AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​

ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ.

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್​
ಮರವೇರಿ ಕುಳಿತ ವ್ಯಕ್ತಿ
TV9 Web
| Edited By: |

Updated on:Dec 30, 2021 | 10:01 AM

Share

ಕೊರೋನಾದಿಂದ ರಕ್ಷಣೆ ಪಡೆಯಲು ವ್ಯಾಕ್ಸಿನ್​​ ತೆಗೆದುಕೊಳ್ಳುವುದು ಒಳಿತು. ಸರ್ಕಾರವೂ ಪ್ರತಿಯೊಬ್ಬ ನಾಗರಿಕನೂ ಕೋವಿಡ್​ ವ್ಯಾಕ್ಸಿನ್​ ಪಡೆಯಬೇಕೆಂದು ನಿಯಮವನ್ನೂ ಮಾಡಿದೆ. ಆದರೆ ಇನ್ನೂ ಹಳ್ಳಿಗಳಲ್ಲಿ ವ್ಯಾಕ್ಸಿನ್​ಗೆ ಹೆದರಿ ದೂರ ಓಡುವವರಿದ್ದಾರೆ. ವ್ಯಾಕ್ಸಿನ್​ಗೆ ಹೆದರಿ ವ್ಯಕ್ತಿ ಮರವೇರಿ ಕುಳಿತ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಂಡೀಚೆರಿಯ ವಿಲ್ಲನೂರ್​ ಎನ್ನುವ ಗ್ರಾಮದಲ್ಲಿ ಮನೆಯ ಬಾಗಿಲಿಗೆ ಆರೋಗ್ಯ ಕಾರ್ಯಕರ್ತೆಯರು ಬಂದ ವೇಳೆ ವ್ಯಕ್ತಿ ಮನೆಯ ಎದುರಿದ್ದ ಮರವೇರಿ ಕುಳಿತಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. 

ವೀಡಿಯೋದಲ್ಲಿ ಆರೋಗ್ಯ ಕಾರ್ಯಕರ್ತೆಯರು ಮನೆಯ ಬಳಿ ವ್ಯಾಕ್ಸಿನ್​ ನೀಡಲು ಬಂದು ನಿಂತ ವೇಳೆ 40 ವರ್ಷದ  ವ್ಯಕ್ತಿ ಮರವೇರಿ ತುದಿಯಲ್ಲಿ ಹೋಗಿ ಕುಳಿತಿರುವುದನ್ನು ಕಾಣಬಹುದು.  ಅಲ್ಲೇ ಕುಳಿತುಕೊಂಡು ನನಗೆ ವ್ಯಾಕ್ಸಿನ್​ ಬೇಡ ಎಂದು ಕೂಗಿದ್ದಾನೆ. ನಾನು ನಿಮಗೆ ಸಿಗುವುದಿಲ್ಲ ಎಂದಿದ್ದಾನೆ. ಇದರಿಂದ ಆರೋಗ್ಯ ಕಾರ್ಯಕರ್ತೆಯರು ಏನೂ ಮಾಡಲಾಗದೆ ನಿಂತುಕೊಂಡಿದ್ದರು. ಪಾಂಡೀಚೇರಿ ಸರ್ಕಾರ 100 ರಷ್ಟು ವ್ಯಾಕ್ಸಿನೇಷನ್​ ಡ್ರೈವ್​ ನಡೆಸಲು ನಿರ್ಧರಿಸಿದೆ. ಆದ್ದರಿಂದ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತೆಯರು ಮೊದಲ ಡೋಸ್​ ಮತ್ತು ಎರಡನೇ ಡೋಸ್​ಅನ್ನೂ ನೀಡುತ್ತಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿದೆ. ಹಲವರು ವ್ಯಾಕ್ಸಿನ್​ ತೆಗೆದುಕೊಳ್ಳಲು ಹೆದರಿ ಅಥವಾ ವ್ಯಾಕ್ಸಿನ್​ ಬೇಡವೆಂದು ನಿರಾಕರಿಸಿ ಮರವೇರಿದ ಘಟನೆ ನಡೆದಿದೆ. ಈಗಲೂ ಇಂತಹದ್ದೇ ಘಟನೆ ಪಾಂಡೀಚೇರಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ಕಿಟಕಿಯಿಂದ ಹಾರಿ ಪತ್ನಿ ಪರಾರಿ; ಹೆಂಡತಿಯ ಸುಳಿವು ನೀಡಿದವರಿಗೆ 5,000 ರೂ. ಬಹುಮಾನ ಘೋಷಿಸಿದ ಗಂಡ!

Published On - 9:45 am, Thu, 30 December 21

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ