AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​

ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​
ಮರವೇರಿ ಕುಳಿತ ವ್ಯಕ್ತಿ
TV9 Web
| Edited By: |

Updated on:Dec 30, 2021 | 10:01 AM

Share

ಕೊರೋನಾದಿಂದ ರಕ್ಷಣೆ ಪಡೆಯಲು ವ್ಯಾಕ್ಸಿನ್​​ ತೆಗೆದುಕೊಳ್ಳುವುದು ಒಳಿತು. ಸರ್ಕಾರವೂ ಪ್ರತಿಯೊಬ್ಬ ನಾಗರಿಕನೂ ಕೋವಿಡ್​ ವ್ಯಾಕ್ಸಿನ್​ ಪಡೆಯಬೇಕೆಂದು ನಿಯಮವನ್ನೂ ಮಾಡಿದೆ. ಆದರೆ ಇನ್ನೂ ಹಳ್ಳಿಗಳಲ್ಲಿ ವ್ಯಾಕ್ಸಿನ್​ಗೆ ಹೆದರಿ ದೂರ ಓಡುವವರಿದ್ದಾರೆ. ವ್ಯಾಕ್ಸಿನ್​ಗೆ ಹೆದರಿ ವ್ಯಕ್ತಿ ಮರವೇರಿ ಕುಳಿತ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. 

ವೀಡಿಯೋದಲ್ಲಿ ಆರೋಗ್ಯ ಕಾರ್ಯಕರ್ತೆಯರು ಮನೆಯ ಬಳಿ ವ್ಯಾಕ್ಸಿನ್​ ನೀಡಲು ಬಂದು ನಿಂತ ವೇಳೆ 40 ವರ್ಷದ  ವ್ಯಕ್ತಿ ಮರವೇರಿ ತುದಿಯಲ್ಲಿ ಹೋಗಿ ಕುಳಿತಿರುವುದನ್ನು ಕಾಣಬಹುದು.  ಅಲ್ಲೇ ಕುಳಿತುಕೊಂಡು ನನಗೆ ವ್ಯಾಕ್ಸಿನ್​ ಬೇಡ ಎಂದು ಕೂಗಿದ್ದಾನೆ. ನಾನು ನಿಮಗೆ ಸಿಗುವುದಿಲ್ಲ ಎಂದಿದ್ದಾನೆ. ಇದರಿಂದ ಆರೋಗ್ಯ ಕಾರ್ಯಕರ್ತೆಯರು ಏನೂ ಮಾಡಲಾಗದೆ ನಿಂತುಕೊಂಡಿದ್ದರು. ಪಾಂಡೀಚೇರಿ ಸರ್ಕಾರ 100 ರಷ್ಟು ವ್ಯಾಕ್ಸಿನೇಷನ್​ ಡ್ರೈವ್​ ನಡೆಸಲು ನಿರ್ಧರಿಸಿದೆ. ಆದ್ದರಿಂದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತೆಯರು ಮೊದಲ ಡೋಸ್​ ಮತ್ತು ಎರಡನೇ ಡೋಸ್​ಅನ್ನೂ ನೀಡುತ್ತಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿದೆ. ಹಲವರು ವ್ಯಾಕ್ಸಿನ್​ ತೆಗೆದುಕೊಳ್ಳಲು ಹೆದರಿ ಅಥವಾ ವ್ಯಾಕ್ಸಿನ್​ ಬೇಡವೆಂದು ನಿರಾಕರಿಸಿ ಮರವೇರಿದ ಘಟನೆ ನಡೆದಿದೆ. ಈಗಲೂ ಇಂತಹದ್ದೇ ಘಟನೆ ಪಾಂಡೀಚೇರಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ಕಿಟಕಿಯಿಂದ ಹಾರಿ ಪತ್ನಿ ಪರಾರಿ; ಹೆಂಡತಿಯ ಸುಳಿವು ನೀಡಿದವರಿಗೆ 5,000 ರೂ. ಬಹುಮಾನ ಘೋಷಿಸಿದ ಗಂಡ!

Published On - 9:45 am, Thu, 30 December 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ