AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಟ್‌ ಕ್ಲೋಸ್‌ ಆಯಿತೆಂದು ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್ ದಾಟಿದ ಸವಾರ; ವಿಡಿಯೋ ವೈರಲ್‌

ರೈಲ್ವೆ ಗೇಟ್‌ ಮುಚ್ಚಿದ ನಂತರವೂ ಕೆಲವೊಬ್ಬರು ಬೇಜವಾಬ್ದಾರಿಯಿಂದ ರೈಲ್ವೆ ಕ್ರಾಸಿಂಗ್‌ ದಾಟಲು ಯತ್ನಿಸಿರುವ ಘಟನೆಗಳನ್ನು ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ರೈಲ್ವೆ ಗೇಟ್‌ ಮುಚ್ಚಿದ್ದ ಸಂದರ್ಭದಲ್ಲಿ ಇನ್ನೂ ಎಷ್ಟು ಹೊತ್ತು ಇಲ್ಲೇ ಕಾಯುತ್ತ ನಿಲ್ಲೋದು ಎಂದು ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟಿದ್ದಾನೆ. ಸದ್ಯ ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈತನ ಭಂಡ ಧೈರ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಗೇಟ್‌ ಕ್ಲೋಸ್‌ ಆಯಿತೆಂದು ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್ ದಾಟಿದ ಸವಾರ; ವಿಡಿಯೋ ವೈರಲ್‌
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 07, 2025 | 5:28 PM

Share

ರೈಲ್ವೆ ಕ್ರಾಸಿಂಗ್‌ ಬಳಿ ರೈಲು ಅತ್ತಿಂದಿತ್ತ ಓಡಾಡುವ ಸಮಯದಲ್ಲಿ ಒಂದಷ್ಟು ಹೊತ್ತುಗಳ ಕಾಲ ರೈಲ್ವೆ ಗೇಟ್‌ ಮುಚ್ಚುತ್ತಾರೆ. ಹೀಗೆ ಹೆಚ್ಚು ಹೊತ್ತು ರೈಲ್ವೆ ಗೇಟ್‌ ಮುಚ್ಚಿದಾಗ ಒಂದಷ್ಟು ವಾಹನ ಸವಾರರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ರೈಲ್ವೆ ಗೇಟ್‌ ಮುಚ್ಚಿದ್ದ ಸಂದರ್ಭದಲ್ಲಿ ಅತ್ತಿಂದ ಇತ್ತ ಹೋಗಲು ಸಾಧ್ಯವಾಗದೆ ಇನ್ನೂ ಎಷ್ಟು ಹೊತ್ತು ಅಂತ ಇಲ್ಲೇ ಕಾಯುತ್ತ ನಿಲ್ಲೋದು, ಈ ಕಿರಿಕಿರಿಯೇ ಬೇಡ ಎನ್ನುತ್ತಾ ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟಿದ್ದಾನೆ. ಸದ್ಯ ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈತನ ದುಸ್ಸಾಹಸವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವ ಕೆಲವೊಂದು ದೃಶ್ಯಗಳು ನಮ್ಮನ್ನು ಬೆರಗು ಗೊಳಿಸುತ್ತವೆ. ಅಂತಹದ್ದೇ ದೃಶ್ಯವೊಂದು ವೈರಲ್‌ ಆಗಿದ್ದು, ರೈಲ್ವೆ ಗೇಟ್‌ ಮುಚ್ಚಿತ್ತು ಎಂದು ವ್ಯಕ್ತಿಯೊಬ್ಬ ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಡಿ ಹೋಗಿದ್ದಾನೆ.

ಇದನ್ನೂ ಓದಿ
Image
ಹೊಟ್ಟೆ ಎಷ್ಟೇ ದಪ್ಪವಿದ್ದರೂ ಕರಗಿಸಲು ಇಲ್ಲಿದೆ ಸರಳ ಉಪಾಯ
Image
ಈ ಒಣಹಣ್ಣನ್ನು ನೆನೆಸಿಟ್ಟು ತಿಂದರೆ ತೂಕ ಇಳಿಯೋದು ಗ್ಯಾರಂಟಿ
Image
ನೀರು ಕುಡಿದರೆ ತೂಕ ಕಡಿಮೆ ಆಗುತ್ತಾ? ತಜ್ಞರು ಹೇಳುವುದೇನು?
Image
ಮಕ್ಕಳಲ್ಲಿ ‘ಬೊಜ್ಜು’ ಬರುಲು ಪೋಷಕರೇ ಕಾರಣ, ಅದು ಹೇಗೆ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೈರಲ್‌ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟುತ್ತಿರುವ ದೃಶ್ಯವನ್ನು ಕಾಣಬಹುದು. ರೈಲ್ವೆ ಗೇಟ್‌ ಮುಚ್ಚಿದ್ದ ಸಂದರ್ಭದಲ್ಲಿ ಇನ್ನೂ ಎಷ್ಟು ಹೊತ್ತು ಇಲ್ಲೇ ಕಾಯುತ್ತ ನಿಲ್ಲೋದು ಎಂದು ಆತ ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟಿದ್ದಾನೆ.

ಇದನ್ನೂ ಓದಿ: ಹಸುವಿನೊಂದಿಗೆ ಮಿಲನವಾಗಲು ಹೋಗಿ ವೃದ್ಧನಿಗೆ ಗುದ್ದಿದ ಹೋರಿ, ರೈತನ ಪ್ರಾಣವೇ ಹೋಯ್ತು

ಮಾರ್ಚ್‌ 06 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5.5 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇವರಿಗೆಲ್ಲಾ ಸುರಕ್ಷತೆ ಮುಖ್ಯವಲ್ಲ ಎಂದು ಕಾಣುತ್ತದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಹುಶಃ ಈತ ಭಾರತದ ಐರನ್‌ ಮ್ಯಾನ್‌ ಇರ್ಬೇಕುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆತನಿಗೆ ಸಮಯ ವ್ಯರ್ಥ ಮಾಡುವುದು ಇಷ್ಟವಿಲ್ಲ ಎಂದು ಕಾಣಿಸುತ್ತದೆʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?