AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನದ ಹಿಂದೆ ಅಂಟಿಕೊಂಡಿದ್ದ ಧೂಳಿನಲ್ಲಿ ಮೂಡಿದ ಅದ್ಭುತ ಚಿತ್ರಕಲೆ! ಕಲಾವಿದನ ಕೈ ಚಳಕಕ್ಕೆ ತಲೆ ಬಾಗಲೇಬೇಕು

ಭಾರತದ ಹೆಸರಾಂತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಯಾವಾಗಲೂ ಸಾಮಾಜಿಕ ಜಾಲತಾಣದಲ್ಲಿ   ಆಸಕ್ತಿದಾಯಕ ಪೋಸ್ಟ್,  ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ರೀತಿಯ ಸುಂದರ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಕಲಾವಿದರೊಬ್ಬರು ಧೂಳು ಹಿಡಿದ ಕಾರುಗಳ ಗ್ಲಾಸ್ಗಳಲ್ಲಿ ಅದ್ಭುತವಾಗಿ ಚಿತ್ರಗಳನ್ನು ಬಿಡಿಸುವ ದೃಶ್ಯವನ್ನು  ಕಾಣಬಹುದು. 

ವಾಹನದ ಹಿಂದೆ ಅಂಟಿಕೊಂಡಿದ್ದ ಧೂಳಿನಲ್ಲಿ ಮೂಡಿದ ಅದ್ಭುತ ಚಿತ್ರಕಲೆ! ಕಲಾವಿದನ ಕೈ ಚಳಕಕ್ಕೆ ತಲೆ ಬಾಗಲೇಬೇಕು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 28, 2023 | 2:44 PM

Share

ಸಾಮಾಜಿಕ ಜಾಲತಾಣವು ಪ್ರತಿಭೆಗಳನ್ನು ಪ್ರದರ್ಶಿಸಲಿರುವ ಒಂದು ಅದ್ಭುತ ವೇದಿಕೆಯಾಗಿದೆ. ಅದೆಷ್ಟೋ ಜನರು ತಮ್ಮ ಡಾನ್ಸ್, ಆಕ್ಟಿಂಗ್, ಚಿತ್ರಕಲೆ ಹೀಗೆ ತಮ್ಮ ಪ್ರತಿಭೆಗಳ ಕುರಿತ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.  ಈಗ ಅದೇ ರೀತಿ ಭಾರತದ ಹೆಸರಾಂತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು, ಭಾರತದ ಅದ್ಭುತ ಕಲಾವಿದರೊಬ್ಬರ ಕಲಾ ಪ್ರತಿಭೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆನಂದ್ ಮಹಿಂದ್ರಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಟಿವ್ ಆಗಿದ್ದು, ಪ್ರತಿನಿತ್ಯ ಇಂಟರೆಸ್ಟಿಂಗ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಅಂತಹದ್ದೇ ಕಲಾವಿದರೊಬ್ಬರು ಧೂಳು ಹಿಡಿದ ಕಾರ್ ಗ್ಲಾಸ್ ಮೇಲೆ ಅದ್ಭುತವಾದ ಚಿತ್ರಗಳನ್ನು ಮೂಡಿಸಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಕಲಾವಿದರ ಕೈ ಚಳಕಕ್ಕೆ ಎಲ್ರೂ ಫಿದಾ ಆಗಿದ್ದಾಗೆ.

ಈ ವಿಡಿಯೋವನ್ನು ಆನಂದ್ ಮಹೀಂದ್ರಾ  (@anandmahindra) ಅವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, “ಎಂತಹ ಅದ್ಭುತ ಪ್ರತಿಭೆ. ಕಲಾವಿದರು ಎಲ್ಲೆಲ್ಲೂ ಕಾಣಸಿಗುತ್ತಾರೆ, ಮತ್ತು ನಿಜವಾದ ಕಲಾವಿದನು ಪ್ರಪಂಚದ ಪ್ರತಿಯೊಂದು ವಸ್ತುವಿನಲ್ಲೂ ತನ್ನ ಕಲೆಯ ಚಿತ್ತಾರವನ್ನು ಮೂಡಿಸುತ್ತಾನೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು, ಧೂಳು ಹಿಡಿದ ಕಾರಿನ ಗ್ಲಾಸ್ ಮೇಲೆ ಅದ್ಭುತವಾದ ಚಿತ್ರಗಳನ್ನು ಬಿಡಿಸುವ ದೃಶ್ಯವನ್ನು ಕಾಣಬಹುದು. ವೈರಲ್ ವಿಡಿಯೋದಲ್ಲಿ ಕಲಾವಿದರೊಬ್ಬರು ಧೂಳು ಹಿಡಿದ ಕಾರುಗಳ ಗ್ಲಾಸ್ ಮೇಲೆ ಕೈ, ನಾಯಿ ಮರಿ, ಸೈನಿಕರು, ಆನೆ, ಮಂಗ ಸೇರಿದಂತೆ ಅದ್ಭುತ ಚಿತ್ರಗಳನ್ನು ತನ್ನ ಕೈಯಾರೆ ಬಿಡಿಸುವ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಿಮ್ಮ ರಾಜ್ಯದ ಆರ್ಥಿಕತೆ ನಡೆಯುತ್ತಿರುವುದು ನಮ್ಮಂತಹ ಕನ್ನಡ ಗೊತ್ತಿರದ ಜನರಿಂದ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಡಿಸೆಂಬರ್ 27 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕಿಂತೂ ಅಧಿಕ  ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅದ್ಭುತ ಕಲಾವಿದʼ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಭಾರತದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಕಲಾವಿದನ ಕ್ರಿಯೇಟಿವಿಟಿಗೆ ತಲೆಬಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ