ನಡೆಸಲು ನಿರ್ಧರಿಸಿದೆ. ಆದ್ದರಿಂದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತೆಯರು ಮೊದಲ ಡೋಸ್​ ಮತ್ತು ಎರಡನೇ ಡೋಸ್​ಅನ್ನೂ ನೀಡುತ್ತಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿದೆ. ಹಲವರು ವ್ಯಾಕ್ಸಿನ್​ ತೆಗೆದುಕೊಳ್ಳಲು ಹೆದರಿ ಅಥವಾ ವ್ಯಾಕ್ಸಿನ್​ ಬೇಡವೆಂದು ನಿರಾಕರಿಸಿ ಮರವೇರಿದ ಘಟನೆ ನಡೆದಿದೆ. ಈಗಲೂ ಇಂತಹದ್ದೇ ಘಟನೆ ಪಾಂಡೀಚೇರಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ಕಿಟಕಿಯಿಂದ ಹಾರಿ ಪತ್ನಿ ಪರಾರಿ; ಹೆಂಡತಿಯ ಸುಳಿವು ನೀಡಿದವರಿಗೆ 5,000 ರೂ. ಬಹುಮಾನ ಘೋಷಿಸಿದ ಗಂಡ!

Published On - 9:45 am, Thu, 30 December 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ