AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಾಪ್​ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ: 30 ಲಕ್ಷ ರೂ.ಗೆ ಬೇಡಿಕೆ

ಕಿರು ಚಿತ್ರ ನಿರ್ಮಿಸಲು ಹಣ ಬೇಕೆಂದು ಯುವಕನೊಬ್ಬ ತಾನು ಕಿಡ್ನಾಪ್​ ಆಗಿದ್ದೇನೆ ಎಂದು ತಂದೆಗೆ ಮೆಸೇಜ್​ ಮಾಡಿ 30 ಲಕ್ಷ ರೂ ಗೆ ಬೇಡಿಕೆ ಇಟ್ಟ ಘಟನೆ ನಡೆದಿದೆ. 24 ವರ್ಷದ ಪಿ. ಕೃಷ್ಣಪ್ರಸಾದ್​ ಎನ್ನುವ ಯುವಕ ಈ ನಕಲಿ ಕಿಡ್ನಾಪ್​ ನಾಟಕವಾಡಿದ್ದಾನೆ.

ಕಿಡ್ನಾಪ್​ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ: 30 ಲಕ್ಷ ರೂ.ಗೆ ಬೇಡಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 19, 2022 | 12:20 PM

Share

ಚೆನ್ನೈ: ಕಿರು ಚಿತ್ರ ನಿರ್ಮಿಸಲು ಹಣ ಬೇಕೆಂದು ಯುವಕನೊಬ್ಬ ತಾನು ಕಿಡ್ನಾಪ್ (Kidnap)​ ಆಗಿದ್ದೇನೆ ಎಂದು ತಂದೆಗೆ ಮೆಸೇಜ್​ ಮಾಡಿ 30 ಲಕ್ಷ ರೂ ಗೆ ಬೇಡಿಕೆ ಇಟ್ಟ ಘಟನೆ ನಡೆದಿದೆ. 24 ವರ್ಷದ ಪಿ. ಕೃಷ್ಣಪ್ರಸಾದ್​ ಎನ್ನುವ ಯುವಕ ಈ ನಕಲಿ ಕಿಡ್ನಾಪ್ (Fake Kidnap)​ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್​ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್​ ಮಾಡಿ 30 ಲಕ್ಷ ರೂ ಗೆ ಬೇಡಿಕೆ ಇಟ್ಟಿದ್ದನು. ಕೃಷ್ಣಪ್ರಸಾದ್​ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು (Chennai City Police) ಕೃಷ್ಣಪ್ರಸಾದ್​ನನ್ನು ಸಿಂಕದರಾಬಾದ್​ನಲ್ಲಿ ಪತ್ತೆ ಮಾಡಿ  ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾರೆ. 

ನ್ಯೂಸ್​ 18 ವರದಿಯ ಪ್ರಕಾರ, ಕೃಷ್ಣಪ್ರಸಾದ್​ ತಂದೆ ಜ.14ರಂದು ಪೊಲೀಸರಿಗೆ ದೂರು ನೀಡುವ ವೇಳೆ, ಆತ ಹಿಂದಿನ ದಿನ ಮಾಲ್​ಗೆ​ ತೆರಳಿದ್ದನು ಮತ್ತೆ ಮನೆಗೆ ಮರಳಲಿಲ್ಲ. ಮರುದಿನ ಫೋನ್​ಗೆ ನಿಮ್ಮ ಮಗನನ್ನು ಕಿಡ್ನಾಪ್​ ಮಾಡಲಾಗಿದೆ ಆತನನ್ನು ಬಿಡುಗಡೆ ಮಾಡಲು 30 ಲಕ್ಷ ರೂ . ಹಣ ನೀಡಿ ಎಂಬ ಸಂದೇಶ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಲು ಸೈಬರ್​ ಕ್ರೈಮ್​ ಪೊಲೀಸರ ತಂಡವನ್ನು ರಚಿಸಿದ್ದರು. ನಂತರ ಮೆಸೆಜ್​ ಕಳುಹಿಸಿದ ಮೊಬೈಲ್​ ಲೊಕೇಷನ್​ ಹುಡುಕುವ ಮೂಲಕ ಸಿಕಂದರಾಬಾದ್​ನಲ್ಲಿ ಕೃಷ್ಣ ಪ್ರಸಾದ್​ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ.

ಮನೆಯಿಂದ ಹಣ ಪಡೆಯಲು ಅಥವಾ ತಮ್ಮ ಹೇಳಿಕೆಗಳನ್ನು ಈಡೇರಿಸಿಕೊಳ್ಳಲು ಈ ಹಿಂದೆಯೂ ಈ ರೀತಿಯ ನಕಲಿ ಅಪಹರಣ ಪ್ರಕರಣಗಳು ಸಾಕಷ್ಟು ನಡೆದಿವೆ.  ಈ ಹಿಂದೆ ಲುಧಿಯಾನದ ಅವಳಿ ಮಕ್ಕಳು ಸ್ನೇಹಿತರನ್ನು ಭೇಟಿಯಾಗಲು ಹೋದ ವೇಳೆ ತಮಾಷೆಗೆಂದು ತಾವು ಅಪಹರಣವಾಗಿದ್ದೇವೆ ಎಂದು ಕುಟುಂಬಕ್ಕೆ ತಿಳಿಸಿ ಎಂದು ಪೊಲೀಸರಿಗೆ ದೂರು ನೀಡಿದ್ದ ಘಟನೆ ನಡೆದಿತ್ತು.

ಇದನ್ನೂ ಓದಿ:

Viral Video: ಮೇರಿ ರಾಣಿ ಹಾಡಿಗೆ ಹೆಜ್ಜೆ ಹಾಕಿದ ದುಬೈನ ಮಹಿಳೆ ಮತ್ತು ಬಾಲಕಿ: ವಿಡಿಯೋ ಹಂಚಿಕೊಂಡ ನಟಿ ನೋರಾ ಫತೇಹಿ

Published On - 12:20 pm, Wed, 19 January 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ