AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Crime: ಕ್ಷುಲ್ಲಕ ಕಾರಣಕ್ಕೆ ಮೂರು ಬಾಲಕರನ್ನು ಕೊಂದ ಭಾರತೀಯ ಮೂಲದ ವ್ಯಕ್ತಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು 2020 ರಲ್ಲಿ ಮೂವರು ಹದಿಹರೆಯದವರನ್ನು ಹತ್ಯೆಗೈದಿದ್ದಕ್ಕಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ.

California Crime: ಕ್ಷುಲ್ಲಕ ಕಾರಣಕ್ಕೆ ಮೂರು ಬಾಲಕರನ್ನು ಕೊಂದ ಭಾರತೀಯ ಮೂಲದ ವ್ಯಕ್ತಿ; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!
ಯುಎಸ್ ಯುವಕರು Image Credit source: India Times
ನಯನಾ ಎಸ್​ಪಿ
|

Updated on: May 26, 2023 | 12:58 PM

Share

ಕ್ಯಾಲಿಫೋರ್ನಿಯಾದಲ್ಲಿ (California) ನಡೆದ ಆಘಾತಕಾರಿ ಘಟನೆಯೊಂದರಲ್ಲಿ (Shocking Incident), ಭಾರತೀಯ ಮೂಲದ ವ್ಯಕ್ತಿಯೊಬ್ಬರು ತಮಾಷೆಗೆ ಡೋರ್‌ಬೆಲ್ ಮಾಡಿದ್ದಕ್ಕೆ ಮೂರೂ ಯುವಕರನ್ನು ಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಯುವಕರು ಆತನ ಮೇಲೆ ಚೇಷ್ಟೆ ನಡೆಸಿದಾಗ ಈ ದುರಂತ ಘಟನೆ ಸಂಭವಿಸಿದೆ. ದುರಂತ ಘಟನೆಯೊಂದರಲ್ಲಿ, ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು 2020 ರಲ್ಲಿ ಮೂವರು ಹದಿಹರೆಯದವರನ್ನು ಹತ್ಯೆಗೈದಿದ್ದಕ್ಕಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ.

45 ವರ್ಷದ ಅನುರಾಗ್ ಚಂದ್ರ ಅವರು 6 ಬಾಲಕರಿದ್ದ ಟೊಯೊಟಾ ಪ್ರಿಯಸ್ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದರು. ಈ ಡಿಕ್ಕಿಯಿಂದಾಗಿ ಟೊಯೊಟಾ ಕಾರು ಮರಕ್ಕೆ ಅಪ್ಪಳಿಸಿತು, ಇದರ ಪರಿಣಾಮವಾಗಿ ಮೂವರು ಸಾವನ್ನಪ್ಪಿದರು ಮತ್ತು ಇತರರಿಗೆ ಗಾಯಗಳಾಗಿತ್ತು. ರಿವರ್‌ಸೈಡ್ ಕೌಂಟಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಚಂದ್ರನ ಮೇಲೆ ಮೂರು ಪ್ರಥಮ ಹಂತದ ಕೊಲೆ ಮತ್ತು ಮೂರು ಕೊಲೆ ಯತ್ನದ ಆರೋಪದಡಿ ಶಿಕ್ಷೆ ವಿಧಿಸಲಾಗಿದೆ. ತೀರ್ಪುಗಾರರ ವಿಚಾರಣೆಯ ನಂತರ, ಅವರು ತಪ್ಪಿತಸ್ಥರೆಂದು ನಿರ್ಧರಿಸಿದರು.

ಚಂದ್ರ ಅವರ ಮೇಲೆ ಚೇಷ್ಟೆ ಮಾಡಬೇಕೆಂದು ಬಾಲಕರು ಆ ದಿನ ಸ್ಲೀಪ್ ಓವರ್ ಮಾಡಿದ್ದರು. ಅವರಲ್ಲೊಬ್ಬ ಚಂದ್ರ ಅವರ ಡೋರ್ ಬೆಲ್ ಬಾರಿಸಿ ಬೇಗನೆ ಕಾರಿಗೆ ಹಿಂತಿರುಗಿದನು. ಈಗಾಗಲೇ 20 ಬಿಯರ್ ಕುಡಿದಿದ್ದ ಚಂದ್ರ ಅವರಿಗೆ ಕೋಪ ನೆತ್ತಿಗೇರಿ ಕಾನೂನನ್ನು ಕೈಗೆ ತೆಗೆದುಕೊಳ್ಳುವ ನಿಧಾರವನ್ನು ಮಾಡಿದರು. ಚಂದ್ರ ಅವರನ್ನು ಹಿಂಬಾಲಿಸಿ ಉದ್ದೇಶಪೂರ್ವಕವಾಗಿ ಅವರ ವಾಹನಕ್ಕೆ ಡಿಕ್ಕಿ ಹೊಡೆದದ್ದು 3 ಬಾಲಕರ ಸಾವಿಗೆ ಕಾರಣವಾಯಿತು.

ಇದನ್ನೂ ಓದಿ: ಕೇರಳದಲ್ಲಿ ಆಘಾತಕಾರಿ ಘಟನೆ: ಟ್ರಾಲಿ ಬ್ಯಾಗ್​ನಲ್ಲಿತ್ತು ಖ್ಯಾತ ಹೋಟೆಲ್​ ಮಾಲೀಕನ ಶವ

ಈ ಪ್ರಕರಣವು ಅಜಾಗರೂಕ ಕ್ರಮಗಳಿಂದ ಉಂಟಾಗಬಹುದಾದ ದುರಂತ ಪರಿಣಾಮಗಳನ್ನು ಮತ್ತು ಒಳಗೊಂಡಿರುವ ಸಂಭಾವ್ಯ ಅಪಾಯಗಳನ್ನು ಪರಿಗಣಿಸುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್