AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಾಪ್​ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ: 30 ಲಕ್ಷ ರೂ.ಗೆ ಬೇಡಿಕೆ

ಕಿರು ಚಿತ್ರ ನಿರ್ಮಿಸಲು ಹಣ ಬೇಕೆಂದು ಯುವಕನೊಬ್ಬ ತಾನು ಕಿಡ್ನಾಪ್​ ಆಗಿದ್ದೇನೆ ಎಂದು ತಂದೆಗೆ ಮೆಸೇಜ್​ ಮಾಡಿ 30 ಲಕ್ಷ ರೂ ಗೆ ಬೇಡಿಕೆ ಇಟ್ಟ ಘಟನೆ ನಡೆದಿದೆ. 24 ವರ್ಷದ ಪಿ. ಕೃಷ್ಣಪ್ರಸಾದ್​ ಎನ್ನುವ ಯುವಕ ಈ ನಕಲಿ ಕಿಡ್ನಾಪ್​ ನಾಟಕವಾಡಿದ್ದಾನೆ.

ಕಿಡ್ನಾಪ್​ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ: 30 ಲಕ್ಷ ರೂ.ಗೆ ಬೇಡಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 19, 2022 | 12:20 PM

Share

ಚೆನ್ನೈ: ಕಿರು ಚಿತ್ರ ನಿರ್ಮಿಸಲು ಹಣ ಬೇಕೆಂದು ಯುವಕನೊಬ್ಬ ತಾನು ಕಿಡ್ನಾಪ್ (Kidnap)​ ಆಗಿದ್ದೇನೆ ಎಂದು ತಂದೆಗೆ ಮೆಸೇಜ್​ ಮಾಡಿ 30 ಲಕ್ಷ ರೂ ಗೆ ಬೇಡಿಕೆ ಇಟ್ಟ ಘಟನೆ ನಡೆದಿದೆ. 24 ವರ್ಷದ ಪಿ. ಕೃಷ್ಣಪ್ರಸಾದ್​ ಎನ್ನುವ ಯುವಕ ಈ ನಕಲಿ ಕಿಡ್ನಾಪ್ (Fake Kidnap)​ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್​ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್​ ಮಾಡಿ 30 ಲಕ್ಷ ರೂ ಗೆ ಬೇಡಿಕೆ ಇಟ್ಟಿದ್ದನು. ಕೃಷ್ಣಪ್ರಸಾದ್​ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು (Chennai City Police) ಕೃಷ್ಣಪ್ರಸಾದ್​ನನ್ನು ಸಿಂಕದರಾಬಾದ್​ನಲ್ಲಿ ಪತ್ತೆ ಮಾಡಿ  ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾರೆ. 

ನ್ಯೂಸ್​ 18 ವರದಿಯ ಪ್ರಕಾರ, ಕೃಷ್ಣಪ್ರಸಾದ್​ ತಂದೆ ಜ.14ರಂದು ಪೊಲೀಸರಿಗೆ ದೂರು ನೀಡುವ ವೇಳೆ, ಆತ ಹಿಂದಿನ ದಿನ ಮಾಲ್​ಗೆ​ ತೆರಳಿದ್ದನು ಮತ್ತೆ ಮನೆಗೆ ಮರಳಲಿಲ್ಲ. ಮರುದಿನ ಫೋನ್​ಗೆ ನಿಮ್ಮ ಮಗನನ್ನು ಕಿಡ್ನಾಪ್​ ಮಾಡಲಾಗಿದೆ ಆತನನ್ನು ಬಿಡುಗಡೆ ಮಾಡಲು 30 ಲಕ್ಷ ರೂ . ಹಣ ನೀಡಿ ಎಂಬ ಸಂದೇಶ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಲು ಸೈಬರ್​ ಕ್ರೈಮ್​ ಪೊಲೀಸರ ತಂಡವನ್ನು ರಚಿಸಿದ್ದರು. ನಂತರ ಮೆಸೆಜ್​ ಕಳುಹಿಸಿದ ಮೊಬೈಲ್​ ಲೊಕೇಷನ್​ ಹುಡುಕುವ ಮೂಲಕ ಸಿಕಂದರಾಬಾದ್​ನಲ್ಲಿ ಕೃಷ್ಣ ಪ್ರಸಾದ್​ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ.

ಮನೆಯಿಂದ ಹಣ ಪಡೆಯಲು ಅಥವಾ ತಮ್ಮ ಹೇಳಿಕೆಗಳನ್ನು ಈಡೇರಿಸಿಕೊಳ್ಳಲು ಈ ಹಿಂದೆಯೂ ಈ ರೀತಿಯ ನಕಲಿ ಅಪಹರಣ ಪ್ರಕರಣಗಳು ಸಾಕಷ್ಟು ನಡೆದಿವೆ.  ಈ ಹಿಂದೆ ಲುಧಿಯಾನದ ಅವಳಿ ಮಕ್ಕಳು ಸ್ನೇಹಿತರನ್ನು ಭೇಟಿಯಾಗಲು ಹೋದ ವೇಳೆ ತಮಾಷೆಗೆಂದು ತಾವು ಅಪಹರಣವಾಗಿದ್ದೇವೆ ಎಂದು ಕುಟುಂಬಕ್ಕೆ ತಿಳಿಸಿ ಎಂದು ಪೊಲೀಸರಿಗೆ ದೂರು ನೀಡಿದ್ದ ಘಟನೆ ನಡೆದಿತ್ತು.

ಇದನ್ನೂ ಓದಿ:

Viral Video: ಮೇರಿ ರಾಣಿ ಹಾಡಿಗೆ ಹೆಜ್ಜೆ ಹಾಕಿದ ದುಬೈನ ಮಹಿಳೆ ಮತ್ತು ಬಾಲಕಿ: ವಿಡಿಯೋ ಹಂಚಿಕೊಂಡ ನಟಿ ನೋರಾ ಫತೇಹಿ

Published On - 12:20 pm, Wed, 19 January 22

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ