AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

ಕೆಲವೊಂದು ಸ್ಟಂಟ್​ ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ
ಯುವಕನ ಸ್ಟಂಟ್​ ವಿಡಿಯೋ ವೈರಲ್​
shruti hegde
|

Updated on: May 18, 2021 | 3:44 PM

Share

ಯುವಕರ ಸಾಹಸದ ಸ್ಟಂಟ್​ ವಿಡಿಯೋಗಳು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಯಾವುದೇ ಸಾಧನವಿಲ್ಲದೇ ಅದೆಷ್ಟೋ ಎತ್ತರದ ಕಟ್ಟಡವನ್ನು ಹತ್ತುವ ಯುವಕ, ಅಷ್ಟೇ ಎತ್ತರದಿಂದ ಕೆಳಗೆ ಹಾರಿ ಸ್ಟಂಟ್​ ಮಾಡುವ ಬಾಲಕ. ಹೀಗೆ ಅನೇಕ ವಿಡಿಯೋಗಳನ್ನು ನೋಡಿಯೇ ಇರುತ್ತೀರಿ. ಕೆಲವೊಂದು ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನೀವು ವಿಡಿಯೋದಲ್ಲಿ ನೋಡಬಹುದು. ಯುವಕನೊಬ್ಬ ಸೈಕಲ್​ನೊಂದಿಗೆ ಸಾಹಸ ಮಾಡುತ್ತಾನೆ. ಸೈಕಲ್​ ಏರಿದ ಯುವಕ ಸೈಕಲ್​ನ ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ, ಹಿಂದಿನ ಚಕ್ರದ ಮೂಲಕವೇ ಚಲಿಸುತ್ತಾನೆ. ಸೇತುವೆಯಲ್ಲಿ ಸಾಗುವ ಯುವಕ ಸೇತುವೆಯ ಮಧ್ಯದ ಅಂತರವನ್ನು ತಪ್ಪಿಸಿ, ಸೈಕಲ್​ ಹೊಡೆಯುತ್ತಾನೆ. ವಿಡಿಯೋ ನೋಡುತ್ತಿದ್ದಂತೆ ಆಶ್ಚರ್ಯವೆನಿಸುತ್ತದೆ.

ಅಪಾಯಕಾರಿಯಾದ ವಿಡಿಯೋ ಇದಾಗಿದೆ. ಟ್ವಿಟರ್​ನಲ್ಲಿ ಪೋಸ್ಟ್​ ಆಗುತ್ತಿದ್ದಂತೆಯೇ 60,000ಕ್ಕೂ ಹೆಚ್ಚು ಜನರು ವಿಡಿಯೋವನ್ನು ವೀಕ್ಷಿಸಿದ್ದಾರೆ. ಇಂತಹ ಸ್ಟಂಟ್​ ಮಾಡಲು ಹೋಗಿ ಅದೆಷ್ಟೋ ಜನ ಜೀವ ಕಳೆದುಕೊಂಡಿದ್ದಾರೆ. ಇಂತಹ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಕುರಿತಾಗಿ ನೆಟ್ಟಿಗರು ಆಕ್ಷೇಪ ಹೊರಹಾಕಿದ್ದಾರೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್ ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ಈ ಹಿಂದೆ ನಡೆದಿತ್ತು. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿತ್ತು. ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಇದನ್ನೂ ಓದಿ: ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ