AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾವು ಸ್ವಲ್ಪ ಡಿಫರೆಂಟ್ ಕಣ್ರೀ, ಕೇಕ್ ಬದಲು ಪಪ್ಪಾಯಿ ಹಣ್ಣು ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ವ್ಯಕ್ತಿ

ಸಾಮಾನ್ಯವಾಗಿ ಬರ್ತ್ ಡೇ  ದಿನದಂದು ಬಹುತೇಕ ಎಲ್ಲರೂ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಮಾತ್ರ  ಕೇಕ್ ಬದಲಿಗೆ ಪಪ್ಪಾಯಿ ಹಣ್ಣು  ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. 

Viral Video: ನಾವು ಸ್ವಲ್ಪ ಡಿಫರೆಂಟ್ ಕಣ್ರೀ, ಕೇಕ್ ಬದಲು ಪಪ್ಪಾಯಿ ಹಣ್ಣು ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ವ್ಯಕ್ತಿ
ವೈರಲ್​​ ವಿಡಿಯೋ ಇಲ್ಲಿದೆ ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on: Apr 10, 2024 | 10:45 AM

Share

ಬರ್ತ್ ಡೇ, ಮದುವೆ ವಾರ್ಷಿಕೋತ್ಸವ ಸೇರಿದಂತೆ ಇತ್ಯಾದಿ ಸಂತೋಷದ ಕ್ಷಣಗಳಲ್ಲಿ ಕೇಕ್ ಕತ್ತರಿಸುವ ವಾಡಿಕೆ ಇದೆ. ಅದರಲ್ಲೂ ಹುಟ್ಟುಹಬ್ಬದ ಸಂಭ್ರಮದಂದು ಕೇಕ್ ಕತ್ತರಿಸದಿದ್ದರೆ, ಬರ್ತ್ಡೇ ಸೆಲೆಬ್ರೇಷನ್ ಪೂರ್ಣವಾಗುವುದಿಲ್ಲ. ಹೀಗಾಗಿ ಹೆಚ್ಚಿನವರು ಹುಟ್ಟುಹಬ್ಬದ ದಿನ ಕೇಕ್ ಕತ್ತರಿಸಿ, ಸಂಭ್ರಮಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ, ಕೇಕ್ ಎಲ್ಲರೂ ಕತ್ತರಿಸುತ್ತಾರೆ, ನಾವು ಸ್ವಲ್ಪ ಡಿಫರೆಂಟ್ ಎನ್ನುತ್ತಾ, ಪಪ್ಪಾಯಿ ಹಣ್ಣನ್ನು  ಕಟ್ ಮಾಡುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವೈರಲ್ ವಿಡಿಯೋವನ್ನು ಡಾ. ಕವಿತಾ (@dr.kavithaajay) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಕವಿತಾ ಅವರ ಪತಿ ಮಾಮೂಲಿ ಕೇಕ್ ಕಟ್ ಮಾಡುವ ಬದಲು ಪಪ್ಪಾಯಿ ಹಣ್ಣನ್ನು ಕತ್ತರಿಸುವ ಮೂಲಕ ಆರೋಗ್ಯಕರ ರೀತಿಯಲ್ಲಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದಂತಹ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 8.7 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದ್ದು, ಅನಾರೋಗ್ಯಕರ ಕೇಕ್ ಗಳ ಬದಲು ಈ ರೀತಿ ಹಣ್ಣುಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸುವುದು ತುಂಬಾನೇ ಒಳ್ಳೆಯದು ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ