AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಿಪ್​ ಟಿಪ್​ ಬರ್ಸಾ ಪಾನಿ’ ಹಾಡಿಗೆ ನೃತ್ಯ ಮಾಡಿದ್ದಾರಾ ಪಾಕಿಸ್ತಾನ ಸಂಸತ್ತಿನ ಸದಸ್ಯ: ವಿಡಿಯೋದ ಅಸಲಿಯತ್ತೇನು?

ಬಾಲಿವುಡ್​ನ ಹಿಟ್​ ಸಾಂಗ್​ ಟಿಪ್​ ಟಿಪ್​  ಬರ್ಸಾ ಪಾನಿ ಹಾಡಿಗೆ ವ್ಯಕ್ತಿಯೊಬ್ಬ ಮೈಮರೆತು ಹೆಜ್ಜೆ ಹಾಕಿದ್ದಾನೆ. ಈ ವಿಡಿಯೋದಲ್ಲಿರುವ ವ್ಯಕ್ತಿಯನ್ನು ಪಾಕಿಸ್ತಾನ ಅಸೆಂಬ್ಲಿಯ ಸಚಿವ ಅಮೀರ್ ಲಿಯಾಕತ್​​ ಹುಸೇನ್​ ಎನ್ನಲಾಗಿದೆ. 

'ಟಿಪ್​ ಟಿಪ್​ ಬರ್ಸಾ ಪಾನಿ' ಹಾಡಿಗೆ ನೃತ್ಯ ಮಾಡಿದ್ದಾರಾ ಪಾಕಿಸ್ತಾನ ಸಂಸತ್ತಿನ ಸದಸ್ಯ: ವಿಡಿಯೋದ ಅಸಲಿಯತ್ತೇನು?
TV9 Web
| Edited By: |

Updated on: Jan 07, 2022 | 10:32 AM

Share

ಬಾಲಿವುಡ್​ನ  ಹಾಡಿಗೆ ವ್ಯಕ್ತಿಯೊಬ್ಬ ನೃತ್ಯ ಮಾಡುತ್ತಿರುವ ವೀಡಿಯೋ ಸಾಮಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ.  ಬಾಲಿವುಡ್​ನ ಮೊಹ್ರಾ ಚಿತ್ರದ ಹಿಟ್​ ಸಾಂಗ್​ ಟಿಪ್​ ಟಿಪ್​  ಬರ್ಸಾ ಪಾನಿ ಹಾಡಿಗೆ ವ್ಯಕ್ತಿಯೊಬ್ಬ ಮೈಮರೆತು ಹೆಜ್ಜೆ ಹಾಕಿದ್ದಾನೆ. ಈ ವಿಡಿಯೋದಲ್ಲಿರುವ ವ್ಯಕ್ತಿಯನ್ನು ಪಾಕಿಸ್ತಾನ ಅಸೆಂಬ್ಲಿಯ ಸದಸ್ಯ ಅಮೀರ್ ಲಿಯಾಕತ್​​ ಹುಸೇನ್​ ಎನ್ನಲಾಗಿದೆ.  ಅಮೀರ್​ ಲಿಯಾಕತ್​  ಇಮ್ರಾನ್ ಖಾನ್​ ನೇತೃತ್ವದ  ಪಾಕಿಸ್ತಾನ್​ ತೆಹ್ರಿಕ್​ ಇ ಇನ್ಸಾಫ್​ ಪಕ್ಷದ ಸದಸ್ಯರಾಗಿದ್ದಾರೆ.  ಹಿಂದಿ ಹಾಡಿಗೆ ಡ್ಯಾನ್ಸ್​ ಮಾಡುತ್ತಿದ್ದ ವ್ಯಕ್ತಿಯನ್ನು ಅಮೀರ್​ ಎಂದುಕೊಂಡು ಪತ್ರಕರ್ತರೊಬ್ಬರು ವಿಡಿಯೋ ಶೇರ್​ ಮಾಡಿದ್ದರು. ಅವರ ಬಳಿಕ ವಿಡಿಯೋವನ್ನು ಸಾವಿರಾರು ಮಂದಿ ರೀ ಶೇರ್​ ಮಾಡಿದ್ದರು. ಹೀಗಾಗಿ ವಿಡಿಯೋ ಸಖತ್​ ವೈರಲ್​ ಆಗಿತ್ತು.

ಆದರೆ ವಿಡಿಯೋವನ್ನು ಪರಿಶೀಲಿಸಿದಾಗ ವಿಡಿಯೋದಲ್ಲಿರುವ ವ್ಯಕ್ತಿ ಡ್ಯಾನ್ಸ್ ಕೊರಿಯೋಗ್ರಾಫರ್​ ಶೊಯೆಬ್​ ಶಕೂರ್​ ಎಂದು ಗುರುತಿಸಲಾಗಿದೆ. ವಿಡಿಯೋವನ್ನು ಪಾಕಿಸ್ತಾನದ ಫೋಟೋಗ್ರಫಿ ಸ್ಟುಡಿಯೋವೊಂದು ಫೇಸ್ಬುಕ್​ನಲ್ಲಿ ಹಂಚಿಕೊಂಡಿತ್ತು. ಬಳಿಕ ಸ್ವತಃ ಶೊಯೆಬ್​ ಶಕೂರ್ ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಆದರೆ ವಿಡಿಯೋದಲ್ಲಿರುವ ವ್ಯಕ್ತಿಯನ್ನು ಶೊಯೆಬ್​ ಶಕೂರ್ ಎಂದು ಪತ್ರಕರ್ತರೊಬ್ಬರು ಬರೆದು ಟ್ವೀಟ್​ ಮಾಡಿದ್ದರು.  ವಿಡಿಯೋವನ್ನು ಮೊದಲು ಅಮೀರ್​ ಲಿಯಾಕತ್​ ಹೆಸರಿನಲ್ಲಿ ಹಂಚಿಕೊಂಡ ಪತ್ರಕರ್ತ ಅಮನ್​ ಮಲ್ಲಿಕ್​ ತಪ್ಪಾದ ಮಾಹಿತಿಯನ್ನು ಶೇರ್​ ಮಾಡಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ.

ಪಾಕಿಸ್ತಾನಿ ಸಚಿವರೆನ್ನುವ  ನಕಲಿ ವಿಡಿಯೋ ಹರಿದಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ  ಫವಾದ್​ ಚೌದರಿ ಅವರು ಈರುಳ್ಳಿ ಮತ್ತು ಬೆಳ್ಳುಳ್ಳಿಯ ಬೆಲೆ ಇಳಿಕೆಯಾಗಿದೆ ಎನ್ನುವಾಗ ಗೊಂದಲವಾಗಿ ಊಪ್ಸ್​ ಎಂದಿದ್ದಾರೆ ಎನ್ನುವ ವಿಡಿಯೋ ವೈರಲ್​ ಆಗಿತ್ತು. ಇದೀಗ ಅಮೀರ್​ ಲಿಯಾಕತ್ ಹಿಂದಿ ಹಾಡಿಗೆ​ ನೃತ್ಯ ಮಾಡುತ್ತಿದ್ದಾರೆ ಎನ್ನುವ ನಕಲಿ ವೀಡಿಯೋ ವೈರಲ್​ ಆಗಿದೆ. ಟ್ವಿಟರ್​ನಲ್ಲಿ ವಿಡಿಯೋ 8 ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

ವ್ಯಾಕ್ಸಿನೇಷನ್​ ಉತ್ತೇಜಿಸಲು 700 ಕುರಿಗಳನ್ನು ಸಿರಿಂಜ್​ ಆಕಾರದಲ್ಲಿ ನಿಲ್ಲಿಸಿ ಸಂದೇಶ ಸಾರಿದ ವ್ಯಕ್ತಿ

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ