AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​

ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​
ಮರವೇರಿ ಕುಳಿತ ವ್ಯಕ್ತಿ
TV9 Web
| Updated By: Digi Tech Desk|

Updated on:Dec 30, 2021 | 10:01 AM

Share

ಕೊರೋನಾದಿಂದ ರಕ್ಷಣೆ ಪಡೆಯಲು ವ್ಯಾಕ್ಸಿನ್​​ ತೆಗೆದುಕೊಳ್ಳುವುದು ಒಳಿತು. ಸರ್ಕಾರವೂ ಪ್ರತಿಯೊಬ್ಬ ನಾಗರಿಕನೂ ಕೋವಿಡ್​ ವ್ಯಾಕ್ಸಿನ್​ ಪಡೆಯಬೇಕೆಂದು ನಿಯಮವನ್ನೂ ಮಾಡಿದೆ. ಆದರೆ ಇನ್ನೂ ಹಳ್ಳಿಗಳಲ್ಲಿ ವ್ಯಾಕ್ಸಿನ್​ಗೆ ಹೆದರಿ ದೂರ ಓಡುವವರಿದ್ದಾರೆ. ವ್ಯಾಕ್ಸಿನ್​ಗೆ ಹೆದರಿ ವ್ಯಕ್ತಿ ಮರವೇರಿ ಕುಳಿತ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. 

ವೀಡಿಯೋದಲ್ಲಿ ಆರೋಗ್ಯ ಕಾರ್ಯಕರ್ತೆಯರು ಮನೆಯ ಬಳಿ ವ್ಯಾಕ್ಸಿನ್​ ನೀಡಲು ಬಂದು ನಿಂತ ವೇಳೆ 40 ವರ್ಷದ  ವ್ಯಕ್ತಿ ಮರವೇರಿ ತುದಿಯಲ್ಲಿ ಹೋಗಿ ಕುಳಿತಿರುವುದನ್ನು ಕಾಣಬಹುದು.  ಅಲ್ಲೇ ಕುಳಿತುಕೊಂಡು ನನಗೆ ವ್ಯಾಕ್ಸಿನ್​ ಬೇಡ ಎಂದು ಕೂಗಿದ್ದಾನೆ. ನಾನು ನಿಮಗೆ ಸಿಗುವುದಿಲ್ಲ ಎಂದಿದ್ದಾನೆ. ಇದರಿಂದ ಆರೋಗ್ಯ ಕಾರ್ಯಕರ್ತೆಯರು ಏನೂ ಮಾಡಲಾಗದೆ ನಿಂತುಕೊಂಡಿದ್ದರು. ಪಾಂಡೀಚೇರಿ ಸರ್ಕಾರ 100 ರಷ್ಟು ವ್ಯಾಕ್ಸಿನೇಷನ್​ ಡ್ರೈವ್​ ನಡೆಸಲು ನಿರ್ಧರಿಸಿದೆ. ಆದ್ದರಿಂದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತೆಯರು ಮೊದಲ ಡೋಸ್​ ಮತ್ತು ಎರಡನೇ ಡೋಸ್​ಅನ್ನೂ ನೀಡುತ್ತಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿದೆ. ಹಲವರು ವ್ಯಾಕ್ಸಿನ್​ ತೆಗೆದುಕೊಳ್ಳಲು ಹೆದರಿ ಅಥವಾ ವ್ಯಾಕ್ಸಿನ್​ ಬೇಡವೆಂದು ನಿರಾಕರಿಸಿ ಮರವೇರಿದ ಘಟನೆ ನಡೆದಿದೆ. ಈಗಲೂ ಇಂತಹದ್ದೇ ಘಟನೆ ಪಾಂಡೀಚೇರಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ಕಿಟಕಿಯಿಂದ ಹಾರಿ ಪತ್ನಿ ಪರಾರಿ; ಹೆಂಡತಿಯ ಸುಳಿವು ನೀಡಿದವರಿಗೆ 5,000 ರೂ. ಬಹುಮಾನ ಘೋಷಿಸಿದ ಗಂಡ!

Published On - 9:45 am, Thu, 30 December 21

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್