ಒಂದೇ ಗಿಡದಲ್ಲಿ 1200 ಟೊಮೆಟೋ ಹಣ್ಣುಗಳನ್ನು ಬೆಳೆಸಿ ಗಿನ್ನಿಸ್​ ದಾಖಲೆ ನಿರ್ಮಿಸಿದ ವ್ಯಕ್ತಿ

ಇಲ್ಲೊಬ್ಬರು ಒಂದೇ ಕಾಂಡದ ಗಿಡದಲ್ಲಿ 1269 ಟೊಮೆಟೋ ಹಣ್ಣಗಳನ್ನು ಬೆಳೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಒಂದೇ ಗಿಡದಲ್ಲಿ 1200 ಟೊಮೆಟೋ ಹಣ್ಣುಗಳನ್ನು ಬೆಳೆಸಿ ಗಿನ್ನಿಸ್​ ದಾಖಲೆ ನಿರ್ಮಿಸಿದ ವ್ಯಕ್ತಿ
ಟೊಮಾಟೊ ಬೆಳೆದ ವ್ಯಕ್ತಿ
Follow us
|

Updated on:Mar 13, 2022 | 9:46 AM

ಕೊರೊನಾ ಆರಂಭವಾದಾಗಿನಿಂದ ಜನರು ಹೆಚ್ಚು ಮನೆಯಲ್ಲೇ ಇರುವಂತಾಗಿದೆ. ಹಲವರು ಹಲವು ರೀತಿಯ ಅಭ್ಯಾಸಗಳನ್ನು, ಹವ್ಯಾಸಗಳನ್ನು ಬೆಳೆಸಿಕೊಂಡಿದ್ದಾರೆ. ಇಲ್ಲೊಬ್ಬರು ವ್ಯಕ್ತಿ ತಮ್ಮ ಹವ್ಯಾಸದಿಂದ ಗಿನ್ನೀಸ್​ ರೆಕಾರ್ಡ್​ ಅನ್ನೇ ಮಾಡಿದ್ದಾರೆ, ಹೌದು ಯುಕೆಯ ನಿವಾಸಿ ಡೌಗ್ಲಾಶ್​ ಸ್ಮಿತ್​ ಎನ್ನುವವರು ಮನೆಯ ಟೆರೇಸ್​ ಮೇಲೆ ಟೊಮೆಟೋ ಗಿಡವನ್ನು ನೆಟ್ಟು ಒಂದೆ ಗಿಡದಿಂದ 2021ರಲ್ಲಿ 839 ಟೊಮೆಟೋ ಹಣ್ಣಗಳನ್ನು ಬೆಳೆಸಿ ದಾಖಲೆ ನಿರ್ಮಿಸಿದ್ದರು. ಇದೀಗ ಅದೇ ವ್ಯಕ್ತಿ ಒಂದೇ ಕಾಂಡದ ಗಿಡದಿಂದ 1269 ಟೊಮೆಟೋ ಹಣ್ಣಗಳನ್ನು ಬೆಳೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ತಮ್ಮದೇ ಹಳೆಯ ದಾಖಲೆಯನ್ನು ಮೀರಿಸಿದ್ದಾರೆ. ಸದ್ಯ ಇವರು ಬೆಳೆದ  ಟೊಮೊಟೋ ಗಿಡದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ.

2021ರ ಸೆಪ್ಟೆಂಬರ್​ನಲ್ಲಿ  ಟೊಮೆಟೋವನ್ನು ನೆಟ್ಟು ಬೆಳೆಸಲು ಆರಂಭಿಸಿದ್ದರು. ಇದೀಗ 1200ಕ್ಕೂ ಹೆಚ್ಚು ಟೊಮೆಟೊ ಹಣ್ಣಗಳನ್ನು ಬೆಳೆಸಿದ್ದಾರೆ. 2022 ಮಾರ್ಚ್​ 9 ರಂದು ಗಿನ್ನಿಸ್​ ವಲ್ರ್ಡ್​ ರೆಕಾರ್ಡ್​​ ಅಧಿಕೃತವಾಗಿ  ಹೊಸ ದಾಖಲೆ ನಿರ್ಮಿಸಿರುವುದರ ಕುರಿತು ಖಚಿತಪಡಿಸಿದೆ.

ಸ್ಮಿತ್​ ಟ್ವಿಟರ್​ನಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು ಜಗತ್ತಿನಾದ್ಯಂತ ವೈರಲ್​ ಆಗಿದೆ. ಟ್ವಿಟರ್​ನಲ್ಲಿ ಸ್ಮಿತ್​ಗೆ ಅಭಿನಂದನೆಗಳ ಮಹಾಪೂರವೇ ಬರುತ್ತಿದೆ. ಟೊಮೆಟೋ ಹಣ್ಣಗಳನ್ನು ನೋಡಿ ಬಳಕೆದಾರರೊಬ್ಬರು  ಇಂತಹ ಟೊಮಟೋ ಹಣ್ಣಗಳನ್ನು ಈವರೆಗೆ ನೋಡಿಯೇ ಇರಲಿಲ್ಲ ಎಂದು ಕಾಮೆಂಟ್​ ಮಾಡಿದ್ದಾರೆ.  ಸ್ಮಿತ್​ ಸುದ್ದಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ  ಮನೆಯ ಹಿತ್ತಲಿನಲ್ಲಿ 21 ಅಡಿ ಎತ್ತರದ​ ಸೂರ್ಯಕಾಂತಿ ಗಿಡವನ್ನು ಬೆಳೆದು ದಾಖಲೆ ನಿರ್ಮಿಸಿದ್ದರು. ಇದೀಗ ಒಂದೇ ಗಿಡದಲ್ಲಿ 1269 ಟೊಮೆಟೋ ಹಣ್ಣಗಳನ್ನು ಬೆಳೆದು ಗಿನ್ನಿಸ್​ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ:

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಪಿಂಕ್​ ಟೀ: ವಿಡಿಯೋ ನೋಡಿ

Published On - 9:43 am, Sun, 13 March 22

ಪೆಟ್ರೋಲ್​ ಬಂಕ್​ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಕೆಡವಿ ಹೊಡೆದ ವ್ಯಕ್ತಿ
ಪೆಟ್ರೋಲ್​ ಬಂಕ್​ನಲ್ಲಿ ಪ್ರೇಯಸಿಯನ್ನು ನೆಲಕ್ಕೆ ಕೆಡವಿ ಹೊಡೆದ ವ್ಯಕ್ತಿ
ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ
ಕಷ್ಟಪಟ್ಟು ನಡೆದು ಬಂದ ದರ್ಶನ್; ಈ ಬೆನ್ನು ನೋವು ಯಾರಿಗೂ ಬೇಡ
ಧೈರ್ಯಂ ಸರ್ವತ್ರ ಸಾಧನಂ; ಎರಡು ಹುಲಿಗಳನ್ನು ಹೆದರಿಸಿ ಓಡಿಸಿದ ಕರಡಿ
ಧೈರ್ಯಂ ಸರ್ವತ್ರ ಸಾಧನಂ; ಎರಡು ಹುಲಿಗಳನ್ನು ಹೆದರಿಸಿ ಓಡಿಸಿದ ಕರಡಿ
ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ
ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ಸಿಎಂ ಸ್ವಾಗತಕ್ಕೆ ಬಂದ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ನುಗ್ಗಿದರು
ಸಿಎಂ ಸ್ವಾಗತಕ್ಕೆ ಬಂದ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ನುಗ್ಗಿದರು
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್