AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

ಕೆಲವೊಂದು ಸ್ಟಂಟ್​ ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ
ಯುವಕನ ಸ್ಟಂಟ್​ ವಿಡಿಯೋ ವೈರಲ್​
shruti hegde
|

Updated on: May 18, 2021 | 3:44 PM

Share

ಯುವಕರ ಸಾಹಸದ ಸ್ಟಂಟ್​ ವಿಡಿಯೋಗಳು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಯಾವುದೇ ಸಾಧನವಿಲ್ಲದೇ ಅದೆಷ್ಟೋ ಎತ್ತರದ ಕಟ್ಟಡವನ್ನು ಹತ್ತುವ ಯುವಕ, ಅಷ್ಟೇ ಎತ್ತರದಿಂದ ಕೆಳಗೆ ಹಾರಿ ಸ್ಟಂಟ್​ ಮಾಡುವ ಬಾಲಕ. ಹೀಗೆ ಅನೇಕ ವಿಡಿಯೋಗಳನ್ನು ನೋಡಿಯೇ ಇರುತ್ತೀರಿ. ಕೆಲವೊಂದು ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನೀವು ವಿಡಿಯೋದಲ್ಲಿ ನೋಡಬಹುದು. ಯುವಕನೊಬ್ಬ ಸೈಕಲ್​ನೊಂದಿಗೆ ಸಾಹಸ ಮಾಡುತ್ತಾನೆ. ಸೈಕಲ್​ ಏರಿದ ಯುವಕ ಸೈಕಲ್​ನ ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ, ಹಿಂದಿನ ಚಕ್ರದ ಮೂಲಕವೇ ಚಲಿಸುತ್ತಾನೆ. ಸೇತುವೆಯಲ್ಲಿ ಸಾಗುವ ಯುವಕ ಸೇತುವೆಯ ಮಧ್ಯದ ಅಂತರವನ್ನು ತಪ್ಪಿಸಿ, ಸೈಕಲ್​ ಹೊಡೆಯುತ್ತಾನೆ. ವಿಡಿಯೋ ನೋಡುತ್ತಿದ್ದಂತೆ ಆಶ್ಚರ್ಯವೆನಿಸುತ್ತದೆ.

ಅಪಾಯಕಾರಿಯಾದ ವಿಡಿಯೋ ಇದಾಗಿದೆ. ಟ್ವಿಟರ್​ನಲ್ಲಿ ಪೋಸ್ಟ್​ ಆಗುತ್ತಿದ್ದಂತೆಯೇ 60,000ಕ್ಕೂ ಹೆಚ್ಚು ಜನರು ವಿಡಿಯೋವನ್ನು ವೀಕ್ಷಿಸಿದ್ದಾರೆ. ಇಂತಹ ಸ್ಟಂಟ್​ ಮಾಡಲು ಹೋಗಿ ಅದೆಷ್ಟೋ ಜನ ಜೀವ ಕಳೆದುಕೊಂಡಿದ್ದಾರೆ. ಇಂತಹ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಕುರಿತಾಗಿ ನೆಟ್ಟಿಗರು ಆಕ್ಷೇಪ ಹೊರಹಾಕಿದ್ದಾರೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್ ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ಈ ಹಿಂದೆ ನಡೆದಿತ್ತು. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿತ್ತು. ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಇದನ್ನೂ ಓದಿ: ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

Follow Us
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ